ನೀರಾವರಿಗೆ ಉತ್ತಮ ಬಜೆಟ್‌


Team Udayavani, Feb 18, 2023, 6:45 AM IST

ನೀರಾವರಿಗೆ ಉತ್ತಮ ಬಜೆಟ್‌

ಪ್ರೊಫೆಸರ್‌ ನರಸಿಂಹಪ್ಪ, ನೀರಾವರಿ ತಜ್ಞ
ಭದ್ರಾ ಮೇಲ್ದಂಡೆ ಯೋಜನೆಯಲ್ಲಿನ ಆಂತರಿಕ ಸಮಸ್ಯೆಗಳನ್ನು ಸುಲಲಿತವಾಗಿ ಸರ್ಕಾರ ಪರಿಹರಿಸಬಹುದೆಂಬ ವಿಶ್ವಾಸವನ್ನಿಟ್ಟುಕೊಂಡು ಈ ಬಜೆಟ್‌ ಉತ್ತಮವಾಗಿದೆ ಎಂದು ನಾನು ಬಣ್ಣಿಸುತ್ತೇನೆ.

ತುಂಗಾ ನದಿಯಿಂದ ಭದ್ರಾ ಯೋಜನೆಗೆ ನೀರು ಹರಿಸುವುದು ಅತಿ ಮುಖ್ಯ. ತುಂಗಾ ನದಿಯಿಂದ ನೀರು ಹರಿಸದೇ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೊಳಿಸುತ್ತೇವೆಂದು ಸರ್ಕಾರ ಭಾವಿಸಿದರೆ ಈ ಯೋಜನೆ ವಿಫ‌ಲಗೊಳ್ಳುತ್ತದೆ. ಆದ್ದರಿಂದ ತುಂಗಾ ನದಿಯಿಂದ ಭದ್ರಾ ನದಿಗೆ ನೀರು ಹರಿಸಲು ಸರ್ಕಾರ ಯಾವ ರೀತಿ ಆದ್ಯತೆ ನೀಡುತ್ತದೆ ಎಂಬುದು ಗಮನಾರ್ಹ.

ಉಳಿದಂತೆ ಈ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ನೀಡುವುದಾಗಿ ಪ್ರಕಟಿಸಿದ್ದು ರಾಜ್ಯ ಸರ್ಕಾರ ಸುಮಾರು 2,000 ಕೋಟಿ ರೂ. ಖರ್ಚು ಮಾಡಬಹುದೆಂಬ ನಿರೀಕ್ಷೆಯಿದೆ. ಯೋಜನೆಗೆ ವೇಗ ನೀಡಲು ಈ ವರ್ಷ ಇಷ್ಟು ಹಣ ಸಾಕಾಗಬಹುದು.

ಉಳಿದಂತೆ ಕಳಸಾ-ಬಂಡೂರಿ ಯೋಜನೆಗೆ ಒಂದು ಸಾವಿರ ಕೋಟಿ ರೂ. ಮೀಸಲಿಟ್ಟಿರುವ ಸರ್ಕಾರದ ಕ್ರಮವ ಸ್ವಾಗತಾರ್ಹ. ಕಳಸಾ ಬಂಡೂರಿ ನಾಲಾ ಯೋಜನೆಯಿಂದ ಹುಬ್ಬಳ್ಳಿ-ಧಾರವಾಡ ನಗರ ಮತ್ತದರ ಸುತ್ತಲಿನ ಭಾಗಕ್ಕೆ ಕುಡಿಯುವ ನೀರು ನೀಡುವುದರ ಜತೆಗೆ ಗದಗ ಜಿಲ್ಲೆಯ ಭಾಗಕ್ಕೂ ಯೋಜನೆ ವಿಸ್ತರಿಸಲು ಈ ಮೊತ್ತವನ್ನು ವಿನಿಯೋಗಿಸಬೇಕು.

ಇನ್ನು ಸರ್ಕಾರ ಸುಮಾರು ಒಂದೂವರೆ ಲಕ್ಷ ಎಕರೆ ಪ್ರದೇಶಕ್ಕೆ ನೀರುಣಿಸುವ ಯೋಜನೆ ಹೊಂದಿರುವುದಾಗಿ ಹೇಳಿದೆ. ಆದರೆ ಸರ್ಕಾರ ತನ್ನ ಯೋಜನೆಯನ್ನು ಸಮರ್ಪಕವಾಗಿ ಮತ್ತು ತ್ವರಿತವಾಗಿ ಜಾರಿಗೊಳಿಸಿದರೆ ಈ ವರ್ಷದಲ್ಲೇ ಸುಮಾರು ಆರು ಲಕ್ಷ ಎಕರೆ ಪ್ರದೇಶವನ್ನು ನೀರಾವರಿ ವ್ಯಾಪ್ತಿಗೆ ತರಬಹುದು. ಈ ನಿಟ್ಟಿನಲ್ಲಿ ಸರ್ಕಾರ ತನ್ನ ಇಚ್ಚಾಶಕ್ತಿ ಪ್ರದರ್ಶಿಸಬೇಕು.

ಉಳಿದಂತೆ ಕೆ.ಸಿ.ವ್ಯಾಲಿ ನೀರಿನ ಶುದ್ಧೀಕರಣ, ಎತ್ತಿನಹೊಳೆ ಯೋಜನೆಯ ಬಗ್ಗೆಯೂ ಉಲ್ಲೇಖವಿದೆ. ಹನಿ ನೀರಾವರಿಗೆ ಒತ್ತು ನೀಡಲಾಗಿದೆ. ಒಟ್ಟಾರೆಯಾಗಿ ಇದೊಂದು ಜನಸ್ನೇಹಿ ಬಜೆಟ್‌.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಜೆಟ್‌ನ ಮೂಲಕ ಉತ್ಪಾದನೆ ಹೆಚ್ಚಿಸುವ, ಸಂಪತ್ತು ಸೃಷ್ಟಿಸುವ, ಉದ್ಯೋಗ ಸೃಜಿಸುವ ಪ್ರಯತ್ನ ನಡೆಸಿದ್ದಾರೆ. ಮೀನುಗಾರರು, ನೇಕಾರರು ಮತ್ತು ಕರಕುಶಲ ಕರ್ಮಿಗಳಿಗೆ ಒತ್ತು ನೀಡಿದ್ದಾರೆ. ಆದರೆ ಗ್ರಾಮೀಣ, ಸಣ್ಣ ಮತ್ತು ದೊಡ್ಡ ಉದ್ದಿಮೆಗಳತ್ತ ಹೆಚ್ಚು ಗಮನಹರಿಸಿಲ್ಲ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.