Brand Bengaluru; ತಲಾ 100 ಕೋ.ರೂ. ಅನುದಾನ ಕೊಡಿ: ಶಾಸಕರ ಬೇಡಿಕೆ

ಬಿಎಸ್‌ವೈ, ಸಿದ್ದು-1 ಸರಕಾರದಲ್ಲಿ ಸಿಗುತ್ತಿತ್ತು, ಈಗ ಇಲ್ಲವೇ ಇಲ್ಲ: ಸಭೆಯಲ್ಲಿ ಅಹವಾಲು

Team Udayavani, Jul 28, 2024, 6:54 AM IST

BNG-Meet

ಬೆಂಗಳೂರು: ಅನುದಾನಕ್ಕಾಗಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಶಾಸಕರು ಇತ್ತೀಚೆಗೆ ತಮ್ಮ ಶಾಸಕಾಂಗ ಸಭೆಯಲ್ಲಿ ಬೇಡಿಕೆ ಮಂಡಿಸಿದ ಬೆನ್ನಲ್ಲೇ ಈಗ ಬಿಜೆಪಿ ಶಾಸಕರೂ ಸರಕಾರಕ್ಕೆ ದುಂಬಾಲು ಬಿದ್ದಿದ್ದಾರೆ. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ತಲಾ 100 ಕೋಟಿ ರೂ. ಅನುದಾನ ನೀಡುವಂತೆ ಸರಕಾರವನ್ನು ಆಗ್ರಹಿಸಿದ್ದಾರೆ. “ಬ್ರ್ಯಾಂಡ್‌ ಬೆಂಗಳೂರು’ ಅಭಿವೃದ್ಧಿ ಕುರಿತಾದ ಸಭೆಯಲ್ಲಿ ಈ ಕೂಗು ಕೇಳಿ ಬಂದಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಬೆಂಗಳೂರಿನ ಎಲ್ಲ 28 ಕ್ಷೇತ್ರಗಳ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ಅಧಿಕಾರಿಗಳ ಸಭೆ ಕರೆದಿದ್ದರು. ಅಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಸಹಿತ ಹಲವು ಬಿಜೆಪಿ ಶಾಸಕರು ಅನುದಾನಕ್ಕಾಗಿ ಬೇಡಿಕೆ ಮಂಡಿಸಿದರು.

ಈ ಹಿಂದೆ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ಅನುದಾನವನ್ನು ನೀಡಿದ್ದರು. ಅಷ್ಟೇ ಯಾಕೆ, ಸಿದ್ದರಾಮಯ್ಯ ಅವರ ಮೊದಲ ಆಡಳಿತಾವಧಿಯಲ್ಲೂ ಅನುದಾನ ಪೂರೈಸಲಾಗಿತ್ತು. ಈಗ ಹೊಸ ಸರಕಾರ ಬಂದು ಒಂದೂವರೆ ವರ್ಷ ಕಳೆದರೂ ಬೆಂಗಳೂರಿನ ಶಾಸಕರಿಗೆ ಅನುದಾನದ ನೀಡುವ ಬಗ್ಗೆ ಚಕಾರ ಎತ್ತುತ್ತಿಲ್ಲ. ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಕೋಟಿ ರೂ. ಕೊಡಬೇಕು. ಅದರಿಂದ ಕ್ಷೇತ್ರಗಳಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅನುಕೂಲ ಆಗಲಿದೆ ಎಂದು ಅಲವತ್ತುಕೊಂಡಿದ್ದಾರೆ.

ಬೇಡಿಕೆ ಇಟ್ಟವರಾರು?
ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ. ಆದರೆ ಸರಕಾರದಿಂದ ಅನುದಾನ ಸಿಗುತ್ತಿಲ್ಲ. ಶಾಸಕರಿಗೆ ತಲಾ 100 ಕೋಟಿ ಎಂದು ಲೆಕ್ಕ ಹಾಕಿದರೂ 3ರಿಂದ 3.5 ಸಾವಿರ ಕೋಟಿ ರೂ. ಆಗುತ್ತದೆ. ಆದಷ್ಟು ಬೇಗ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಎಲ್ಲರ ಪರವಾಗಿ ಒತ್ತಾಯಿಸಿದರು.

ಪೂರಕವಾಗಿ ಶಾಸಕರಾದ ಮುನಿರಾಜು, ರವಿ ಸುಬ್ರಮಣ್ಯ, ಸತೀಶ್‌ರೆಡ್ಡಿ, ಮಂಜುಳಾ, ಡಾ| ಸಿ.ಎನ್‌. ಅಶ್ವತ್ಥ ನಾರಾಯಣ, ವಿಧಾನ ಪರಿಷತ್ತಿನ ಸದಸ್ಯ ಗೋಪಿನಾಥ್‌ ಪರೋಕ್ಷವಾಗಿ ಅನುದಾನಕ್ಕೆ ಬೇಡಿಕೆ ಇಟ್ಟರು. ಮಹದೇವಪುರ ಅತಿಹೆಚ್ಚು ತೆರಿಗೆ ಪಾವತಿಸುವ ಕ್ಷೇತ್ರವಾಗಿದೆ. ಆದರೆ ಅಲ್ಲಿ ಕುಡಿಯುವ ನೀರು ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನದ ಆವಶ್ಯಕತೆ ಇದೆ.

ಅದೇ ರೀತಿ, ಇ-ಮಾರುಕಟ್ಟೆಯಿಂದ ವಾಣಿಜ್ಯ ಮಳಿಗೆಗಳಿಗೆ ವ್ಯಾಪಾರ ವಹಿವಾಟು ಕಡಿಮೆಯಾಗಿದೆ. ಅದಕ್ಕಾಗಿ ತೆರಿಗೆಯಲ್ಲಿ ತುಸು ರಿಯಾಯಿತಿ ಅಥವಾ ವಿನಾಯಿತಿ ನೀಡುವ ಮೂಲಕ ಉತ್ತೇಜನ ನೀಡಬೇಕು ಎನ್ನುವುದರ ಸಹಿತ ವಿವಿಧ ರೂಪದಲ್ಲಿ ಬೇಡಿಕೆ ಇಟ್ಟರು ಎಂದು ಮೂಲಗಳು ತಿಳಿಸಿವೆ.

“ಕೆಲವು ಶಾಸಕರು ಅನುದಾನದ ಬೇಡಿಕೆ ಇಟ್ಟಿದ್ದಾರೆ. ಅದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಲವು ಸಚಿವರೊಂದಿಗೆ ಚರ್ಚಿಸಿ, ಒದಗಿಸುವ ಪ್ರಯತ್ನ ಮಾಡುತ್ತೇನೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗುವುದು.” – ಡಿ.ಕೆ. ಶಿವಕುಮಾರ್‌, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.