Bengaluru: ಸಿನಿಮೀಯ ರೀತಿ ಕಳ್ಳನ ಸೆರೆ ಹಿಡಿದ ಕಾನ್‌ಸ್ಟೆಬಲ್‌!

ತುಮಕೂರು ಕೊರಟಗೆರೆ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಳ್ಳತನ ಮಾಡಿದ್ದ, 40ಕ್ಕೂ ಹೆಚ್ಚು ಕೇಸ್‌ಗಳಲ್ಲಿ ಭಾಗಿಯಾಗಿದ್ದ ಆರೋಪಿ ಹೊಟ್ಟೆ ಮಂಜ

Team Udayavani, Aug 9, 2024, 12:39 AM IST

police

ಬೆಂಗಳೂರು: ವಂಚನೆ ಹಾಗೂ ಕಳ್ಳತನ ಸೇರಿ 40ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೋಸ್ಟ್‌ ವಾಂಟೆಡ್‌ ವಂಚಕನನ್ನು ಕಾನ್‌ಸ್ಟೆಬಲ್‌ವೊಬ್ಬರು ತಮ್ಮ ಪ್ರಾಣದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ನಗರದ ಸಂಚಾರ ದಟ್ಟಣೆ ನಡುವೆ ಬಂಧಿಸಿದ್ದಾರೆ.

ಹೆಸರುಘಟ್ಟ ನಿವಾಸಿ ಮಂಜೇಶ್‌ ಅಲಿಯಾಸ್‌ ಹೊಟ್ಟೆ ಮಂಜ ಬಂಧಿತ. ಕೊರಟಗೆರೆ ಠಾಣೆಯ ಕಾನ್‌ಸ್ಟೆಬಲ್‌ ದೊಡ್ಡಲಿಂಗಯ್ಯ ಬಂಧಿಸಿದವರು. ಬಂಧಿತನಿಂದ 10 ಸಾವಿರ ರೂ. ನಗದು ಹಾಗೂ 6.75 ಲಕ್ಷ ಮೌಲ್ಯದ 135 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಮಂಜೇಶ್‌ ವಿರುದ್ಧ ಕೊರಟಗೆರೆ ಠಾಣೆ ಸೇರಿ ದಕ್ಷಿಣ ಕರ್ನಾಟಕದ ಹತ್ತಾರು ಪೊಲೀಸ್‌ ಠಾಣೆಗಳಲ್ಲಿ 40ಕ್ಕೂ ಹೆಚ್ಚು ಕಳ್ಳತನ ಹಾಗೂ ವಂಚನೆ ಪ್ರಕರಣಗಳು ದಾಖಲಾಗಿವೆ.

ಇತ್ತೀಚೆಗೆ ಕೊರಟಗೆರೆಯ ಮನೆಯಲ್ಲಿ ಕಳ್ಳತನ ನಡೆದಿತ್ತು. ಸ್ಥಳದ ಸಿಸಿ ಕೆಮರಾ ಪರಿಶೀಲಿಸಿದಾಗ ಮಂಜೇಶ್‌ ಬಗ್ಗೆ ಮಾಹಿತಿ ಸಿಕ್ಕಿತ್ತು. ಆತನ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ, ಆತ ಮನೆಯಲ್ಲಿ ಇರುವುದಿಲ್ಲ. ಫೋನ್‌ ಬಳಸುವುದಿಲ್ಲ. ಹೊಟೇಲ್‌ಗ‌ಳಲ್ಲಿ ಊಟ ಮಾಡದೆ, ಪಾರ್ಸೆಲ್‌ ಕೊಂಡೊಯ್ಯುತ್ತಿದ್ದ. ಲಾಡ್ಜ್ಗಳಲ್ಲಿ ವಾಸವಾಗಿರುತ್ತಿದ್ದ ಎಂಬ ವಿಚಾರ ತಿಳಿದುಬಂದಿತ್ತು.

ಹೀಗಾಗಿ ಆತನ ಪತ್ತೆಗಾಗಿ ನೂರಾರು ಸಿಸಿ ಕೆಮರಾ ಪರಿಶೀಲಿಸಿದಾಗ ಆರೋಪಿ ಬೆಂಗಳೂರಿಗೆ ಬಂದಿರುವುದು ಪತ್ತೆಯಾಗಿತ್ತು. ಬಳಿಕ ಕಾನ್‌ಸ್ಟೆಬಲ್‌ ದೊಡ್ಡ ಲಿಂಗಯ್ಯ ಮತ್ತು ಇತರ ಸಿಬಂದಿ ಬೆಂಗಳೂರಿಗೆ ಬಂದು ನಗರ ಪೊಲೀಸರ ಸಹಾಯ ಪಡೆದು ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ, ಸದಾಶಿವನಗರ ವ್ಯಾಪ್ತಿಯಲ್ಲಿ ನಿತ್ಯ ಸಂಚಾರ ಮಾಡುತ್ತಿರುತ್ತಾನೆ ಎಂಬ ಮಾಹಿತಿ ಕಲೆಹಾಕಿದ್ದರು.

1 ತಿಂಗಳಿನಿಂದ ಕಾರ್ಯಾಚರಣೆ
ಆರೋಪಿಗಾಗಿ 1 ತಿಂಗಳ ಕಾರ್ಯಾಚರಣೆ ನಡೆಯುತ್ತಿತ್ತು. ಆದರೆ ಕಳೆದ 1 ವಾರದಲ್ಲಿ ಆತನ ಚಲನವಲನಗಳ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಆ. 6ರಂದು ಬೆಳಗ್ಗೆ 10 ಗಂಟೆಗೆ ಸದಾಶಿವನಗರದ ಟ್ರಾಫಿಕ್‌ ಸಿಗ್ನಲ್‌ ಬಳಿ ಮಫ್ತಿಯಲ್ಲಿ ದೊಡ್ಡಲಿಂಗಯ್ಯ ಕಾಯುತ್ತಿದ್ದರು. ಮಂಜ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಂತೆ ಆತನನ್ನು ವಾಹನ ಸಮೇತ ತಡೆಯಲು ಮುಂದಾದರು.

ಆರೋಪಿ ಸ್ಕೂಟರ್‌ ಸಮೇತ ತಪ್ಪಿಸಿಕೊಳ್ಳಲು ಮುಂದಾದನು. ಆದರೂ ಬಿಡದ ಕಾನ್‌ಸ್ಟೆಬಲ್‌ ಸ್ಕೂಟರನ್ನು ಹಿಡಿದುಕೊಂಡಾಗ ಅವರನ್ನೇ ಆರೋಪಿ ಸುಮಾರು 50 ಮೀಟರ್‌ ದೂರ ಎಳೆದೊಯ್ದನು. ಅಷ್ಟರಲ್ಲಿ ಕಾನ್‌ಸ್ಟೆಬಲ್‌ ಆರೋಪಿಯ ಕಾಲನ್ನು ಬಿಗಿಯಾಗಿ ಹಿಡಿದುಕೊಂಡರು. ಅನಂತರ ಅಲ್ಲೇ ಇದ್ದ ಟ್ರಾಫಿಕ್‌ ಮಹಿಳಾ ಎಎಸ್‌ಐ, ಹೋಮ್‌ಗಾರ್ಡ್‌ ಹಾಗೂ ಸ್ಥಳೀಯರು ದೊಡ್ಡಲಿಂಗಯ್ಯಗೆ ಸಹಾಯ ಮಾಡಿದರು. ಸಾರ್ವಜನಿಕರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸಾರ್ವಜನಿಕರು ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ದೊಡ್ಡಲಿಂಗಯ್ಯ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

1 ತಿಂಗಳಿನಿಂದ ಕಾಯುತ್ತಿದ್ದೆ
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾನ್‌ಸ್ಟೆಬಲ್‌ ದೊಡ್ಡಲಿಂಗಯ್ಯ, ಈ ಅವಕಾಶವನ್ನು ನಾನು ಬಿಟ್ಟಿದ್ದರೆ ಮತ್ತೆ ಯಾವುತ್ತು ಆತನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. 1 ತಿಂಗಳಿಂದ ಮನೆ ಬಿಟ್ಟು ಬಂದು ಆತನಿಗಾಗಿ ಬೆಂಗಳೂರಿನಲ್ಲಿ ಶೋಧ ನಡೆಸುತ್ತಿದ್ದೇವೆ. ಆತ ಮಾಸ್ಕ್ ಹಾಗೂ ಹೆಲ್ಮೆಟ್‌ ಧರಿಸಿ ಓಡಾಡುತ್ತಿದ್ದ. ಪತ್ತೆ ಕಾರ್ಯ ಕಷ್ಟವಾಗಿತ್ತು. ಆದರೂ ಬಂಧಿಸಿದ್ದೇವೆ ಎಂದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.