Chennapattana: ಜೆಡಿಎಸ್‌ ಚಿಹ್ನೆಯಡಿ ಬಿಜೆಪಿಯ ಯೋಗೇಶ್ವರ್‌ ಸ್ಪರ್ಧೆ?

ನಿಖಿಲ್‌ ಕೂಡ ಸ್ಪರ್ಧೆಗೆ ಉತ್ಸುಕ, ಸಾಮಾನ್ಯ ಕಾರ್ಯಕರ್ತನ ನಿಲ್ಲಿಸಲು ಎಚ್‌ಡಿಕೆ ಇಂಗಿತ

Team Udayavani, Jun 20, 2024, 11:35 AM IST

CPY

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಉತ್ಸಾಹ ತೋರುತ್ತಿದ್ದಂತೆ ಎನ್‌ ಡಿಎ ಮೈತ್ರಿಕೂಟದಿಂದಲೂ ಇಂತಹದ್ದೇ ಪ್ರಯೋಗಕ್ಕೆ ಚರ್ಚೆ ಪ್ರಾರಂಭವಾಗಿದೆ. ಡಿಕೆ ಸೋದರರ ವಿರುದ್ಧ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಜೆಡಿಎಸ್‌ ಚಿಹ್ನೆಯ ಮೇಲೆ ಕಣಕ್ಕೆ ಇಳಿಯುವ ಸಾಧ್ಯತೆ ದಟ್ಟವಾಗಿದೆ. ಈ ಮಾತು ಬಿಜೆಪಿ ವಲಯದಿಂದಲೂ ಕೇಳಿ ಬರುತ್ತಿದೆ.

ಸಮರಕ್ಕೆ ಸಿದ್ಧ ಎಂದು ಶಿವಕುಮಾರ್‌ ಶಂಖಾನಾದ ಮಾಡಿದ್ದು ಮೈತ್ರಿ ಪಕ್ಷದ ಅನುಮಾನಕ್ಕೆ ಕಾರಣವಾಗಿದೆ. ಕ್ಷೇತ್ರದಲ್ಲಿ ಅಬ್ಬರ ಸೃಷ್ಟಿಸುವ ಏಕೈಕ ಕಾರಣಕ್ಕೆ ಅವರು ಈ ತಂತ್ರ ಹೆಣೆದಿದ್ದು ಅಂತಿಮವಾಗಿ ಸೋದರನನ್ನು ಕಣಕ್ಕೆ ಇಳಿಸುವ ಸಾಧ್ಯತೆ ಹೆಚ್ಚೆಂಬುದು ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಹಾಗೂ ಜೆಡಿಎಸ್‌ ಮೂಲಗಳ ಪ್ರಕಾರ, ಈ ಬಾರಿ ಎದುರಾಗಿರುವುದು ಎಲ್ಲ ಉಪಚುನಾವಣೆಯಂಥಲ್ಲ. ಕೇಂದ್ರ ಸಚಿವರಾಗಿರುವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಇದು ಡಿ.ಕೆ.ಶಿವಕುಮಾರ್‌ಗೆ ಇರುವಷ್ಟೇ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸೂಪರ್‌ ಫಾಸ್ಟ್‌ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಕಡಿಮೆ. ಆದಾಗಿಯೂ ಚುನಾವಣಾ ಕಣಕ್ಕೆ ಇಳಿಯುವುದಕ್ಕೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಉತ್ಸುಕರಾಗಿದ್ದಾರೆ.

ಜೂನ್‌ 2026ರ ವರೆಗೂ ಸಿ.ಪಿ. ಯೋಗೇಶ್ವರ ಅವರ ವಿಧಾನ ಪರಿಷತ್‌ ಸದಸ್ಯತ್ವ ಇದೆ. ಒಂದೊಮ್ಮೆ ಅವರು ಜೆಡಿಎಸ್‌ ಚಿಹ್ನೆಯ ಮೇಲೆ ಸ್ಪರ್ಧಿಸ ಬೇಕೆಂದು ಮೈತ್ರಿಕೂಟ ನಿರ್ಧರಿಸಿದರೂ ಯಾವುದೇ ತಾಂತ್ರಿಕ ಅಡಚಣೆ ಉಂಟಾಗುವುದಿಲ್ಲ. ಸಿನಿಮಾ ಕ್ಷೇತ್ರದಿಂದ ಪರಿಷತ್‌ ಗೆ ನಾಮ ನಿರ್ದೇಶನ ಗೊಂಡಿ ರುವುದರಿಂದ ಅವರಿಗೆ ಪಕ್ಷಾಂತರದ ಸಮಸ್ಯೆ ಕಾಡು ವುದಿಲ್ಲ, ರಾಜೀನಾಮೆ ಕೊಟ್ಟೇ ಸ್ಪರ್ಧಿಸಬೇಕೆಂಬ ಅನಿವಾರ್ಯತೆಯೂ ಸೃಷ್ಟಿ ಯಾಗುವುದಿಲ್ಲ. ಆದರೆ ಬಿಜೆಪಿ ಚಿಹ್ನೆಯಡಿಯಲ್ಲಿಯೇ ಸ್ಪರ್ಧಿ ಸುವ ಬಯಕೆಯನ್ನು ಅವರು ಹೊಂದಿ ದ್ದಾರೆಂದು ಹೇಳಲಾಗುತ್ತಿದೆ. ಇದೆ ಲ್ಲದರ ಮಧ್ಯೆ ನಿಖೀಲ್‌ ಕುಮಾರಸ್ವಾಮಿ ಕೂಡಾ ಸ್ಪರ್ಧೆಗೆ ಉತ್ಸುಕರಾಗಿದ್ದು ಕುಮಾರ ಸ್ವಾಮಿ ಒಪ್ಪಿಗೆ ಸೂಚಿಸಿಲ್ಲ. ಇವರಿಬ್ಬರನ್ನು ಹೊರತುಪಡಿಸಿ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಡಿಕೆ ಸೋದರರಿಗೆ ಪೈಪೋಟಿ ಲೆಕ್ಕಾಚಾರ ಕುಮಾರಸ್ವಾಮಿಯವರದು.
ಜೆಡಿಎಸ್‌ ಮುಕ್ತವೇ?: ರಾಮನಗರ ಡಿ. ಕೆ.ಶಿವಕುಮಾರ್‌ ಅವರ ಜನ್ಮ ಭೂಮಿಯಾದರೆ, ಕುಮಾರಸ್ವಾಮಿಯವರ ಕರ್ಮಭೂಮಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಗಡಿ, ಕನಕಪುರ, ರಾಮನಗರದಲ್ಲಿ ಕಾಂಗ್ರೆಸ್‌ ಗೆದ್ದರೆ, ಚನ್ನಪಟ್ಟಣ ಮಾತ್ರ ಜೆಡಿಎಸ್‌ ಪಾಲಾಗಿತ್ತು. ಈಗ ಶತಪ್ರಯತ್ನದ ಮೂಲಕ ಚನ್ನಪಟ್ಟಣವನ್ನೂ ಗೆದ್ದು ರಾಮ ನಗರವನ್ನು “ಜೆಡಿಎಸ್‌ ಮುಕ್ತ’ ಗೊಳಿಸಬೇಕೆಂಬ ಹಠ ಡಿಕೆ ಸೋದರರದ್ದು. ಹೀಗಾಗಿ ದೇವೇಗೌಡ ಕುಟುಂಬ – ಡಿಕೆ ಸೋದರರ ಜಿದ್ದಾಜಿದ್ದಿಗೆ ಇದು ವೇದಿಕೆಯಾಗುವುದು ನಿಶ್ಚಿತ.

ಜ್ಯೋತಿಷಿ ಸಲಹೆ ಮೇರೆಗೆ ಚನಪಟ್ಟಣದಿಂದ ಡಿಕೆಶಿ ಸ್ಪರ್ಧೆ?  

ಈಗಿರುವ ಚರ್ಚೆಯ ಪ್ರಕಾರ ಜ್ಯೋತಿಷಿಯೊಬ್ಬರ ಸಲಹೆ ಪ್ರಕಾರ ಶಿವಕುಮಾರ್‌ ಚನ್ನಪಟ್ಟಣದಿಂದ ಸ್ಪರ್ಧೆಗೆ ಇಳಿದಿದ್ದಾರೆ ಎನ್ನಲಾಗಿದೆ. ಇದೊಂದು ತಂತ್ರಗಾರಿಕೆಯ ಆಟ. ಏಕೆಂದರೆ ಚನ್ನಪಟ್ಟಣದ ಜಾತಿ ಸಮೀಕರಣ ಶಿವಕುಮಾರ್‌ಗೆ ಸ್ಪಷ್ಟವಾಗಿ ಗೊತ್ತು. ಇಲ್ಲಿ ಸುಮಾರು 25 ಸಾವಿರ ಕುರುಬರು, 30 ಸಾವಿರ ಮುಸ್ಲಿಮರು ಹಾಗೂ 25 ಸಾವಿರ ದಲಿತ ಸಮುದಾಯದ ಮತಗಳಿವೆ. ಸಿದ್ದರಾಮಯ್ಯ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಪ್ರಯತ್ನಕ್ಕೆ ಈ “ಅಹಿಂದ’ ಮತ ಕ್ರೋಡೀಕರಣ ಹೇಗೆ ಆಗಲಿದೆ ಎಂಬುದು ಗೊತ್ತಿಲ್ಲ. ಆಗ ಶಿವಕುಮಾರ್‌ ಪಾಲಿಗೆ ಸ್ಪರ್ಧೆ ದುಬಾರಿ ಆಗಲೂಬಹುದೆಂಬ ವಾದವೂ ಇದೆ. ಖ್ಯಾತ ಜ್ಯೋತಿಷಿಯೊಬ್ಬರ ಜತೆಗೆ ಡಿ.ಕೆ.ಸುರೇಶ್‌ ಕೂಡ 2 ದಿನಗಳ ಹಿಂದೆ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿರುವುದರಿಂದ ಸುರೇಶ್‌ ಸ್ಪರ್ಧೆ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

 

-ರಾಘವೇಂದ್ರ ಭಟ್‌

ಟಾಪ್ ನ್ಯೂಸ್

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

During the Lok Sabha election, there was a discussion about caste-wise DCM, but….: hc mahadevappa

Lok Sabha ಚುನಾವಣೆ ವೇಳೆ ಜಾತಿವಾರು ಡಿಸಿಎಂ ಚರ್ಚೆ ನಡೆದಿತ್ತು, ಆದರೆ….: ಮಹಾದೇವಪ್ಪ

7-kodagu

Madikeri: ಜು.1 ರಿಂದ ಭಾರಿ ವಾಹನಗಳ ಸಂಚಾರ ನಿಷೇಧ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

8-health

PCOD (ಪಾಲಿಸಿಸ್ಟಿಕ್‌ ಅಂಡಾಶಯದ ಕಾಯಿಲೆ) ಸಮಸ್ಯೆ ಮತ್ತು ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.