New Krishna Bhavan:ಗುಡ್‌ ಬೈ ಹೇಳಿದೆ.. ಮಲ್ಲೇಶ್ವರಂನ 70 ವರ್ಷ ಹಳೆಯ ನ್ಯೂ ಕೃಷ್ಣ ಭವನ್‌

ಇನ್ನು ಕೇವಲ ಐದು ದಿನಗಳ ಬಳಿಕ ಹೋಟೆಲ್‌ ಶಾಶ್ವತವಾಗಿ ಬಂದ್...

Team Udayavani, Nov 30, 2023, 1:38 PM IST

New Krishna Bhavan:ಗುಡ್‌ ಬೈ ಹೇಳಿದೆ.. ಮಲ್ಲೇಶ್ವರಂನ 70 ವರ್ಷ ಹಳೆಯ ನ್ಯೂ ಕೃಷ್ಣ ಭವನ್‌

ಉದ್ಯಾನನಗರಿ ಬೆಂಗಳೂರು ಎಂದ ಕೂಡಲೇ ಲಾಲ್‌ ಭಾಗ್‌, ಕಬ್ಬನ್‌ ಪಾರ್ಕ್‌, ಎಂಜಿ ರೋಡ್‌, ಬ್ರಿಗೇಡ್‌ ರೋಡ್‌ ನೆನಪಾಗುವಂತೆ ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ ಸುತ್ತಮುತ್ತ ಇರುವ ಜನತಾ ಹೋಟೆಲ್‌, ವಿದ್ಯಾರ್ಥಿ ಭವನ, ರಾಘವೇಂದ್ರ ಸ್ಟೋರ್ಸ್‌, ಉಪಹಾರ ದರ್ಶಿನಿಗಳ ಚಿತ್ರಣ ಕೂಡಾ ಕಣ್ಣ ಮುಂದೆ ಹಾದು ಹೋಗುತ್ತದೆ. ಅದೇ ರೀತಿ ಮಲ್ಲೇಶ್ವರಂ 70 ವರ್ಷಗಳ ಇತಿಹಾಸವಿರುವ ನ್ಯೂ ಕೃಷ್ಣ ಭವನ್‌ ಹೋಟೆಲ್‌ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬಿಸಿ, ಬಿಸಿ ಚರ್ಚೆ ನಡೆಯುತ್ತಿದೆ. ಅದಕ್ಕೆ ಕಾರಣ ಏಳು ದಶಕಗಳ ಕಾಲ ಮನೆಮಾತಾಗಿದ್ದ ನ್ಯೂ ಕೃಷ್ಣ ಭವನ್‌ ಇನ್ನು ಒಂದೇ ವಾರದಲ್ಲಿ ಇತಿಹಾಸದ ಪುಟ ಸೇರಲಿದೆ ಎಂಬುದು!

ಇದನ್ನೂ ಓದಿ:IPL; ಸಂಜು ಸ್ಯಾಮ್ಸನ್ ಗೆ ನಾಯಕತ್ವದ ಆಫರ್ ನೀಡಿತಾ ಸಿಎಸ್ ಕೆ? ಅಶ್ವಿನ್ ಹೇಳಿದ್ದೇನು?

ಹೌದು ಇನ್ನು ಕೇವಲ ಐದು ದಿನಗಳ ಬಳಿಕ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಜನಪ್ರಿಯ ನ್ಯೂ ಕೃಷ್ಣ ಭವನ್‌ ಹೋಟೆಲ್‌ ಕೇವಲ ನೆನಪುಗಳಲ್ಲಿ ಮಾತ್ರ ಉಳಿಯಲಿದೆ. ನ್ಯೂ ಕೃಷ್ಣ ಭವನ್‌ ಹೋಟೆಲ್‌ ಕೇವಲ ಮಲ್ಲೇಶ್ವರಂ ಜನರಿಗಷ್ಟೇ ಸೀಮಿತವಾಗಿರಲಿಲ್ಲವಾಗಿತ್ತು. ಅದರ ಜನಪ್ರಿಯತೆ ಇಡೀ ಬೆಂಗಳೂರಿನಾದ್ಯಂತ ಹಬ್ಬಿತ್ತು.

1954ರಲ್ಲಿ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಆರಂಭಗೊಂಡಿದ್ದ ನ್ಯೂ ಕೃಷ್ಣ ಭವನ್‌ ಹೋಟೆಲ್‌ ನಸುಕಿನ ವೇಳೆ ಜಾಗಿಂಗ್‌ ಗೆ ಹೋಗುವವರಿಂದ ಹಿಡಿದು ವಿವಿಧ ನೌಕರರ ಜನಪ್ರಿಯ ಉಪಹಾರ ಕೇಂದ್ರವಾಗಿತ್ತು. ಆದರೆ ಮಂಗಳವಾರ ನ್ಯೂ ಕೃಷ್ಣ ಭವನ್‌ ಹೋಟೆಲ್‌ ಗೆ ತೆರಳಿದ್ದ ಗ್ರಾಹಕರಿಗೆ ಶಾಕ್‌ ಆಗುವಂತೆ ಬ್ಯಾನರ್‌ ಅನ್ನು ಕಟ್ಟಲಾಗಿತ್ತು. ಅದರಲ್ಲಿ “ಆತ್ಮೀಯ ಗ್ರಾಹಕರೆ ನ್ಯೂ ಕೃಷ್ಣ ಭವನ್‌ 06-12-2023ರಿಂದ ಮುಚ್ಚಲಾಗುತ್ತದೆ. ನಿಮ್ಮ ಪ್ರೋತ್ಸಾಹಕ್ಕೆ ಧನ್ಯವಾದಗಳು ಎಂದು” ಬರೆಯಲಾಗಿತ್ತು. ಈ ವಿಷಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಲು ಕಾರಣವಾಗಿದೆ.

ಹೋಟೆಲ್‌ ಮುಚ್ಚಲು ಕಾರಣವೇನು?

ಮಲ್ಲೇಶ್ವರಂನಲ್ಲಿರುವ ನ್ಯೂ ಕೃಷ್ಣ ಭವನ್‌ ಹೋಟೆಲ್‌ ಸದಾ ಜನಜಂಗುಳಿಯಿಂದ ತುಂಬಿರುತ್ತಿತ್ತು. ಇಲ್ಲಿನ ಬಿಸಿ ಬಿಸಿ ಇಡ್ಲಿ ಸಾಂಬಾರ್‌, ರಾಗಿ ರೊಟ್ಟಿ, ಗುಲಾಬ್‌ ಜಾಮೂನು, ನೀರು ದೋಸೆ, ಮಸಾಲೆ ದೋಸೆ, ಬಟನ್‌ ಇಡ್ಲಿಗೆ ಫೇಮಸ್‌ ಆಗಿತ್ತು. ಹೀಗೆ ಏಳು ದಶಕಗಳಿಂದ ಗ್ರಾಹಕರ ಪ್ರೀತಿಗೆ ಪಾತ್ರವಾಗಿದ್ದ ನ್ಯೂ ಕೃಷ್ಣ ಭವನ್‌ ಹೋಟೆಲ್‌ ಮುಚ್ಚುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

ಹೋಟೆಲ್‌ ಆಡಳಿತ ಮಂಡಳಿಯ ಮಾಹಿತಿ ಪ್ರಕಾರ, ನ್ಯೂ ಕೃಷ್ಣ ಭವನ್‌ ಹೋಟೆಲ್‌ ಇರುವ ಕಟ್ಟಡ ಮತ್ತು ನಿವೇಶನವನ್ನು ಜ್ಯುವೆಲ್ಲರಿ ಕಂಪನಿಯೊಂದು ಖರೀದಿಸಿದ್ದು, ಈ ಕಾರಣದಿಂದ ಹೋಟೆಲ್‌ ಮುಚ್ಚಲು ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದೆ.

ಹೋಟೆಲ್‌ ಮುಚ್ಚುತ್ತಿದೆಯಾದರೂ ಇಲ್ಲಿ ಕಳೆದ 45 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಿಬಂದಿಗಳಿಗೆ ಬೇರೆ ಕಡೆ ವ್ಯವಸ್ಥೆ ಮಾಡುತ್ತಿರುವುದಾಗಿ ಆಡಳಿತ ಮಂಡಳಿ ಹೇಳಿದೆ. ಕೋವಿಡ್‌ ಗಿಂತ ಮೊದಲು ನ್ಯೂ ಕೃಷ್ಣ ಭವನ್‌ ಹೋಟೆಲ್‌ ನಲ್ಲಿ ಸುಮಾರು 120 ಮಂದಿ ಕೆಲಸಗಾರರಿದ್ದರು. ಆದರೆ ಕೋವಿಡ್‌ ನಂತರ ವ್ಯಾಪಾರ ಕುಸಿತದಿಂದಾಗಿ ಆ ಸಂಖ್ಯೆ ಈಗ 80ಕ್ಕೆ ಇಳಿಕೆಯಾಗಿದೆ.

ಇತಿಹಾಸ:

ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ರಾಮಕೃಷ್ಣ ಪ್ರಭು ಎಂಬುವವರಿ 1954ರಲ್ಲಿ ನ್ಯೂ ಕೃಷ್ಣ ಭವನ್‌ ಹೋಟಲ್‌ ಸ್ಥಾಪಿಸಿದ್ದರು. ನಂತರ ಹೋಟೆಲ್‌ ಮಾಲೀಕತ್ವ ರಾಮಕೃಷ್ಣ ಪ್ರಭು ಅವರ ಪುತ್ರ ಸುಂದರ್‌ ಪ್ರಭು ಅವರಿಗೆ ಹಸ್ತಾಂತರವಾಗಿತ್ತು. ಈಗ ಮೂರನೇ ತಲೆಮಾರಿನ ಸುನಿಲ್‌ ಎಸ್‌ ಪ್ರಭು ಹೋಟೆಲ್‌ ಮಾಲೀಕತ್ವ ವಹಿಸಿಕೊಂಡಿದ್ದಾರೆ.

ಮಲ್ಲೇಶ್ವರಂನ ಲ್ಯಾಂಡ್‌ ಮಾರ್ಕ್‌ ನ್ಯೂ ಕೃಷ್ಣ ಭವನ್‌ ಹೋಟೆಲ್‌ ಮುಚ್ಚುತ್ತಿರುವ ವಿಷಯ ತಿಳಿಯುತ್ತಿದ್ದಂತೆಯೇ ಮಲ್ಲೇಶ್ವರಂನ ನಿವಾಸಿ, ಸ್ನೂಕರ್‌ ಲೆಜೆಂಡ್‌ ಅರವಿಂದ್‌ ಸಾವೂರ್‌, ಪಂಕಜ್‌ ಅಡ್ವಾಣಿ ಸೇರಿದಂತೆ ನೂರಾರು ಗ್ರಾಹಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.