![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 6, 2021, 7:00 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕಟ್ಟಡ, ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಸಹಾಯಧನವನ್ನು ನೇರ ವರ್ಗಾವಣೆ ಮೂಲಕ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರಕಾರ, ಇವರಿಗೆ ಆಹಾರ ಕಿಟ್ ನೀಡುವುದಕ್ಕೂ ಮುಂದಾಗಿದೆ.
ಈ ಸಂಬಂಧ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಇದರಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡ 22 ಲಕ್ಷಕ್ಕೂ ಅಧಿಕ ಕಾರ್ಮಿಕರಿಗೆ ಆಹಾರ ಕಿಟ್ ದೊರಕಲಿದೆ.
ಸಹಾಯ ಧನ ಹಂಚಿಕೆ
2ನೇ ಅಲೆಯ ಹಿನ್ನೆಲೆಯಲ್ಲಿ ಘೋಷಿಸಲಾದ ಪ್ಯಾಕೇಜ್ನಡಿಯ ಈ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ 749.55 ಕೋ.ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಶನಿವಾರ ಹೇಳಿದರು.
ಕೌÒರಿಕರು, ಅಗಸರು, ಟೈಲರುಗಳು, ಹಮಾಲರು, ಗೃಹ ಕಾರ್ಮಿಕರು, ಮೆಕ್ಯಾನಿಕ್ ಗಳು, ಚಿಂದಿ ಆಯುವವರು, ಅಕ್ಕಸಾಲಿ ಗರು, ಕಮ್ಮಾರರು, ಕುಂಬಾರರು ಮತ್ತು ಭಟ್ಟಿ ಕಾರ್ಮಿಕರ ಸಹಿತ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ. ನೆರವು ಘೋಷಿಸಲಾಗಿದ್ದು, ಇದಕ್ಕಾಗಿ ಸೇವಾ ಸಿಂಧುವಿನಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸುಮಾರು 3.3 ಲಕ್ಷ ಫಲಾನುಭವಿಗಳಿಗೆ ಇದರಿಂದ ಅನುಕೂಲ ವಾಗಲಿದೆ ಎಂದು ಸಿಎಂ ತಿಳಿಸಿದರು.
ನಿರ್ಮಾಣ ಕಾರ್ಮಿಕರಿಗೆ ಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳ ಲಾಗುತ್ತಿದೆ. ನಿರ್ಮಾಣ ಸಂಸ್ಥೆಗಳೂ ತಮ್ಮ ಕಾರ್ಮಿಕರಿಗೆ ಲಸಿಕೆ ಒದಗಿಸಬೇಕೆಂದು ಸಿಎಂ ಸಲಹೆ ನೀಡಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.