ಬಸ್ – ಬೈಕ್ ಮುಖಾಮುಖಿ ಢಿಕ್ಕಿ: ಹುಟ್ಟಿದ ದಿನದಂದೇ ವಿದ್ಯಾರ್ಥಿ ಸಾವು
ದೇವಸ್ಥಾನದಿಂದ ಮರಳುತ್ತಿದ್ದಾಗ ಅಪಘಾತ
Team Udayavani, Jun 22, 2023, 5:30 AM IST
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಮೊಗೆರಡ್ಕ ಕ್ರಾಸ್ ಸಮೀಪ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ವಿದ್ಯಾರ್ಥಿ ಮೂಲತಃ ಕಾಸರಗೋಡು ಪೆರಿಯಡ್ಕ ಮೂಲದ ದೀಕ್ಷಿತ್ (19) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.
ಜೂ. 21ರಂದು ದೀಕ್ಷಿತ್ನ ಹುಟ್ಟುಹಬ್ಬವಾಗಿದ್ದರಿಂದ ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿತು. ಬಸ್ ಚಾಲಕ ಅತೀ ವೇಗದಲ್ಲಿ ಲಾರಿಯೊಂದನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ
ತೀರಾ ಬಲ ಭಾಗಕ್ಕೆ ಬಂದಿದ್ದು ಎದುರಿನಿಂದ ಬಂದ ಬೈಕ್ ಬಸ್ಸಿನ ಮುಂಭಾಗಕ್ಕೆ ನೇರವಾಗಿ ಢಿಕ್ಕಿ ಹೊಡೆಯಿತು.
ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆಗೆ ಗಂಭೀರ ಗಾಯ ವಾಗಿದ್ದು, ತತ್ಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ ಆ ವೇಳೆಗೆ ಅವರು ಮೃತಪಟ್ಟಿದ್ದರು. ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕ್ರೀಡಾಪಟು, ಕಂಬಳ ಓಟಗಾರ
ಮೃತ ದೀಕ್ಷಿತ್ ಪಡಂಗಡಿ ಗ್ರಾಮದ ಓಡೀಲಿನಲ್ಲಿ ಅಜ್ಜನ ಮನೆಯಲ್ಲಿದ್ದು, ವೇಣೂರಿನ ಎಸ್ಡಿಎಂ ಐಟಿಐಯಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿ ಶಿಕ್ಷಣ ಪಡೆಯುತ್ತಿದ್ದರು. ಉತ್ತಮ ಕ್ರೀಡಾಪಟುವಾಗಿದ್ದ ಈತ ಕಬಡ್ಡಿ ಆಟಗಾರನಾಗಿ ಜತೆಗೆ ಕಂಬಳದ ಓಟಗಾರನಾಗಿ ಗುರುತಿಸಿ ಕೊಂಡಿದ್ದರು.
ಮೃತ ದೀಕ್ಷಿತ್ ಹೆತ್ತವರು ಮತ್ತು ಸಹೋದರನನ್ನು ಅಗಲಿದ್ದಾರೆ. ಮೃತರ ಮನೆಗೆ ಮಾಜಿ ಶಾಸಕ ಕೆ. ವಸಂತ ಬಂಗೇರ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.