ಅನಂತಕುಮಾರ್ ಅವರ ಸೇವಾಗುಣ ಎಲ್ಲರಿಗೂ ಪ್ರೇರಣೆ: ಬಸವರಾಜ ಬೊಮ್ಮಾಯಿ


Team Udayavani, Sep 22, 2021, 7:36 PM IST

ಅನಂತಕುಮಾರ್ ಅವರ ಸೇವಾಗುಣ ಎಲ್ಲರಿಗೂ ಪ್ರೇರಣೆ: ಬಸವರಾಜ ಬೊಮ್ಮಾಯಿ

ಬೆಂಗಳೂರು : ಅನಂತಕುಮಾರ್ ಅವರ ಜೀವನ ಹಾಗೂ ಸೇವಾಗುಣ ಎಲ್ಲರಿಗೂ ಪ್ರೇರಣೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅದಮ್ಯ ಚೇತನ, ಅನಂತಕುಮಾರ ಪ್ರತಿಷ್ಠಾನ ಆಯೋಜಿಸಿದ್ದ ಕೇಂದ್ರದ ಮಾಜಿ ಸಚಿವ ದಿವಂಗತ ಎಚ್ ಎನ್ ಅನಂತಕುಮಾರ್ ಅವರ 62ನೆ ಜನ್ಮ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಡಿಯೋ ಸಂವಾದದ ಮೂಲಕ ಭಾಗವಹಿಸಿ ಅವರು ಮಾತನಾಡಿದರು.

ಅನಂತಕುಮಾರ್ ಅವರದು ಚೈತನ್ಯಶೀಲ, ಪ್ರೇರಣಾದಾಯಕ ವ್ಯಕ್ತಿತ್ವ. ಕಾಲೇಜು ದಿನಗಳಿಂದಲೂ ಸಂಘಟನಾ ಚತುರರಾಗಿ ವೈಚಾರಿಕವಾಗಿ ಸ್ಪಷ್ಟತೆಯನ್ನು ಹೊಂದಿದ್ದರು. ಕೇಂದ್ರಸರ್ಕಾರದ ದಿಟ್ಟ ನಿರ್ಧಾರಗಳಾದ ಸಂವಿಧಾನದ 370 ನೆ ವಿಧಿ ರದ್ದು, ಜಿಎಸ್‌ಟಿ ಮಸೂದೆ ಕರಡು ರಚಿಸುವುದರಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದರು.

ಅದಮ್ಯ ಚೇತನ ಸೇವಾ ಸಂಸ್ಥೆ, ಮಧ್ಯಾಹ್ನದ ಊಟ ಹಾಗೂ ಶಾಲಾ ಮಕ್ಕಳಿಗೆ ಆಹಾರ ಸುರಕ್ಷತೆ ನೀಡುವ ಸಾರ್ಥಕ ಕಾರ್ಯ ಮಾಡುತ್ತಿದ್ದು, ರಾಜಸ್ತಾನ, ಕರ್ನಾಟಕ ಹಾಗೂ ಇತರ ರಾಜ್ಯಗಳಲ್ಲಿ ಸಂಸ್ಥೆ ಬೆಳೆದು ನಿಂತಿದೆ. ‘ಲಕ್ಷಾಂತರ ಮಕ್ಕಳಿದ್ದಾರೆ ಅವರು ನನ್ನ ಮಕ್ಕಳು. ಅವರಿಗೆ ಆಹಾರವನ್ನು ಕೊಡುವುದು ನನ್ನ ಕೆಲಸ’ ಎಂಬ ಅನಂತಕುಮಾರ್ ಅವರ ನುಡಿಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ಸಸ್ಯಾಗ್ರಹ ಕಾರ್ಯಕ್ರಮದಿಂದ ಬೆಂಗಳೂರು ನಗರದಲ್ಲಿ ಸಸಿಗಳನ್ನು ನೆಡುವ ಮುಖಾಂತರ ಒಂದು ಆಂದೋಲನ ರೂಪಿಸಿದರು ಎಂದರು.

ಇದನ್ನೂ ಓದಿ :ಕೋವಿಡ್ : ರಾಜ್ಯದಲ್ಲಿಂದು 847 ಹೊಸ ಪ್ರಕರಣ : 946 ಸೋಂಕಿತರು ಗುಣಮುಖ

ಸಾಧನಿಕಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಅವರು ಬದುಕುತ್ತಾರೆ ವಿವೇಕಾನಂದರು ಹೇಳಿದಂತೆ ಸಾಧನಿಕಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಅವರು ಬದುಕುತ್ತಾರೆ. ಅನಂತಕುಮಾರ್ ಅವರ ಸೇವಾ ಜೀವನ , ಅವರ ಸೇವಾ ಗುಣ ಮತ್ತು ಅವರ ಸಂಬಂಧಗಳೆಲ್ಲವೂ ಸೇವೆಯಿಂದ ಕೂಡಿದೆ. ರಾಜಕಾರಣಿಗೆ ಕೇವಲ ರಾಜಕಾರಣ, ಸರ್ಕಾರದ ಕೆಲಸದ ಜೊತೆಗೆ ಜನಪರ ಕೆಲಸ ಮಾಡಿದರೆ ಅವರೆಂದೂ ನಿವೃತ್ತಿ ಆಗುವುದಿಲ್ಲ ಅಥವಾ ಬಳಲುವುದೂ ಇಲ್ಲ. ಆ ಕೆಲಸವನ್ನು ಅನಂತಕುಮಾರ್ ಮಾಡಿದ್ದಾರೆ. ರಾಷ್ಟಮಟ್ಟದಲ್ಲಿ ವಾಜಪೇಯಿಯವರ ನೇತೃತ್ವದಲ್ಲಿ ಭೂಮಿಯಿಂದ ಆಕಾಶದವರೆಗೂ ಅವರ ಸೇವೆ ಇದೆ. ಬೇವುಲೇಪಿತ ಯೂರಿಯಾ, ಕಡಿಮೆ ಬೆಲೆಯಲ್ಲಿ ಗೊಬ್ಬರ , ಜನೌಷಧ ಕೇಂದ್ರ ಹೀಗೆ ಅನೇಕ ಕಾರ್ಯಕ್ರಮಗಳನ್ನು ದೇಶದ ಜನರಿಗೆ ನೀಡಿದ್ದಾರೆ.

ಸದಾ ಕಾಲ ಪ್ರರಣೆ ನೀಡುವ ಅನಂತಕುಮಾರ್ ಅವರು ಹಾಕಿಕೊಟ್ಟ ಸೇವಾ ಗುಣದ ಮಾರ್ಗದಲ್ಲಿ ನಡೆಯುವ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಬೇಕು . ಜನಸೇವೆಯ ಹಾದಿಯಲ್ಲಿಯೇ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರು ನಡೆಯುತ್ತಿದ್ದಾರೆ. ಅದಮ್ಯ ಚೇತನ ಅನಂತಕುಮಾರ್ ಸೇವಾ ಪ್ರತಿಷ್ಠಾನದ ಸಮಾಜಮುಖಿ ಕಾರ್ಯಕ್ರಮಕ್ಕೆ ಸರ್ಕಾರದ ಬೆಂಬಲ ಸದಾ ಇರಲಿದೆ ಎಂದರು.

ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ವಿ. ಸೋಮಣ್ಣ, ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ತೇಜಸ್ವಿನಿ ಅನಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.