![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 26, 2019, 6:00 AM IST
ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾ ವಣೆಗೆ ಮತದಾನ ಮುಗಿದ ಬೆನ್ನಲ್ಲೇ ಸದ್ಯದಲ್ಲೇ ನಡೆಯಲಿರುವ ಎರಡು ಉಪಚುನಾವಣೆಗಳಿಗೆ ರಾಜಕೀಯ ಪಕ್ಷಗಳಿಂದ ಬಿರುಸಿನ ಸಿದ್ಧತೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆ ನಡೆಸಿರುವ ಬಿಜೆಪಿ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮ ಮಾಡಿದೆ. ಕಾಂಗ್ರೆಸ್ ಕೂಡ ಈ ಎರಡೂ ಕ್ಷೇತ್ರಗಳ ಜಿಲ್ಲಾ ಮುಖಂಡರ ಸಭೆ ನಡೆಸಿದ್ದು, ಅಭ್ಯರ್ಥಿಗಳ ಆಯ್ಕೆ ಸಂಬಂಧ ಅಭಿಪ್ರಾಯ ಸಂಗ್ರಹಿಸಿದೆ.
ಬಿಜೆಪಿಯಿಂದ ಚಿಂಚೋಳಿಯಲ್ಲಿ ಡಾ. ಉಮೇಶ್ ಜಾಧವ್ ಅವರ ಕುಟುಂಬದವರೇ ಆದ ಅವರ ಸಹೋದರ ರಾಮಚಂದ್ರ ಜಾಧವ್ ಅಥವಾ ಪುತ್ರ ಡಾ. ಅವಿನಾಶ್ ಜಾಧವ್ಗೆ ಟಿಕೆಟ್ ನೀಡುವ ಸಂಭವವಿದೆ. ಅವಿನಾಶ್ ಜಾಧವ್ ಕಲಬುರಗಿಯ ಕೆಬಿಎನ್ ಆಸ್ಪತ್ರೆಯಲ್ಲಿ ಎಂಡಿ ಮುಗಿಸಿ ಅಲ್ಲೇ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಇವರಿಬ್ಬರಲ್ಲಿ ಯಾರು ಎಂಬುದು ಅಧಿಕೃತವಾಗುವ ಸಂಭವವಿದೆ. ಇಲ್ಲಿ ಸುನೀಲ್ ವಲ್ಯಾಪುರೆ ಅವರು ಸ್ಪರ್ಧಿಸಲು ಆಸಕ್ತಿ ತೋರಿದ್ದರು. ಅಲ್ಲದೆ, ನಾಮದೇವ್ ರಾಥೋಡ್ ಹಾಗೂ ಸಂಜಯ್ ಯಾಕಾಪುರೆ ಅವರ ಹೆಸರು ಸಹ ಇತ್ತು. ಉಮೇಶ್ ಜಾಧವ್ ಸೂಚಿಸಿದವರಿಗೆ ಟಿಕೆಟ್ ನೀಡಲಾಗುವುದು ಎಂದು ಪಕ್ಷ ಈ ಹಿಂದೆ ನೀಡಿದ್ದ ಮಾತಿನ ಅನ್ವಯ ಅವರ ಕುಟುಂಬದವರಿಗೇ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳ ತಿಳಿಸಿವೆ.
ಆದರೆ, ಕಾಂಗ್ರೆಸ್ನಲ್ಲಿ ಈ ಕ್ಷೇತ್ರದಲ್ಲಿ ಸದ್ಯಕ್ಕೆ ಯಾವುದೇ ಅಭ್ಯರ್ಥಿಯ ಹೆಸರು ಚರ್ಚೆಯಾಗಿಲ್ಲ. ಇಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೂಚಿಸುವ ಹೆಸರೇ ಅಂತಿಮವಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಲ್ಲಿ ಸಭೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು, ಖರ್ಗೆ ಅವರ ಜತೆ ಚರ್ಚೆ ನಡೆಸಲಿದ್ದಾರೆ.
ಕುಂದಗೋಳಕ್ಕೆ ಚಿಕ್ಕನಗೌಡರ ಅಂತಿಮ: ಅತ್ತ ಕುಂದಗೋಳದಲ್ಲಿ ಬಿಜೆಪಿ ಎಸ್.ಐ. ಚಿಕ್ಕನ ಗೌಡರ ಅವರ ಹೆಸರನ್ನೇ ಅಂತಿಮ ಮಾಡಿ ದೆಹಲಿಗೆ ಕಳುಹಿಸಿಕೊಟ್ಟಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಿ.ಎಸ್.ಶಿವಳ್ಳಿ ಅವರ ವಿರುದ್ಧ ಚಿಕ್ಕನಗೌಡರ ಕೇವಲ 634 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಲ್ಲಿಂದ 2013ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಂ.ಆರ್. ಪಾಟೀಲ್ ಅವರು ಕುಂದಗೋಳ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದರು. ಆದರೆ, ಇವರ ಹೆಸರು ಪರಿಗಣಿಸಿಲ್ಲ.
ಇನ್ನು ಕಾಂಗ್ರೆಸ್ನಲ್ಲಿ ಮಾತ್ರ ಕುಂದಗೋಳ ಕ್ಷೇತ್ರ ಕಗ್ಗಂಟಾಗುವ ಲಕ್ಷಣ ಕಾಣಿಸಿಕೊಂಡಿದೆ. ಅಕಾಲಿಕ ನಿಧನ ಹೊಂದಿರುವ ಸಚಿವ ಸಿ.ಎಸ್. ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಸ್ಥಳೀಯ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇಲ್ಲಿ ಸ್ಪರ್ಧಿಸಲು ಆರು ಜನ ಮಾಜಿ ಶಾಸಕರ ಪುತ್ರರು ಸಹಿತ ಹತ್ತು ಮಂದಿ ಉತ್ಸುಕತೆ ತೋರಿದ್ದು, ಟಿಕೆಟ್ಗಾಗಿ ಮನವಿ ಮಾಡಿದ್ದಾರೆ. ಆದರೆ, ಶಿವಳ್ಳಿ ಅವರ ಪತ್ನಿಗೆ ಟಿಕೆಟ್ ನೀಡಲು ರಾಜ್ಯ ನಾಯಕತ್ವ ಒಲವು ವ್ಯಕ್ತಪಡಿಸಿದೆ. ಕಳೆದ ಸಲ ಕಡಿಮೆ ಅಂತರದಿಂದ ಗೆಲುವು ಸಾಧಿಸಿರುವುದರಿಂದ ಕುಸುಮಾ ಅವರನ್ನು ಕಣಕ್ಕಿಳಿಸುವುದರಿಂದ ಅನುಕಂಪದ ಆಧಾರ ದಲ್ಲಿ ಮತ ಪಡೆಯಬಹುದು ಎಂಬ ಲೆಕ್ಕಾಚಾರ ಪಕ್ಷದ ನಾಯಕರದ್ದಾಗಿದೆ.
ಈ ಮಧ್ಯೆ, ಉಪಚುನಾವಣೆ ನಡೆಯುವ ಎರಡೂ ಕ್ಷೇತ್ರಗಳು ಬಿಜೆಪಿ ಮತ್ತು ಕಾಂಗ್ರೆಸ್ಗೆ ಬಂಡಾಯದ ಬಿಸಿ ತಂದೊಡ್ಡುವ ಸಾಧ್ಯತೆಗಳೂ ಇವೆ. ಚಿಂಚೋಳಿ ಕ್ಷೇತ್ರದ ಟಿಕೆಟ್ ಕೈತಪ್ಪುವ ಸಾಧ್ಯತೆ ಇರುವ ಬಿಜೆಪಿಯ ಸುನಿಲ್ ವಲ್ಯಾಪುರೆ ಅವರು ಶುಕ್ರವಾರ ಬೆಂಬಲಿಗರ ಸಭೆ ಕರೆದಿದ್ದು ಮುಂದಿನ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.