ಭದ್ರಾ ನದಿಯಲ್ಲಿ ನೀರಿನ ಸುಳಿಗೆ ಸಿಲುಕಿ ಇಬ್ಬರು ಯುವಕರ ಸಾವು, ಓರ್ವನ ರಕ್ಷಣೆ
Team Udayavani, Oct 3, 2020, 6:32 PM IST
ಶಿವಮೊಗ್ಗ : ಭದ್ರಾ ನದಿಯಲ್ಲಿ ಈಜಲು ಹೋಗಿ ನೀರಿನ ಸುಳಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿ ಓರ್ವನನ್ನು ರಕ್ಷಿಸಿದ ಘಟನೆ ಭದ್ರಾವತಿಯ ದೊಡ್ಡ ಗೋಪೇನಹಳ್ಳಿ ಬಳಿಯ ಗೋಂಧಿ ಚಾನಲ್ ಆಂಜನೇಯ ಬಂಡೆ ಬಳಿ ಘಟನೆ ಶನಿವಾರ ನಡೆದಿದೆ.
ಘಟನೆಯಲ್ಲಿ ಭದ್ರಾವತಿ ಜನ್ನಾಪುರದ ರಾಜೇಶ್ (38) ಹಾಗೂ ಮನೋಜ್ (17) ಮೃತಪಟ್ಟವರಾಗಿದ್ದಾರೆ.
ಘಟನೆ ವಿವರ ; ಒಟ್ಟು 9 ಯುವಕರ ತಂಡ ಸೈಕಲಿನಲ್ಲಿ ಭದ್ರಾ ನದಿಯ ಬಳಿ ಈಜಲು ತೆರಳಿದ್ದು ಎಲ್ಲರೂ ನೀರಿನಲ್ಲಿ ಈಜಲು ಇಳಿದಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಗಾತ್ರದ ಸುಳಿಯಿದ್ದು ಒಂಬತ್ತು ಯುವಕರಲ್ಲಿ ಮನೋಜ್ ಎಂಬಾತ ನದಿಯ ಸುಳಿಗೆ ಸಿಲುಕಿ ಮುಳುಗಲಾರಂಭಿಸಿದ್ದಾನೆ. ಈ ವೇಳೆ ರಾಜೇಶ್ ಎನ್ನುವವರು ರಕ್ಷಣೆಗೆ ಧಾವಿಸಿ, ಬಟ್ಟೆ ಕಟ್ಟಿ ಎಳೆಯಲು ಪ್ರಯತ್ನಿಸಿದ್ದಾರೆ ಆದರೆ, ಅವರೂ ಸಹ ನೀರಿನ ಸುಳಿಗೆ ಸಿಲುಕಿ ಬಲಿಯಾಗಿದ್ದಾರೆ.
ಇದೇ ವೇಳೆ ನೀರಿನಲ್ಲಿ ಸಿಲುಕಿದ್ದ 13 ವರ್ಷದ ಕಾರ್ತಿಕ್ ಎನ್ನುವ ಬಾಲಕನನ್ನು ಇತರರು ಸೇರಿ ರಕ್ಷಣೆ ಮಾಡಿದ್ದಾರೆ.
ಭದ್ರಾವತಿ ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಬೀದಿ ಬೀದಿಯಲ್ಲಿ ಬ್ಯಾಗ್ ಮಾರುತ್ತಿದ್ದ ವ್ಯಕ್ತಿ ಇಂದು 250 ಕೋಟಿ ರೂಪಾಯಿ ಕಂಪನಿ ಒಡೆಯ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.