ಸೋಂಕು ಪ್ರಮಾಣ ಇಳಿಮುಖ : ಸರಕಾರಿ ಆಸ್ಪತ್ರೆಗಳಲ್ಲೇ ಖಾಲಿ ಇವೆ ಸಾವಿರಾರು ಹಾಸಿಗೆ


Team Udayavani, Jun 2, 2021, 9:00 AM IST

ಸೋಂಕು ಪ್ರಮಾಣ ಇಳಿಮುಖ : ಸರಕಾರಿ ಆಸ್ಪತ್ರೆಗಳಲ್ಲೇ ಖಾಲಿ ಇವೆ ಸಾವಿರಾರು ಹಾಸಿಗೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರದಿಂದ ಸೋಂಕು ಇಳಿಮುಖವಾಗುತ್ತಿದ್ದು, ಆರಂಭ ದಲ್ಲಿ ಇದ್ದ ನಿಯಮವನ್ನೇ ಮರುಜಾರಿ ಗೊಳಿಸಿದರೆ ಹೊಸ ಕೊರೊನಾ ಪೀಡಿತರ ಚಿಕಿತ್ಸೆಗೆ ಸರಕಾರಿ ಆಸ್ಪತ್ರೆಗಳ ಹಾಸಿಗೆಗಳೇ ಸಾಕಾಗಲಿವೆ.

ಸದ್ಯ ಸರಕಾರಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಮತ್ತು ಆಮ್ಲಜನಕ ವ್ಯವಸ್ಥೆ ಇರುವ ಹತ್ತು ಸಾವಿರಕ್ಕೂ ಅಧಿಕ ಹಾಸಿಗೆಗಳು ಖಾಲಿ ಇವೆ. ಈ ನಿಟ್ಟಿನಲ್ಲಿ ಜಿಲ್ಲೆಗಳಲ್ಲಿ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸರಕಾರಿ ಆಸ್ಪತ್ರೆ ಹಾಸಿಗೆ ಭರ್ತಿ ಆದ ಬಳಿಕವೇ ಖಾಸಗಿ ಆಸ್ಪತ್ರೆಗೆ ದಾಖಲಿಸಬಹುದೆಂಬ ನಿಯಮ ವನ್ನು ಆರೋಗ್ಯ ಇಲಾಖೆ ಮರು ಜಾರಿಗೊಳಿಸಿದರೆ ಸರಕಾರಿ ಆಸ್ಪತ್ರೆಗಳು ಭರ್ತಿಯಾಗಲಿವೆ. ಜತೆಗೆ ಸೋಂಕು ಪೀಡಿತರ ಆರ್ಥಿಕ ಹೊರೆಯೂ ತಗ್ಗಲಿದೆ. ಇದರೊಂದಿಗೆ ಕೊರೊನೇತರ ರೋಗಿ ಗಳ ಚಿಕಿತ್ಸೆಗೂ ಅನುಕೂಲವಾಗಲಿದೆ.

ಎಪ್ರಿಲ್‌ಗ‌ೂ ಮುನ್ನ ಸರಕಾರಿ ಆಸ್ಪತ್ರೆ ಹಾಸಿಗೆಗಳು ಭರ್ತಿಯಾದ ಅನಂತರವೇ ಖಾಸಗಿ ಆಸ್ಪತ್ರೆಗೆ ದಾಖಲಿಸಬೇಕೆಂಬ ನಿಯಮ ಜಾರಿ ಯಲ್ಲಿತ್ತು. ಸೋಂಕು ತೀವ್ರಗೊಂಡ ಹಿನ್ನೆಲೆಯಲ್ಲಿ ಮಾರ್ಪಡಿಸಲಾಯಿತು. ಖಾಸಗಿ ಆಸ್ಪತ್ರೆಗಳಲ್ಲಿ ಸರಕಾರಿ ಮೀಸಲಿನಲ್ಲಿ ದಾಖಲಾಗುವ ರೋಗಿಗೆ ಪ್ರತೀ ದಿನ ಆಮ್ಲಜನಕ ಹಾಸಿಗೆಗೆ 8,000 ರೂ., ಸಾಮಾನ್ಯ ಹಾಸಿಗೆಗೆ 5,200 ರೂ. ವೆಚ್ಚ ಭರಿಸಲಾಗುತ್ತಿದೆ.
ಸದ್ಯ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕುಪೀಡಿತರ ಚಿಕಿತ್ಸೆಗೆ ಸರಕಾರ 62,189 ಹಾಸಿಗೆ ಮೀಸಲಿರಿಸಿದೆ. 29,508 ಭರ್ತಿ ಯಾಗಿದ್ದು, 32,681 ಖಾಲಿ ಇವೆ. 21 ಸಾವಿರ ಸಾಮಾನ್ಯ, 13 ಸಾವಿರ ಆಮ್ಲಜನಕ, 550 ವೆಂಟಿಲೇಟರ್‌, 450 ಐಸಿಯು ಹಾಸಿಗೆಗಳು ಖಾಲಿ ಇವೆ. ಸರಕಾರಿ ಆಸ್ಪತ್ರೆಗಳಲ್ಲೇ 4,900 ಸಾಮಾನ್ಯ, 5100 ಆಮ್ಲಜನಕ, 271 ವೆಂಟಿಲೇಟರ್‌, 308 ಐಸಿಯು ಹಾಸಿಗೆಗಳು ಖಾಲಿ ಇವೆ.

ಕೊರೊನೇತರರಿಗೆ ನೀಡಿ
ಎರಡು ತಿಂಗಳಿಂದ ಆಸ್ಪತ್ರೆಗಳಲ್ಲಿ ಶೇ.75ರಷ್ಟು ಹಾಸಿಗೆಗಳನ್ನು ಕೊರೊನಾಗೆ ಮೀಸಲಿಡಲಾಗಿದೆ. ಕೇರ್‌ ಸೆಂಟರ್‌, ಮನೆ ಆರೈಕೆ ಹಿನ್ನೆಲೆ ಸಾಮಾನ್ಯ ಹಾಸಿಗೆಗೆ ಬೇಡಿಕೆ ಇಲ್ಲ. ಸರಕಾರಿ ಆಸ್ಪತ್ರೆಗಳಲ್ಲಿ ಐದು ಸಾವಿರ, ಖಾಸಗಿಯಲ್ಲಿ 15 ಸಾವಿರ ಖಾಲಿ ಇದ್ದು, ಕೊರೊನೇತರ ರೋಗಿಗಳ ಚಿಕಿತ್ಸೆಗೆ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ.

ಈ ಮಧ್ಯೆಯೇ, ಏಳು ಸಾವಿರಕ್ಕೂ ಅಧಿಕ ಸೋಂಕುಪೀಡಿತರು ಸರಕಾರಿ ಆಸ್ಪತ್ರೆ, ಸರಕಾರಿ ಕೋಟಾ ಬೇಡ ಎಂದು ಖಾಸಗಿ ಆಸ್ಪತ್ರೆಗಳಲ್ಲಿ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲೂ ಎರಡೂವರೆ ಸಾವಿರಕ್ಕೂ ಅಧಿಕ ಮಂದಿ ಸಾಮಾನ್ಯ ಹಾಸಿಗೆಗಳಲ್ಲಿದ್ದಾರೆ. ಬೆಂಗಳೂರಿನಲ್ಲಿ ಮೇ ಮೊದಲ ವಾರ ಸೋಂಕುಪೀಡಿತರು ಆಸ್ಪತ್ರೆ ಹಾಸಿಗೆಗಾಗಿ ಪರದಾಡುತ್ತಿದ್ದರು. ಈಗ ಎರಡೂವರೆ ಸಾವಿರ ಆಮ್ಲಜನಕ ಹಾಸಿಗೆ ಸೇರಿದಂತೆ ಎಂಟು ಸಾವಿರಕ್ಕೂ ಅಧಿಕ ಹಾಸಿಗೆಗಳು ಖಾಲಿ ಇವೆ. ಮೀಸಲಿಟ್ಟ 13,383ರಲ್ಲಿ ಕೇವಲ 4,920 ಮಾತ್ರ ಭರ್ತಿಯಾಗಿವೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.