ಪಬ್‌ ನಲ್ಲಿ ಕನ್ನಡ ಹಾಡು ಹಾಕಿ ಎಂದಿದಕ್ಕೆ ಮಹಿಳೆ ಮೇಲೆ ಡಿ.ಜೆ.ಯಿಂದ ಹಲ್ಲೆ


Team Udayavani, Feb 6, 2022, 9:46 PM IST

dj

ಬೆಂಗಳೂರು: ಕನ್ನಡ ಹಾಡು ಪ್ರಸಾರ ಮಾಡುವಂತೆ ಹೇಳಿದಕ್ಕೆ ಡಿ.ಜೆಯೊಬ್ಬ ಮಹಿಳಾ ಗ್ರಾಹಕಿ ಹಾಗೂ ಆಕೆಯ ಸಹೋದರನ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋರಮಂಗಲದ ಪಬ್‌ವೊಂದರಲ್ಲಿ ನಡೆದಿದ್ದು, ಡಿ.ಜೆ. ಸಿದ್ದಾರ್ಥ್ ಮಲ್ಹೋತ್ರಾ ಎಂಬಾತನ ವಿರುದ್ಧ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋರಮಂಗಲದ 80 ಅಡಿ ರಸ್ತೆಯ “ಬದ್ಮಾಶ್‌’ ಹೆಸರಿನ ಪಬ್‌ನಲ್ಲಿ ಶನಿವಾರ ತಡರಾತ್ರಿ ವಿವೇಕನಗರದ ನಿವಾಸಿ ಸುಮಿತಾ ಎಂಬ ಯುವತಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಸಹೋದರ ನಂದಕಿಶೋರ್‌ ಸೇರಿದಂತೆ ಸುಮಾರು 15 ಜನ ಸ್ನೇಹಿತರು ಪಾರ್ಟಿಗೆ ಹೋಗಿದ್ದರು. ಈ ವೇಳೆ ಪಬ್‌ನ ಡಿ.ಜೆ. ಸಿದ್ಧಾರ್ಥ್ ನಿರಂತರವಾಗಿ  ಹಿಂದಿ, ಇಂಗ್ಲಿಷ್‌, ತೆಲುಗು, ತಮಿಳು ಹಾಡುಗಳನ್ನು ಪ್ಲೇ ಮಾಡುತ್ತಿದ್ದ. ಈ ವೇಳೆ ಸುಮಿತಾ ಮತ್ತು ಅವರ ಸ್ನೇಹಿತರು ಕನ್ನಡ ಹಾಡು ಪ್ಲೇ ಮಾಡುವಂತೆ ಡಿ.ಜೆ.ಗೆ ಕೇಳಿಕೊಂಡಿದ್ದಾರೆ. ತಡರಾತ್ರಿ 12.30ರ ವರೆಗೂ ಸುಮಿತಾ ಸೇರಿ ಸ್ನೇಹಿತರು ಹತ್ತಾರು ಬಾರಿ ಒಂದೇ ಒಂದು ಕನ್ನಡ ಹಾಡು ಪ್ಲೇ ಮಾಡುವಂತೆ ಮನವಿ ಮಾಡಿದ್ದಾರೆ. ಕನ್ನಡ ಹಾಡು ಹಾಕುವುದಾಗಿ ಹೇಳಿದ್ದ ಸಿದ್ಧಾರ್ಥ್ ತಡರಾತ್ರಿಯಾದರೂ ಹಾಕಿಲ್ಲ. ಬಹಳ ಹೊತ್ತಾದರೂ ಹಾಡು ಹಾಕದ ಹಿನ್ನೆಲೆಲ್ಲಿ ನಂದಕಿಶೋರ್‌ ಕನ್ನಡ ಹಾಡು ಹಾಕುವಂತೆ ಕೇಳಿದ್ದಾರೆ. ಆಗ ಕೋಪಗೊಂಡ ಡಿ.ಜೆ. ಕನ್ನಡ ಹಾಡು ಹಾಕಲು ಸಾಧ್ಯವಿಲ್ಲ. ಕನ್ನಡ ಹಾಡು ಬೇಕೆಂದರೆ ಮತ್ತೂಮ್ಮೆ ನಮ್ಮ ಪಬ್‌ಗ ಬರಬೇಡಿ, ಹೊರಗೆ ಹೋಗಿ ಎಂದು ನಿಂದಿಸಿದ್ದಾನೆ. ಅಷ್ಟೇ ಅಲ್ಲದೇ, ನಂದಕಿಶೋರ್‌ ಮೇಲೆ ಹಲ್ಲೆ ಕೂಡ ನಡೆಸಿದ್ದಾನೆ. ಈ ವೇಳೆ ಡಿ.ಜೆ ಸಿದ್ದಾರ್ಥ್ ಹಾಗೂ ಸುಮಿತಾ ಸ್ನೇಹಿತರ ನಡುವೆ ಕೆಲ ವಾಗ್ವಾದ ನಡೆದಿದೆ. ಬಳಿಕ ಪಬ್‌ ಸಿಬ್ಬಂದಿ ಡಿ.ಜೆ.ಯನ್ನು ಸಮಾಧಾನಪಡಿಸಿ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಈ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ನಂದಕಿಶೋರ್‌ ಹಾಗೂ ಆತನ ಸಹೋದರಿ ಸುಮಿತಾ ಅವರಿಗೆ ಕರೆ ಮಾಡಿದರೂ ಸ್ಪಂದಿಸುತ್ತಿಲ್ಲ. ದೂರು ನೀಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಕೋರಮಂಗಲ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮತ್ತೂಂದೆಡೆ ಘಟನೆ ಖಂಡಿಸಿ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಭಾನುವಾರ ಕೋರಮಂಗಲದ ಬದ್ಮಾಶ್‌ ಪಬ್‌ ಬಳಿ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಕನ್ನಡ ಹಾಡು ಹಾಕಲು ನಿರಾಕರಿಸಿದ ಡಿ.ಜೆ. ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಮುಂದೆ ಕನ್ನಡ ಹಾಡು ಹಾಕದಿದ್ದರೆ, ಸರಿಯಾದ ಪಾಠ ಕಲಿಸುವುದಾಗಿ ಪಬ್‌ನ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಪಬ್‌ನ ಸಿಬ್ಬಂದಿ ಕ್ಷಮೆ ಕೇಳಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.