![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 26, 2020, 6:24 PM IST
ಬೀದರ್ : ಗಡಿ ನಾಡು ಬೀದರ್ ನಲ್ಲಿ ಬುಧವಾರ ಕೋವಿಡ್ ಸೋಂಕಿಗೆ ಇಬ್ಬರು ಬಲಿಯಾಗಿದ್ದು, 43 ಜನ ಹೊಸಬರಿಗೆ ವೈರಸ್ ಒಕ್ಕರಿಸಿದೆ.
ಬೀದರ್ ನಗರದ ಮೈಲೂರನ 70 ವರ್ಷದ ವೃದ್ಧ ಹಾಗೂ ಭಾಲ್ಕಿ ತಾಲೂಕಿನ ರಾಮತೀರ್ಥವಾಡಿ ಗ್ರಾಮದ 65 ವರ್ಷದ ಮಹಿಳೆಯು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕಿನ ಲಕ್ಷಣ ಹಿನ್ನಲೆಯಲ್ಲಿ ಇಬ್ಬರು ಬ್ರಿಮ್ಸ್ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಮೈಲೂರಿನ ವೃದ್ಧ ಅಧಿಕ ರಕ್ತದೊತ್ತಡ ಹಾಗೂ ಇತರೆ ಕಾಯಿಲೆಯಿಂದ ಬಳಲುತ್ತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ ಈಗ 130ಕ್ಕೆ ಏರಿಕೆ ಆಗಿದೆ.
ಬುಧವಾರ ಜಿಲ್ಲೆಯಲ್ಲಿ 43 ಹೊಸ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಅದರಲ್ಲಿ ಬೀದರ್ ನಗರ- ತಾಲೂಕಿನ 17, ಔರಾದ- ಕಮಲನಗರ ತಾಲೂಕಿನ 11, ಬಸವಕಲ್ಯಾಣ- ಹುಲಸೂರು ತಾಲೂಕಿನ 5, ಭಾಲ್ಕಿ ತಾಲೂಕಿನ 5, ಹುಮನಾಬಾದ- ಚಿಟಗುಪ್ಪ ತಾಲೂಕಿನ 5 ಪ್ರಕರಣಗಳು ಸೇರಿವೆ. ಈ ಮೂಲಕ ಸೋಂಕಿತರ ಸಂಖ್ಯೆ 4256ಗೆ ಏರಿಕೆಯಾಗಿದೆ. ಇಂದು ಒಂದೇ ದಿನ 105 ಜನ ಗುಣಮುಖರಾಗಿದ್ದು, ಇದುವರೆಗೆ ಆಸ್ಪತ್ರೆಯಿಂದ ಬಿಡುಗಡೆ ಆದವರ ಸಮಖ್ಯೆ 3487ಕ್ಕೆ ತಲುಪಿದೆ. ಇನ್ನೂ 635 ಸಕ್ರೀಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಒಟ್ಟು 66,011 ಜನರ ಗಂಟಲು ಮಾದರಿಯ ತಪಾಸಣೆ ಮಾಡಲಾಗಿದ್ದು, ಈ ಪೈಕಿ 61,323 ಜನರದ್ದು ನೆಗೆಟಿವ್ ಇದ್ದು, ಇನ್ನೂ 432 ಜನರ ವರದಿ ಬರಬೇಕಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.