ಜನನ ಪ್ರಮಾಣಪತ್ರ ಮನೆ ಬಾಗಿಲಿಗೆ: ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಚಾಲನೆ


Team Udayavani, Apr 7, 2022, 6:25 AM IST

ಜನನ ಪ್ರಮಾಣಪತ್ರ ಮನೆ ಬಾಗಿಲಿಗೆ: ಲೇಡಿಗೋಷನ್‌ ಆಸ್ಪತ್ರೆಯಲ್ಲಿ ಚಾಲನೆ

ಮಂಗಳೂರು: ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗವು ಮಂಗಳೂರಿನ ಲೇಡಿಗೋಷನ್‌ ಸರಕಾರಿ ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಸ್ಪೀಡ್‌ ಪೋಸ್ಟ್‌ ಮೂಲಕ ಜನನ ಪ್ರಮಾಣ ಪತ್ರಗಳನ್ನು ಮನೆಬಾಗಿಲಿಗೆ ತಲುಪಿಸುವ ಸೇವೆಯನ್ನು ಮಂಗಳೂರಿನ ಲೇಡಿಗೋಷನ್‌ ಸರಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ.

ಮಂಗಳೂರು ಮನಪಾದಲ್ಲಿ ಈ ಸೇವೆಗೆ ರಾಜ್ಯದಲ್ಲೇ ಮೊದಲ ಬಾರಿಗೆ ಚಾಲನೆ ನೀಡಲಾಗಿತ್ತು. ಪ್ರಸ್ತುತ ಲೇಡಿಗೋಷನ್‌ ಸರಕಾರಿ ಆಸ್ಪತ್ರೆಯಲ್ಲಿ ಪ್ರತೀ ತಿಂಗಳು ಸುಮಾರು 400ರಿಂದ 600 ಶಿಶು ಜನನ ವಾಗುತ್ತಿದ್ದು, ಕರ್ನಾಟಕದ ಸುಮಾರು 9 ಜಿಲ್ಲೆ ಮತ್ತು ಕೇರಳದ 3 ಜಿಲ್ಲೆಯ ನಾಗರಿಕರು ಈ ಆಸ್ಪತ್ರೆಯ ಸೇವೆಯನ್ನು ಪಡೆಯುತ್ತಿದ್ದಾರೆ.

ಪ್ರಸ್ತುತ ವ್ಯವಸ್ಥೆಯಲ್ಲಿ ಲೇಡಿಗೋಷನ್‌ ಆಸ್ಪತ್ರೆಯಲ್ಲಿ ನಡೆಯುವ ಜನನಗಳಿಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ಲೇಡಿ ಗೋಷನ್‌ ಆಸ್ಪತ್ರೆಯಲ್ಲೇ ನೀಡಲಾಗುತ್ತಿದೆ. ಇವುಗಳನ್ನು ಪಡೆಯಲು ಅರ್ಜಿದಾರರು ಎರಡು ಬಾರಿ ಲೇಡಿಗೋಷನ್‌ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಈ ಪ್ರಸ್ತುತ ಕಾರ್ಯವಿಧಾನದಲ್ಲಿ ಸಾಮಾನ್ಯ ಜನರಿಗೆ ಅನಾನುಕೂಲಗಳು ಹಲವು. ಈ ತೊಡಕನ್ನು ನಿವಾರಿಸಲಿದೆ.

ಇದನ್ನೂ ಓದಿ:ದೇರಳಕಟ್ಟೆ: ಡಿವೈಡರ್ ಏರಿ ಬೈಕ್ ಗೆ ಗುದ್ದಿದ ಕಾರು; ಮೂರು ದಾರಿದೀಪಗಳಿಗೂ ಹಾನಿ

ಈ ಸೇವೆಯಡಿ ಜನನ ಪ್ರಮಾಣ ಪತ್ರಗಳಿಗೆ ಅರ್ಜಿ ಸಲ್ಲಿಸುವಾಗ ಅರ್ಜಿ ದಾರರಿಗೆ 2 ಆಯ್ಕೆಗಳನ್ನು ನೀಡಲಾಗುತ್ತದೆ. ಅರ್ಜಿದಾರರು ಖುದ್ದಾಗಿ ಲೇಡಿಗೋಷನ್‌ ಸರಕಾರಿ ಆಸ್ಪತ್ರೆಗೆ ಮತ್ತೂಮ್ಮೆ ಭೇಟಿ ನೀಡಿ ಈ ಪ್ರಮಾಣಪತ್ರವನ್ನು ಪಡೆದುಕೊಳ್ಳಬೇಕು ಅಥವಾ ಸ್ಪೀಡ್‌ ಪೋಸ್ಟ್‌ ಮೂಲಕ ಪ್ರಮಾಣಪತ್ರವನ್ನು ಮನೆಬಾಗಿಲಲ್ಲಿ ಪಡೆದುಕೊಳ್ಳಬಹುದು. ಆಗ ಹೆಚ್ಚುವರಿ ಅರ್ಜಿಯೊಂದನ್ನು ಭರ್ತಿ ಮಾಡಿ ಕೌಂಟರ್‌ನಲ್ಲಿ ನೀಡಬೇಕು.

ಈ ಅರ್ಜಿಯು ಸರಳವಾಗಿದ್ದು, ಕೇವಲ ಬಟವಾಡೆಯಾಗಬೇಕಾಗಿರುವ ವಿಳಾಸ ಮತ್ತು ಮೊಬೈಲ್‌ ಸಂಖ್ಯೆಯನ್ನು ಭರ್ತಿ ಮಾಡಬೇಕು.

100 ರೂ.ಗಳನ್ನು ಬಟವಾಡೆ ಮಾಡುವ ಸಂದರ್ಭದಲ್ಲಿ ಪೋಸ್ಟ್‌ ಮ್ಯಾನ್‌ಗೆ ನೀಡಲು ತಮ್ಮ ಸಮ್ಮತಿ ಇದೆ ಎಂದು ಸಹಿ ಮಾಡಬೇಕು. ಪ್ರಮಾಣಪತ್ರವು ಮುದ್ರಣಗೊಂಡ ಬಳಿಕ ಅಂಚೆ ಇಲಾಖೆಯು ಈ ಜನನ ಪ್ರಮಾಣಪತ್ರವನ್ನು ಸ್ಪೀಡ್‌ ಪೋಸ್ಟ್‌ ಮೂಲಕ ಅರ್ಜಿದಾರರ ಮನೆಗೆ ಬಟವಾಡೆ ಮಾಡುವುದು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.