ನೋ-ಪಾರ್ಕಿಂಗ್‌ ಜಾಗದಲ್ಲಿ ಕಾರು: ಪೇಚಿಗೆ ಸಿಲುಕಿದ ಬಾಲಿವುಡ್‌ ಸ್ಟಾರ್‌ ಕಾರ್ತಿಕ್‌ ಆರ್ಯನ್‌


Team Udayavani, Feb 19, 2023, 11:33 AM IST

karti aryan

ಮುಂಬೈ:ಬಾಲಿವುಡ್‌ ನಟ ಕಾರ್ತಿಕ್‌ ಆರ್ಯನ್‌ ತಮ್ಮ ಕಪ್ಪು ಬಣ್ಣದ ಲ್ಯಾಂಬೋರ್ಗಿನಿ ಕಾರನ್ನು ತಪ್ಪು ಜಾಗದಲ್ಲಿ ನಿಲ್ಲಿಸಿ ಪೋಲಿಸರಿಂದ ಚಲನ್‌ ಕಟ್ಟಿಸಿಕೊಂಡಿದ್ದೂ ಅಲ್ಲದೇ ಅವರ ಸಿನೆಮಾದ ಡೈಲಾಗ್‌ ಮೂಲಕವೇ ಪೋಲಿಸರು ಅವರನ್ನು ಟ್ವಿಟರ್‌ನಲ್ಲಿ ಎಚ್ಚರಿಸಿದ ಘಟನೆ ನಡೆದಿದೆ.

ಕಾರ್ತಿಕ್‌ ಆರ್ಯನ್‌ ತಮ್ಮ ಹೊಸಾ ಸಿನೆಮಾ ʻಶೆಹಜಾದಾʼ ನಿಮಿತ್ತ ದೇವರ ದರ್ಶನಕ್ಕೆಂದು ಸಿದ್ದಿವಿನಾಯಕ ದೇವಸ್ಥಾನಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ  ಅವರು ತಮ್ಮ ಕಾರನ್ನು ನೋ-ಪಾರ್ಕಿಂಗ್‌ ಝೋನ್‌ನಲ್ಲಿ ನಿಲ್ಲಿಸಿ ತೆರಳಿದ್ದಾರೆ.

ತಪ್ಪು ಜಾಗದಲ್ಲಿ ತಮ್ಮ ಕಾರು ನಿಲ್ಲಿಸಿದ್ದರ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದ್ದಲ್ಲದೆ ಟ್ರಾಫಿಕ್‌ ಪೋಲಿಸರು ದಂಡವನ್ನೂ ವಿಧಿಸಿದ್ದಾರೆ.

ಅದೂ ಅಲ್ಲದೇ ಕಾರ್ತಿಕ್‌ ಅವರ ಕಪ್ಪು ಬಣ್ಣದ ಲ್ಯಾಂಬೋರ್ಗಿನಿ ಕಾರನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಮುಂಬೈ ಟ್ರಾಫಿಕ್‌ ಪೋಲಿಸರು ಅದರ ಕೆಳಗೆ ಕಾರ್ತಿಕ್‌ ಅವರದ್ದೇ ಸಿನೆಮಾದ ಡೈಲಾಗ್‌ ಒಂದನ್ನು ಬರೆದಿದ್ದಾರೆ.

ಮುಂಬೈ ಟ್ರಾಫಿಕ್‌ ಪೋಲಿಸ್‌ ಎಂಬ ಟ್ವಿಟರ್‌ ಅಕೌಂಟ್‌ನಲ್ಲಿ ಕಾರ್ತಿಕ್‌ ಕಾರಿನ ಫೋಟೋವನ್ನು ಹಂಚಿಕೊಂಡ ಪೋಲಿಸರು, ʻಸಮಸ್ಯೆ? ಸಮಸ್ಯೆ ಏನೆಂದ್ರೆ ಕಾರನ್ನು ರಾಂಗ್‌ ಸೈಡ್‌ನಲ್ಲಿ ನಿಲ್ಲಿಸಲಾಗಿದೆ. ʻಶೆಹಜಾದಾಸ್‌ʼ ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸುವ ʻಭೂಲ್‌ʼ ಮಾಡಬೇಡಿʼ ಎಂದು ಬರೆದುಕೊಂಡಿದೆ.

ಫೋಟೋದಲ್ಲಿ ಕಾರಿನ ನಂಬರ್‌ ಪ್ಲೇಟನ್ನು ಬ್ಲರ್‌ ಮಾಡಲಾಗಿದೆ. ಪೋಲಿಸರು ಕಾರ್ತಿಕ್‌ ಅವರಿಗೆ ಎಷ್ಟು ಚಲನ್‌ ವಿಧಿಸಿದ್ದಾರೆ ಎಂದು ಹೇಳಿಲ್ಲ. ಆದರೆ ತಾವು ಕಾರ್ತಿಕ್‌ ಅವರ ಸಿನೆಮಾದ ಡೈಲಾಗ್‌ ಮೂಲಕ ಜನರಿಗೆ ಅರಿವು ಮೂಡಿಸುವ ಕೆಲಸ ಮಾಡಿದ್ದೇವೆ ಎಂದು ಪೋಲಿಸರು ಹೇಳಿದ್ಧಾರೆ.

ಪೋಲಿಸರು ಹೀಗೆ ಬರೆಯುವಾಗ ಕಾರ್ತಿಕ್‌ನ ʻಭೂಲ್‌ ಬುಲಯ್ಯಾ 2ʼ ಮತ್ತು ʻಶೆಹಜಾದಾʼ ಚಿತ್ರದ ಹೆಸರುಗಳನ್ನು ಪ್ರಸ್ತಾಪಿಸಿದ್ದು ಕಾರ್ತಿಕ್‌ ಆರ್ಯನ್‌ ಹೆಸರನ್ನು ಎಲ್ಲೂ ಪ್ರಸ್ತಾಪಿಸಿಲ್ಲ.‌

ಟ್ರಾಫಿಕ್‌ ನಿಯಮಗಳನ್ನು ಯಾರು ಪಾಲನೆ ಮಾಡುವುದಿಲ್ಲವೋ, ಅವರು ಯಾರೇ ಆಗಿರಲಿ, ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಹಿರಿಯ ಪೋಲಿಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

 

ಇದನ್ನೂ ಓದಿ: ಕುತೂಹಲಕ್ಕೆ ತೆರೆ: ಬಹು ಸಮಯದ ಬಳಿಕ ಮೇಘನಾ ರಾಜ್‌ ಬೆಳ್ಳಿ ತೆರೆಗೆ ಎಂಟ್ರಿ

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.