Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ರದ್ದುಗೊಳಿಸಿದ ಹೈ ಕೋರ್ಟ್‌

Team Udayavani, Jul 6, 2024, 7:35 AM IST

High-Court

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಎಸ್ಟೇಟ್‌ ರೂರಲ್‌ ಇಂಡಸ್ಟ್ರಿ ಅಸೋಸಿಯೇಷನ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಗೆ ಸೇರಿದ ಪ್ಲಾಂಟೇಷನ್‌ ಲ್ಯಾಂಡ್‌ (ತೋಟದ ಜಮೀನು)ಗೆ ಸಂಬಂಧಿಸಿದ ದಶಕಗಳ ವಿವಾದಕ್ಕೆ ಹೈಕೋರ್ಟ್‌ ತೆರೆ ಎಳೆದಿದ್ದು, ಈ ಜಮೀನನ್ನು ತನ್ನ ಸ್ವಾಧೀನದಲ್ಲಿಟ್ಟುಕೊಳ್ಳಲು ಸಂಸ್ಥೆಗೆ ಕಾನೂನಿನ ಯಾವುದೇ ಅಡ್ಡಿ ಇಲ್ಲ ಎಂದು ಹೇಳಿದೆ.

ನೆರಿಯ ಎಸ್ಟೇಟ್‌ ರೂರಲ್‌ ಇಂಡಸ್ಟ್ರಿ ಅಸೋಸಿಯೇಷನ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಗೆ ಸೇರಿದ ಜಮೀನು ಸರಕಾರದ ಸ್ವಾಧೀನದಲ್ಲಿದೆ ಎಂದು ಹೇಳಲಿಕ್ಕಾಗದು ಎಂದು ಹೇಳಿರುವ ಹೈಕೋರ್ಟ್‌, ಈ ಜಮೀನಿನ ಮೇಲೆ ಸರಕಾರ ಯಾವುದೇ ಮಾಲಕತ್ವ ಅಥವಾ ಸ್ವಾಧೀನದ ಹಕ್ಕು ಹೊಂದುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ನ್ಯಾಯಾಲಯದ ನಿರ್ದೇಶನದಂತೆ ತಮ್ಮ ಜಮೀನನ್ನು ವಶಪಡಿಸಿಕೊಂಡು ಸರಕಾರದ ಸ್ವಾಧೀನಕ್ಕೆ ಒಪ್ಪಿಸಬೇಕು ಎಂದು ತಹಶೀಲ್ದಾರರಿಗೆ ಸೂಚನೆ ಕೊಟ್ಟು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ 2008ರ ಜ. 17ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ನೆರಿಯ ಎಸ್ಟೇಟ್‌ ರೂರಲ್‌ ಇಂಡಸ್ಟ್ರಿ ಅಸೋಸಿಯೇಷನ್‌ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ನೆರಿಯ ಗೋಪಾಲಕೃಷ್ಣ ಹೆಬ್ಟಾರ್‌ ಮೇಲ್ಮನವಿ ಸಲ್ಲಿಸಿದ್ದರು.

ಈ ಮೇಲ್ಮನವಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿತು. ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಜಿಲ್ಲಾಧಿಕಾರಿಗಳ ಆದೇಶವನ್ನು ಎತ್ತಿ ಹಿಡಿದು 2017ರ ಮೇ 29ರಂದು ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಮತ್ತು ಈ ಹಿಂದೆ ನ್ಯಾಯಾಲಯ ನೀಡಿದ್ದ ಆದೇಶದಂತೆ 2007ರ ಆಗಸ್ಟ್‌ 21ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದೆ.
ಮುಂದಿನ ಮೂರು ತಿಂಗಳಲ್ಲಿ ಮೇಲ್ಮನವಿದಾರರ ಹೆಸರನ್ನು ಕಂದಾಯ ದಾಖಲೆಗಳಲ್ಲಿ ಸೇರಿಸಬೇಕು ಎಂದೂ ಹೈಕೋರ್ಟ್‌ ಆದೇಶಿಸಿದೆ. ಮೇಲ್ಮನವಿದಾರರ ಪರ ಹಿರಿಯ ನ್ಯಾಯವಾದಿಗಳಾದ ಬಿ.ವಿ. ಆಚಾರ್ಯ ಮತ್ತು ಬಿ.ಎಲ್‌. ಆಚಾರ್ಯ ವಾದ ಮಂಡಿಸಿದ್ದರು.

ಭೂಸ್ವಾಧೀನದ ಹಕ್ಕು ಪ್ರತಿಪಾದಿಸಿ ಸಂಸ್ಥೆಯು ಅರ್ಜಿ ನಮೂನೆ-7 ಅನ್ನು ಸಲ್ಲಿಸಿತ್ತು. ಭೂ ಸುಧಾರಣ (ತಿದ್ದುಪಡಿ) ಕಾಯ್ದೆ 1974ರ ಸೆಕ್ಷನ್‌ (2) (34) ಪ್ರಕಾರ ಕಂಪೆನಿಗಳು ಭೂ ಹಿಡುವಳಿದಾರರು ಆಗುವಂತಿಲ್ಲ ಎಂಬ ಕಾರಣ ನೀಡಿ ಭೂ ನ್ಯಾಯ ಮಂಡಳಿ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಅರ್ಜಿ ನಮೂನೆ-7 ಅನ್ನು ತಿರಸ್ಕರಿಸಿದ್ದು ಸರಿಯೋ ತಪ್ಪೋ ಅನ್ನುವುದನ್ನು ನಿರ್ಧರಿಸುವ ಬದಲು ನ್ಯಾಯಾಲಯ ಜಮೀನು ಸರಕಾರಕ್ಕೆ ಸೇರಿದ್ದು ಎಂದು ಹೇಳಿತು.

ಜಮೀನಿನ ಸ್ವಾಧೀನದ ಹಕ್ಕು ನಿರ್ಧರಿಸುವ ಅಧಿಕಾರ ಭೂ ನ್ಯಾಯ ಮಂಡಳಿಗೆ ಮಾತ್ರ ಇರುವುದು. ಹಾಗಾಗಿ, ಜಮೀನಿನ ಸರಕಾರದ ಸ್ವಾಧೀನದ ಬಗ್ಗೆ ಹಿಂದಿನ ವ್ಯಾಜ್ಯಗಳಲ್ಲಿ ಏಕಸದಸ್ಯ ಮತ್ತು ವಿಭಾಗೀಯ ನ್ಯಾಯಪೀಠ ಹೇಳಿರುವುದನ್ನು ಸಾಂದರ್ಭಿಕ ಅಭಿಪ್ರಾಯ ಎಂದು ಪರಿಗಣಿಸಿ, ಸ್ವತಂತ್ರ ಅಭಿಪ್ರಾಯದ ಆಧಾರದಲ್ಲಿ ಈ ಮೇಲ್ಮನವಿಗೆ ಸಂಬಂಧಿಸಿದಂತೆ ತೀರ್ಪು ನೀಡಬೇಕಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

ಟಾಪ್ ನ್ಯೂಸ್

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

Exam

Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ

muniratna

Munirathna ಡಿಎನ್‌ಎ, ಜಾಮೀನು ಅರ್ಜಿ ವಿಚಾರಣೆ ಅ. 8ಕ್ಕೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

arest

BC Road: ಕಳವಾದ ಸ್ಕೂಟರ್‌ ಪತ್ತೆ; ಆರೋಪಿ ಬಂಧನ

Vitla: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಾಯ

Vitla: ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರನಿಗೆ ಗಾಯ

12-bantwala

Sand Mining: ಬಂಟ್ವಾಳ ಅಕ್ರಮ ಮರಳು ಅಡ್ಡೆಗೆ ದಾಳಿ; 20 ದೋಣಿ ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

Exam

Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.