By Election: ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್ ಸಭೆ
ಮೂರೂ ಕ್ಷೇತ್ರಗಳನ್ನೂ ಗೆಲ್ಲಲು ಹೈಕಮಾಂಡ್ ಸೂಚನೆ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ವಿಸ್ತೃತ ಚರ್ಚೆ
Team Udayavani, Oct 17, 2024, 7:52 AM IST
ಬೆಂಗಳೂರು: ಉಪ ಚುನಾವಣೆ ಘೋಷಣೆ ಮರು ದಿನವೇ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದ್ದು, ಬುಧವಾರ ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಿಎಂ ಅಧಿಕೃತ ನಿವಾಸ “ಕಾವೇರಿ’ಯಲ್ಲಿ ಸಭೆ ನಡೆಸಿದರು.
ಇದರಲ್ಲಿ ಬಹುತೇಕ ಮೂರೂ ಕ್ಷೇತ್ರಗಳ ಉಪಚುನಾವಣೆ ಬಗ್ಗೆಯೇ ಸುದೀರ್ಘ ಚರ್ಚೆ ನಡೆ ದಿದೆ. ಶತಾಯಗತಾಯ “ಕ್ಲೀನ್ ಸ್ವೀಪ್ ‘ ಮಾಡಬೇಕು ಎಂದು ಸೂಚನೆ ನೀಡಿದ್ದು, ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿಯನ್ನು ರಾಜ್ಯ ನಾಯಕರಿಗೇ ಬಿಟ್ಟಿದ್ದಾರೆ ಎನ್ನಲಾಗಿದೆ. ನಿರೀಕ್ಷೆಯಂತೆ ಸಂಡೂರಿನಲ್ಲಿ ಮಾಜಿ ಶಾಸಕ ಇ. ತುಕಾರಾಂ ಪುತ್ರಿ ಅಥವಾ ಪುತ್ರನಿಗೇ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ.
ಅದರಲ್ಲೂ ಪುತ್ರಿ ಸೌಪರ್ಣಿಕಾ ಅವರನ್ನು ಅಖಾಡಕ್ಕಿಳಿಸುವ ಬಗ್ಗೆಯೇ ಹೆಚ್ಚು ಒಲವು ಇದೆ. ಉಳಿದೆರಡು ಕ್ಷೇತ್ರಗಳಿಗೆ ಗೆಲ್ಲುವ ಕುದುರೆಯ ಹುಡುಕಾಟ ಮತ್ತು ಲೆಕ್ಕಾಚಾರ ನಡೆದಿದೆ. ಬಣಗಳ ಭಿನ್ನಾಭಿಪ್ರಾಯಗಳನ್ನು ಬದಿ ಗೊತ್ತಿ, ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸ ಬೇಕು. ಸಾಮಾನ್ಯವಾಗಿ ಉಪ ಚುನಾ ವಣೆಯಲ್ಲಿ ಆಡಳಿತ ಪಕ್ಷದ ಹಿಡಿತ ಇರುತ್ತದೆ. ಅದು ಈ ಚುನಾವಣೆಯ ಗೆಲುವಿನ ರೂಪದಲ್ಲಿ ಪ್ರತಿಫಲನ ಆಗಬೇಕು ಎಂದು ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
ವಿಶೇಷವಾಗಿ ಚನ್ನಪಟ್ಟಣದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂಬು ದರ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಆರಂಭದಲ್ಲಿ ಇಲ್ಲಿ ತಾವೇ ಅಭ್ಯರ್ಥಿ ಅಂತಾ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದರು. ಅನಂತರದಲ್ಲಿ ಯಾರೇ ನಿಂತರೂ ತಾವೇ ಅಭ್ಯರ್ಥಿ ಎಂದರು. ಈ ಮಧ್ಯೆ ಅವರ ಸಹೋದರ ಹಾಗೂ ಮಾಜಿ ಸಂಸದ ಡಿ.ಕೆ. ಸುರೇಶ್ ಹೆಸರು ಕೇಳಿಬರುತ್ತಿದೆ. ಇದಕ್ಕೆ ಪೂರಕವಾಗಿ ಆ ಕ್ಷೇತ್ರದಲ್ಲಿ ಪಾರುಪತ್ಯ ಮೆರೆಯಲು ಸಿದ್ಧತೆ ಗಳನ್ನೂ ಮಾಡಿಕೊಂಡಿದ್ದಾರೆ. ಸಭೆಯಲ್ಲೂ ಇದು ಪ್ರಸ್ತಾವ
ವಾಗಿದ್ದು, ಅಂತಿಮವಾಗಿ ಆಯ್ಕೆಯನ್ನು ಸಿಎಂ- ಡಿಸಿಎಂ ಅವರಿಗೇ ಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್ ನೋಟಿಸ್
Vaccine: ಇನ್ನೆರಡು ವರ್ಷದೊಳಗೆ ಕೆಎಫ್ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್
By Election: ಮುಂದುವರಿದ ಚನ್ನಪಟ್ಟಣ ಎನ್ಡಿಎ ಅಭ್ಯರ್ಥಿ ಕಗ್ಗಂಟು
KEA: ಯುಜಿನೀಟ್; ಮಾಪ್ಅಪ್ ಸುತ್ತಿನ ಸೀಟು ಹಂಚಿಕೆ ಪ್ರಕಟ
MUST WATCH
ಹೊಸ ಸೇರ್ಪಡೆ
India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!
Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು
Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ
Supreme Court: ಸುಪ್ರೀಂನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ
Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.