BJP-JDS Allaince: ಹೋರಾಟದ ಯಾತ್ರೆಗೆ ದೋಸ್ತಿ ಸಿದ್ಧತೆ

ಆ. 3ರಿಂದ ಬಿಜೆಪಿ, ಜೆಡಿಎಸ್‌ ಪಾದಯಾತ್ರೆ?  ಆ. 10ರಂದು ಮುಕ್ತಾಯ   ಬಿಜೆಪಿ ಸಭೆಯಲ್ಲಿ  ಚರ್ಚೆ

Team Udayavani, Jul 28, 2024, 7:45 AM IST

BJP-JDS
ಬೆಂಗಳೂರು:  ರಾಜ್ಯ ಸರಕಾರವು ಮುಡಾ, ವಾಲ್ಮೀಕಿ ಮತ್ತಿತರ ಹಗರಣಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿ ವಿಪಕ್ಷ ಗಳಾದ ಬಿಜೆಪಿ-ಜೆಡಿಎಸ್‌ ಈಗಾಗಲೇ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ, ಹೋರಾಟ ಸಂಘಟಿಸುತ್ತ ಬಂದಿವೆ. ಜತೆಗೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಪಟ್ಟು ಹಿಡಿದಿವೆ. ಈಗ ಮುಡಾ ಹಗರಣ ಸಂಬಂಧ ಸಿಎಂ ತಲೆದಂಡಕ್ಕೆ ಆಗ್ರಹಿಸಿ ಮೈತ್ರಿ ವಿಪಕ್ಷಗಳು ಬೆಂಗಳೂರಿನ ಕೆಂಗೇರಿಯಿಂದ ಮೈಸೂರಿನ ವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಗೆ ದಿನಾಂಕ ನಿಗದಿಯಾಗಿದೆ. ಆ. 3ರಿಂದ ಒಂದು ವಾರ ಕಾಲ ಜಂಟಿ ಪಾದಯಾತ್ರೆ ನಡೆಸಲು ಮುಂದಡಿ ಇರಿಸಿವೆ.

“ಭ್ರಷ್ಟ ಸಿಎಂ-ಭ್ರಷ್ಟ ಕಾಂಗ್ರೆಸ್‌ ತೊಲಗಿಸಿ’ ಎಂಬ ಘೋಷವಾಕ್ಯದಡಿ ಹಳೇ ಮೈಸೂರು ಭಾಗ ದಲ್ಲಿ ರಾಜ್ಯ ಸರಕಾರದ ವಿರುದ್ಧ ಜಂಟಿ ಹೋರಾಟ ನಡೆಸುವುದಕ್ಕೆ ಎಲ್ಲ ಸಿದ್ಧತೆಗಳು ಬಹು ಪಾಲು ಮುಕ್ತಾಯ ಗೊಂಡಿವೆ. ರವಿವಾರ ಅಪರಾಹ್ನ 3 ಗಂಟೆಗೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಎರಡೂ ಪಕ್ಷಗಳ ಸಮನ್ವಯ ಬೈಠಕ್‌ ನಡೆಯ ಲಿದ್ದು, ಇದರಲ್ಲಿ ಹೋರಾಟದ ಸ್ವರೂಪಕ್ಕೆ ಅಂತಿಮ ರೂಪ ನೀಡಲಾಗುತ್ತದೆ. ಕೇಂದ್ರ ಸಚಿವ ರಾದ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ್‌ ಜೋಶಿ ಈ ಸಭೆಯಲ್ಲಿ ವಿಶೇಷ ಆಹ್ವಾನಿತ  ರಾಗಿ ಭಾಗಿಯಾಗಲಿದ್ದಾರೆ. ಅವರಿಬ್ಬರ ಸಮ್ಮುಖ ದಲ್ಲಿ ಅಧಿಕೃತವಾಗಿ ದಿನಾಂಕ ಘೋಷಣೆ ಆಗ  ಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಅಧಿವೇಶನ ಸಂದರ್ಭದಲ್ಲೇ ಪಾದಯಾತ್ರೆಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದರು. ಇದಾದ ಬಳಿಕ ಕಳೆದ ಎರಡು ದಿನಗಳಿಂದ ಬಿಜೆಪಿ ಕಚೇರಿಯಲ್ಲಿ ನಿರಂತರ ಸಿದ್ಧತೆ, ಸಭೆ ನಡೆಯುತ್ತಿದೆ.
ಶಕ್ತಿ ಪ್ರದರ್ಶನಕ್ಕೆ ಸೂಕ್ತ ವೇದಿಕೆ
ಏಳು ದಿನಗಳ ಪಾದಯಾತ್ರೆ ಸಂಪೂರ್ಣವಾಗಿ ರಾಜಕೀಯ ಸ್ವರೂಪದ್ದಾಗಿರಲಿದ್ದು, ಜೆಡಿಎಸ್‌ನ ಸಂಘಟನಾತ್ಮಕ ಬಲವನ್ನು ಯಶಸ್ವಿಯಾಗಿ ಬಳಸಿ ಕೊಳ್ಳಲು ಕಾರ್ಯತಂತ್ರ ರೂಪಿಸಲಾಗುತ್ತಿದೆ. ಪಾದಯಾತ್ರೆ ಸಾಗುವ ದಾರಿ ಒಕ್ಕಲಿಗರೇ ಹೆಚ್ಚಿರುವ ಭಾಗ ಆಗಿರುವುದರಿಂದ ಬಿಡದಿ, ಚನ್ನಪಟ್ಟಣ, ರಾಮನಗರ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ದಲ್ಲಿ ಎರಡೂ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸಬೇಕು.

ಈ ಪಾದಯಾತ್ರೆ ಮುಂದಿನ ಜಿಲ್ಲಾ, ತಾಲೂಕು ಪಂಚಾಯತ್‌ ಚುನಾವಣೆ ಜತೆಗೆ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್‌ ವಿರುದ್ಧ ಜನಾಭಿಪ್ರಾಯ ತೀವ್ರಗೊಳಿಸುವಂತಿರಬೇಕೆಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ರವಿವಾರ ನಡೆಯುವ ಸಮನ್ವಯ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ನೇತೃತ್ವದಲ್ಲಿ ಸಂಘಟನೆ ಚಟುವಟಿಕೆಯನ್ನು ಚುರುಕುಗೊಳಿಸಲಾಗಿದೆ.
ಆ. 10ರಂದು ಮೈಸೂರಿನಲ್ಲಿ ಸಮಾರೋಪ ಸಭೆ
ಪಾದಯಾತ್ರೆ ಎಲ್ಲಿಂದ ಪ್ರಾರಂಭವಾಗಬೇಕು? ಯಾವ ಯಾವ ತಾಲೂಕುಗಳಲ್ಲಿ ಕಿರು ಸಭೆಗಳನ್ನು ನಡೆಸಬೇಕು? ದಿನಕ್ಕೆ ಎಷ್ಟು ಕಿ.ಮೀ. ನಡೆಯಬೇಕು, ಪ್ರತಿದಿನದ ಪಾದಯಾತ್ರೆ ಆರಂಭವಾಗುವ ಹಾಗೂ ಅಂತ್ಯವಾಗುವ ಸ್ಥಳಗಳಲ್ಲಿ ಯಾರ್ಯಾರು ಮಾತನಾಡಬೇಕೆಂಬ ಬಗ್ಗೆ ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಆ. 10ರಂದು ಮೈಸೂರಿನಲ್ಲಿ ನಡೆಯುವ ಸಮಾರೋಪ ಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.
ಪಾದಯಾತ್ರೆ ರೂಪುರೇಷೆ
“ಭ್ರಷ್ಟ ಸಿಎಂ-ಭ್ರಷ್ಟ ಕಾಂಗ್ರೆಸ್‌ ತೊಲಗಿಸಿ’ ಘೋಷವಾಕ್ಯದಡಿ
ಮೈತ್ರಿ ಪಕ್ಷ ಹೆಜ್ಜೆ

ಹಳೇ ಮೈಸೂರು ಭಾಗದಲ್ಲಿ ಸರಕಾರದ ವಿರುದ್ಧ “ಜಂಟಿ ಹೋರಾಟ’

ರವಿವಾರ ಬೆಂಗಳೂರಿನಲ್ಲಿ ಬಿಜೆಪಿ- ಜೆಡಿಎಸ್‌ ಮುಖಂಡರ, ಪ್ರಮುಖರ ಸಭೆ

ಯಾವ ತಾಲೂಕುಗಳಲ್ಲಿ ಕಿರು ಸಭೆ ಎಂಬ ಬಗ್ಗೆ ಇಂದು ತೀರ್ಮಾನ

ಸುನಿಲ್‌ ಕುಮಾರ್‌ ನೇತೃತ್ವದ ತಂಡದಿಂದ ಪಾದಯಾತ್ರೆ ರೂಪುರೇಷೆ ಅಂತಿಮ ಹಂತಕ್ಕೆ

ಸಮಾರೋಪಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಹ್ವಾನಿಸಲು ತೀರ್ಮಾನ

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.