![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 11, 2019, 11:07 AM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯವರು ಅಹಂಕಾರದಲ್ಲಿ ಸರ್ಕಾರ ನಡೆಸುತ್ತಿದ್ದಾರೆ. ವಿಪಕ್ಷಗಳ ಅಧಿಕಾರ ಮೊಟಕು ಮಾಡುವುದು, ನಾವು ಹೇಳಿದ್ದೇ ಆಗಬೇಕು ಎಂಬ ದಾಷ್ಟ್ಯ ಅವರದ್ದು. ಕೇಂದ್ರದಲ್ಲೂ ಹಾಗೇ ಇದೆ, ರಾಜ್ಯದಲ್ಲೂ ಹಾಗೇ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಧಿವೇಶನ ಮೂರು ದಿನ ಯಾಕೆ ಕರೆದಿದ್ದಾರೆ. ರಾಜ್ಯದ ಪ್ರವಾಹ, ಬರದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಬೇಕು. ನೂರೆಂಟು ಸಮಸ್ಯೆ ಬಗ್ಗೆ ಚರ್ಚೆಯಾಗಬೇಕು. ಆದರೆ ಸರ್ಕಾರದ ನಡೆ ಬೇಸರತರಿಸುತ್ತಿದೆ. ಜನತಂತ್ರ ವ್ಯವಸ್ಥೆಯೇ ಕುಸಿಯುತ್ತಿದೆ ಎಂದು ಟೀಕಿಸಿದರು.
ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಮೇಲೆ ಐಟಿ ದಾಳಿ ವಿಚಾರದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ಸರ್ಕಾರ ಏಜೆನ್ಸಿಯನ್ನ ಬಳಸಿಕೊಂಡು ದಾಳಿ ಮಾಡಿಸಿದೆ. ಪ್ರತಿಪಕ್ಷಗಳನ್ನು ಮುಗಿಸುವ ಕೆಲಸ ನಡೆಯುತ್ತಿದೆ. ಜನ ಇದನ್ನ ಯಾವತ್ತೂ ಒಪ್ಪುವುದಿಲ್ಲ ಎಂದರು. ಬಿಜೆಪಿಯಲ್ಲಿ ಎಷ್ಟು ಭ್ರಷ್ಟರಿದ್ದಾರೆ. ಅವರ ಮಂತ್ರಿಗಳ ಮೇಲೆ ಸಾಕಷ್ಟು ಆರೋಪಗಳಿವೆ. ರಿವೇಂಜ್ ಪಾಲಿಟಿಕ್ಸ್ ಶುರು ಮಾಡಿದ್ದಾರೆ ಎಂದು ಟೀಕೆ ಮಾಡಿದರು.
ದೇಶದ ಅರ್ಥ ವ್ಯವಸ್ಥೆ ಕುಸಿದಿದೆ. 5.8 ಪರ್ಸೆಂಟ್ ಜಿಡಿಪಿ ದರ ಇಳಿದಿದೆ. ಸುಳ್ಳು ವದಂತಿ ಹಬ್ಬಿಸಿ ಸರ್ಕಾರ ನಡೆಸುತ್ತಿದ್ದಾರೆ. ಪ್ರತಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.