Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

ದೆಮ್‌ಚೊಕ್ ಪ್ರದೇಶಗಳಲ್ಲಿನ ಗಸ್ತು ಪ್ರಕ್ರಿಯೆಯತ್ತ ಗಮನ ಹರಿಸಲಿದೆ...

Team Udayavani, Oct 22, 2024, 2:40 PM IST

Brics Summit 2024:ಬ್ರಿಕ್ಸ್ ಸಮಾವೇಶಕ್ಕೆ ಮುನ್ನುಡಿ ಬರೆದ ಭಾರತ -ಚೀನಾ ಸಂಘರ್ಷ ಶಮನ

ಗಡಿ ಪ್ರದೇಶದಲ್ಲಿ ಗಸ್ತಿಗೆ ಸಂಬಂಧಿಸಿದಂತೆ ಚೀನಾದ ಜೊತೆಗೆ ಒಂದು ಒಪ್ಪಂದಕ್ಕೆ ಬರಲಾಗಿದೆ ಎಂದು ಭಾರತ ಇತ್ತೀಚೆಗೆ ಘೋಷಿಸಿದೆ. ಮುಂಬರುವ ಬ್ರಿಕ್ಸ್ ಸಮಾವೇಶಕ್ಕೆ ಮುನ್ನ ಈ ಬೆಳವಣಿಗೆ ನಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಮಿಲಿಟರಿ ಸಂಘರ್ಷದತ್ತ ಮುಖ ಮಾಡಿ ನಿಂತಿದ್ದ ನೆರೆ ರಾಷ್ಟ್ರಗಳಾದ ಭಾರತ ಮತ್ತು ಚೀನಾಗಳು ತಮ್ಮ ಸಂಬಂಧವನ್ನು ಸುಧಾರಿಸುವತ್ತ ಹೆಜ್ಜೆ ಇಡುವುದರ ಸಂಕೇತವಾಗಿದೆ.

ಅಕ್ಟೋಬರ್ 21, ಸೋಮವಾರದಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮಾಧ್ಯಮಗಳೊಡನೆ ಮಾತನಾಡುತ್ತಾ, ಭಾರತ ಮತ್ತು ಚೀನಾಗಳ ಗಡಿಯಾದ ಲೈನ್ ಆಫ್ ಆ್ಯಕ್ಚುವಲ್ ಕಂಟ್ರೋಲ್ (ಎಲ್ಎಸಿ) ನಲ್ಲಿ ಗಸ್ತು ನಡೆಸುವುದಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳು ಒಂದು ಒಪ್ಪಂದಕ್ಕೆ ಬಂದಿವೆ ಎಂದಿದ್ದಾರೆ. 1962ರಲ್ಲಿ ಭಾರತ ಚೀನಾ ನಡುವೆ ನಡೆದ ಯುದ್ಧದ ಬಳಿಕ ಸ್ಥಾಪಿಸಲಾದ, ಅನಧಿಕೃತವಾದ ಎಲ್ಎಸಿ ಭಾರತದ ನಿಯಂತ್ರಣದಲ್ಲಿರುವ ಪೂರ್ವ ಲಡಾಖ್ ಮತ್ತು ಚೀನಾ ನಿಯಂತ್ರಿತ ಅಕ್ಸಾಯ್ ಚಿನ್ ಪ್ರದೇಶಗಳನ್ನು ಪ್ರತ್ಯೇಕಿಸುತ್ತದೆ. ಯುದ್ಧದ ಬಳಿಕ ಜಾರಿಗೆ ಬಂದ ತಾತ್ಕಾಲಿಕ ಕದನ ವಿರಾಮದ ಬಳಿಕ, ಭಾರತ ಮತ್ತು ಚೀನಾಗಳು ಈ ಗಡಿಯನ್ನು ಅನುಸರಿಸುತ್ತಾ ಬಂದಿವೆ. ವರದಿಗಳ ಪ್ರಕಾರ, ಪ್ರಸ್ತುತ ಒಪ್ಪಂದ ವಿವಾದಾತ್ಮಕ, ಉದ್ವಿಗ್ನ ಪ್ರದೇಶಗಳಾದ ದೆಪ್ಸಾಂಗ್ ಮತ್ತು ದೆಮ್‌ಚೊಕ್ ಪ್ರದೇಶಗಳಲ್ಲಿನ ಗಸ್ತು ಪ್ರಕ್ರಿಯೆಯತ್ತ ಗಮನ ಹರಿಸಲಿದೆ.

ಚೀನಾದ ಜೊತೆಗೆ ಹಲವು ವಾರಗಳ ಕಾಲ, ಹಲವು ಸುತ್ತಿನ ಮಾತುಕತೆಗಳು ನಡೆದಿದ್ದು, ಇದರ ಪರಿಣಾಮವಾಗಿ ಎಲ್ಎಸಿ ಆದ್ಯಂತ ಗಸ್ತು ಪ್ರಕ್ರಿಯೆಗೆ ಒಂದು ಸಮರ್ಪಕ ಮಾರ್ಗೋಪಾಯ ಲಭಿಸಿದೆ ಎಂದು ಮಿಸ್ರಿ ಹೇಳಿದ್ದಾರೆ. ಈ ಒಪ್ಪಂದ ಸೇನಾ ಪಡೆಗಳನ್ನು ಹಿಂಪಡೆಯಲು ಅನುಕೂಲ ಕಲ್ಪಿಸಿದ್ದು, ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಯಾಗಿಸಿ, 2020ರ ಚಕಮಕಿಯ ಬಳಿಕ ಈ ಪ್ರದೇಶದಲ್ಲಿ ತಲೆದೋರಿದ ವಿಷಮ ಪರಿಸ್ಥಿತಿಯನ್ನು ನಿವಾರಿಸಲು ನೆರವಾಗಲಿದೆ. ಆದರೆ, ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (ಎಸ್‌ಸಿಎಂಪಿ) ವರದಿಯ ಪ್ರಕಾರ, ಬೀಜಿಂಗ್ ಇನ್ನೂ ಈ ಒಪ್ಪಂದವನ್ನು ಖಚಿತಪಡಿಸಿಲ್ಲ.

ಭಾರತ ಮತ್ತು ಚೀನಾಗಳ ನಡುವೆ ವಿವಾದಾತ್ಮಕವಾದ, ಅತ್ಯಂತ ದೀರ್ಘವಾದ, 3,440 ಕಿಲೋಮೀಟರ್ (2,100 ಮೈಲಿ) ಉದ್ದನೆಯ ಗಡಿ ಇದ್ದು, ಇದನ್ನು ಇಂದಿಗೂ ಖಚಿತವಾಗಿ ಗುರುತಿಸಲಾಗಿಲ್ಲ. ನೈಸರ್ಗಿಕ ಅಂಶಗಳಾದ ನದಿಗಳು, ಸರೋವರಗಳು, ಮತ್ತು ಹಿಮಾಚ್ಛಾದಿತ ಪ್ರದೇಶಗಳು ಗಡಿ ಪ್ರದೇಶ ಆಗಾಗ್ಗೆ ಬದಲಾಗುವಂತೆ ಮಾಡುತ್ತವೆ. ಇದರಿಂದಾಗಿ ಎರಡೂ ಬದಿಯ ಯೋಧರು ನೇರಾನೇರ ಎದುರಾಗಿ, ಚಕಮಕಿಯ ಸಾಧ್ಯತೆಗಳು ಉಂಟಾಗುತ್ತವೆ. ಭಾರತ ಮತ್ತು ಚೀನಾಗಳೆರಡೂ ಎಲ್ಎಸಿ ಆದ್ಯಂತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಲುವಾಗಿ ಸ್ಪರ್ಧೆಗಿಳಿದಿವೆ.

ಉಭಯ ದೇಶಗಳ ಯೋಧರ ನಡುವೆ ಇತ್ತೀಚಿನ ಅತ್ಯಂತ ತೀಕ್ಷ್ಣ ಚಕಮಕಿ ಜೂನ್ 15, 2020ರಂದು ಗಲ್ವಾನ್ ಕಣಿವೆಯಲ್ಲಿ ತಲೆದೋರಿತು. ಈ ಚಕಮಕಿಯಲ್ಲಿ ಭಾರತದ 20 ಸೈನಿಕರು ಮತ್ತು ಚೀನಾದ ಕನಿಷ್ಠ 4 ಸೈನಿಕರು ಪ್ರಾಣ ಕಳೆದುಕೊಂಡಿದ್ದರು. ಈ ಚಕಮಕಿಯಲ್ಲಿ ಉಭಯ ದೇಶಗಳ ಸೈನಿಕರು ಮದ್ದು ಗುಂಡುಗಳನ್ನು ಬಳಸದೆ, ಹೊಡೆದಾಟಕ್ಕೆ ಇಳಿದು ಪ್ರಾಣ ಕಳೆದುಕೊಂಡಿದ್ದರು. ಭಾರತ ಒಂದು ಅತ್ಯಂತ ಎತ್ತರದ ವಾಯುನೆಲೆಗೆ ತೆರಳಲು ನೂತನ ಮಾರ್ಗವನ್ನು ನಿರ್ಮಿಸುತ್ತಿತ್ತು. ಇದನ್ನು ಚೀನಾ ಪ್ರಚೋದನೆ ಎಂದು ಪರಿಗಣಿಸಿದ್ದರಿಂದ ಈ ಹೊಡೆದಾಟ ಸಂಭವಿಸಿತ್ತು.

ಅಂದಿನಿಂದ, ಭಾರತ ಮತ್ತು ಚೀನಾಗಳು ತಮ್ಮ ಯೋಧರನ್ನು ಗಡಿಯಾದ್ಯಂತ ನಿಯೋಜಿಸಿವೆ. ಇದೇ ಸಮಯದಲ್ಲಿ, ಉಭಯ ದೇಶಗಳು ರಾಜತಾಂತ್ರಿಕ ವಿಧಾನದಲ್ಲೂ ಸುದೀರ್ಘ ಮಾತುಕತೆಗಳನ್ನು ಮತ್ತು ಮಿಲಿಟರಿ ಸಭೆಗಳನ್ನು ನಡೆಸುತ್ತಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸಿವೆ. ಆದರೆ ಪ್ರಸ್ತುತ ಉದ್ವಿಗ್ನ ಪರಿಸ್ಥಿತಿ ಜಗತ್ತಿನ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಾದ ಭಾರತ ಮತ್ತು ಚೀನಾಗಳ ನಡುವಿನ ಆರ್ಥಿಕ ಸಹಕಾರ ಮತ್ತು ಇತರ ಕ್ಷೇತ್ರಗಳ ಮೇಲೆ ದುಷ್ಪರಿಣಾಮ ಬೀರಿದೆ. ಅದರಲ್ಲೂ ಭಾರತ ಚೀನಾದ ಹೂಡಿಕೆಯ ಮೇಲೆ ಅತ್ಯಂತ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.

ರಷ್ಯಾದ ಕಜಾ಼ನ್ ನಲ್ಲಿ ಅಕ್ಟೋಬರ್ 22ರಿಂದ 24ರ ತನಕ ನಡೆಯಲಿರುವ, ಬೆಳೆಯುತ್ತಿರುವ ಆರ್ಥಿಕತೆಗಳ‌ ಸಭೆಯಾದ ಬ್ರಿಕ್ಸ್ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ತೆರಳುವ ಒಂದು ದಿನ ಮುನ್ನ ಮಿಸ್ರಿ ನೂತನ ಒಪ್ಪಂದದ ಘೋಷಣೆ ಮಾಡಿದ್ದಾರೆ. ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಮಾತುಕತೆ ನಡೆಸುವ ಸಾಧ್ಯತೆಗಳಿವೆ. ಬ್ರಿಕ್ಸ್ ಒಕ್ಕೂಟವನ್ನು 2009ರಲ್ಲಿ ಸ್ಥಾಪಿಸಿದಾಗ, ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾಗಳು ಅದರ ಸ್ಥಾಪಕ ಸದಸ್ಯ ರಾಷ್ಟ್ರಗಳಾಗಿದ್ದವು. ಕಾಲಕ್ರಮೇಣ, ಈ ಒಕ್ಕೂಟಕ್ಕೆ ದಕ್ಷಿಣ ಆಫ್ರಿಕಾ, ಈಜಿಪ್ಟ್, ಇಥಿಯೋಪಿಯ, ಇರಾನ್, ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ದೇಶಗಳು ಸೇರ್ಪಡೆಗೊಂಡವು.

*ಗಿರೀಶ್ ಲಿಂಗಣ್ಣ
(ಲೇಖಕರು ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ)

ಟಾಪ್ ನ್ಯೂಸ್

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

Gandhi Jayanti: ಆ ದಿನಗಳು ಮತ್ತೇ ಮರಳಲಾರವು…ಮತ್ತೇ ಬಾ ಬಾಪು!

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

1-nikk

Viral video; ಕನ್ಸರ್ಟ್ ವೇಳೆ ಲೇಸರ್ ಬಿಟ್ಟ ಪ್ರೇಕ್ಷಕ!: ವೇದಿಕೆಯಿಂದ ಹೊರಗೋಡಿದ ನಿಕ್

ಗಾಳಿಯಲ್ಲೇ ರಾಕೆಟ್ ಹಿಡಿಯುವ ಯಶಸ್ವಿ ಪ್ರಯೋಗ:Rocket ಮರುಬಳಕೆಗೆ ಸ್ಪೇಸ್ಎಕ್ಸ್ ಹೊಸ ಭಾಷ್ಯ

ಗಾಳಿಯಲ್ಲೇ ರಾಕೆಟ್ ಹಿಡಿಯುವ ಯಶಸ್ವಿ ಪ್ರಯೋಗ:Rocket ಮರುಬಳಕೆಗೆ ಸ್ಪೇಸ್ಎಕ್ಸ್ ಹೊಸ ಭಾಷ್ಯ

ashish.jpg

Celebrity Corner: ನಿಜವಾದ ಗೆಳೆಯನನ್ನು ಕೊಟ್ಟ ಈ ಕ್ರಿಕೆಟ್‌ ಜಗತ್ತಿಗೆ ನಾನು ಚಿರಋಣಿ…

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಮುಧೋಳ: ಮರಳುಚೋರರಿಂದ ಹಗಲು ದರೋಡೆ

ಮುಧೋಳ: ಮರಳುಚೋರರಿಂದ ಹಗಲು ದರೋಡೆ

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

7(1)

Gangolli ಬಂದರಿಗೆ ಮರೀಚಿಕೆಯಾದ ಅಭಿವೃದ್ಧಿ

4

UV Fusion: ಕಣ್ಮರೆಯಾಗುತ್ತಿರುವ ಪರಂಪರಾನುಗತ ವೃತ್ತಿಗಳು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.