Kolluru ಘಾಟಿಯಲ್ಲಿ ಬಸ್ ಅಪಘಾತ; ವಿದ್ಯಾರ್ಥಿಗಳ ಸಹಿತ 17 ಮಂದಿಗೆ ಗಾಯ
Team Udayavani, Jul 23, 2024, 12:54 AM IST
ಕೊಲ್ಲೂರು: ಶಿವಮೊಗ್ಗದಿಂದ ಕುಂದಾಪುರಕ್ಕೆ ಬರುತ್ತಿದ್ದ ಖಾಸಗಿ ಬಸ್ ಕೊಲ್ಲೂರು ಸಮೀಪದ ದಳಿ ಬಳಿಯ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಹಾನಿಗೀಡಾದ ಘಟನೆ ಜು. 22ರಂದು ಸಂಭವಿಸಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳ ಸಹಿತ 17 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಮರಕ್ಕೆ ಢಿಕ್ಕಿ ಹೊಡೆದು ನಿಂತ ಕಾರಣ ಸಂಭಾವ್ಯ ದುರಂತ ತಪ್ಪಿದೆ. ಕಳೆದ ಒಂದು ವಾರದಿಂದ ಮಳೆಯ ಹಿನ್ನೆಲೆಯಲ್ಲಿ ರಜೆ ಇದ್ದ ಕಾರಣ ಹಾಸ್ಟೆಲ್ನಲ್ಲಿದ್ದ ಸಾಗರ, ನಗರ, ಹೊಸನಗರ, ನಿಟ್ಟೂರು, ಶಿವಮೊಗ್ಗ ಪರಿಸರದ ವಿದ್ಯಾರ್ಥಿಗಳು ಮನೆಗೆ ತೆರಳಿದ್ದವರು ಸೋಮವಾರ ಈ ಬಸ್ಸಲ್ಲಿ ಮರಳಿ ಬರುತ್ತಿದ್ದರು.
ಹೊಸನಗರ ಮೂಲದ ಸಹನಾ ಡಿ.ಎಸ್., ಹೊಸಕೊಪ್ಪದ ಸಾಕ್ಷಿ ಹಾಗೂ ಶೀಯಾ, ಆಡಗಲ್ನ ಭವಾನಿ, ನವೀನ, ಚೇತನ ನೆಲ್ಲಿ ಬೀಡು, ಸತ್ಯನಾರಾಯಣ ನಿಟ್ಟೂರು, ಮಣಿಕಂಠ ಕಟ್ಟಿನಕರ, ಪೂರ್ಣಿಮಾ ಹೊನ್ನಾಳಿ, ಸಿಂಧೂ ಸುಳ್ಳಳ್ಳಿ, ಪ್ರೀತಮ್ ಸಂತೆಕಟ್ಟೆ, ಹೇಮಂತ್, ರಾಕೇಶ, ಸೂರ್ಯ ಕುಂದಾಪುರ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಉಡುಪಿ ಜಿಲ್ಲಾ ಹೆಚ್ಚುವರಿ ಎಸ್.ಪಿ. ಸಿದ್ಧಲಿಂಗಪ್ಪ, ಕೊಲ್ಲೂರು ಠಾಣೆಯ ಪಿಎಸ್ಐಗಳಾದ ವಿನಯ ಕೊರ್ಲಹಳ್ಳಿ, ಸುಧಾರಾಣಿ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೈಂದೂರು ಬಿಇಒ ನಾಗೇಶ ನಾಯಕ್, ಹೆಚ್ಚುವರಿ ಎಸ್ಪಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ದರು. ಕೊಲ್ಲೂರು ಹಾಗೂ ದಳಿ ನಿಟ್ಟೂರು ಪರಿಸರದ ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ಒಯ್ಯಲು ಸಹಕರಿಸಿದರು. ಶಾಲೆ, ಕಾಲೇಜಿನ ಮುಖ್ಯ ಶಿಕ್ಷಕರು, ಶಿಕ್ಷಕರು ಸುದ್ದಿ ತಿಳಿದೊಡನೆ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು
Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು
Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
Udupi:ಕರಾವಳಿ ನಿರ್ಲಕ್ಷ್ಯ ಮುಂದುವರಿದರೆ ಸಿಎಂ ಮನೆ ಮುಂದೆ ಧರಣಿ: ಜನಪ್ರತಿನಿಧಿಗಳ ಎಚ್ಚರಿಕೆ
Udupi: ಬೆಡ್ ಶೀಟ್ ಮಾರುವ ನೆಪದಲ್ಲಿ ಅಂಬಲಪಾಡಿ ವೃದ್ಧೆಯ ಮನೆಗೆ ನುಗ್ಗಿದ ಅಪರಿಚಿತ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.