Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

ಟ್ರುಡೊ ಹಠಮಾರಿತನವೇ ಬಾಂಧವ್ಯ ಹಳಸಲು ಕಾರಣ: ವಿದೇಶಾಂಗ ಸಚಿವಾಲಯ ವಕ್ತಾರ ರಣಧೀರ್‌ ಜೈಸ್ವಾಲ್‌

Team Udayavani, Oct 18, 2024, 7:55 AM IST

Jaiswal

ಹೊಸದಿಲ್ಲಿ: ಖಲಿಸ್ಥಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಸಂಬಂಧಿಸಿದಂತೆ ಭಾರತದ ಮೇಲೆ ಹೊರಿಸಲಾಗುತ್ತಿರುವ ಆರೋಪಗಳು ಸುಳ್ಳು ಹಾಗೂ ಪ್ರಕರಣದಲ್ಲಿ ಭಾರತ ಹೊಂದಿರುವ ನಿಲುವು ಮೌಲ್ಯಯುತವಾದದ್ದು ಎಂಬುದನ್ನು ಸ್ವತಃ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಅವರ ಹೇಳಿಕೆಗಳೇ ಸಾಬೀತು ಪಡಿಸಿವೆ. ಹೀಗೆಂದು ಭಾರತ ಸರಕಾರ ಗುರುವಾರ ಹೇಳಿದೆ ಜತೆಗೆ ಭಾರತದ ಮೇಲೆ ಆರೋಪಗಳನ್ನು ಮಾಡಿ ಉಭಯ ರಾಷ್ಟ್ರಗಳ ಸಂಬಂಧಕ್ಕೆ ಆಗಿರುವ ಹಾನಿಯ ಜವಾಬ್ದಾರಿಯನ್ನೂ ಟ್ರಾಡೊ ಅವರೇ ಹೊರ ಬೇಕು, ಇದಕ್ಕೆಲ್ಲ ಅವರ ಹಠಮಾರಿ ಧೋರಣೆಯೇ ಕಾರಣ ಎಂದೂ ಚಾಟಿ ಬೀಸಿದೆ.

ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ರಾಜ ತಾಂತ್ರಿಕರ ಕೈವಾಡವಿದೆ ಇದಕ್ಕೆಲ್ಲ ನನ್ನ ಬಳಿ ಪುರಾವೆ ಇದೆ ಎಂದು ಹೇಳಿಕೊಳ್ಳುತ್ತಿದ್ದ ಟ್ರುಡೊ ಬುಧವಾರ ಸಾರ್ವಜನಿಕವಾಗಿ ಭಾರತದ ಕೈವಾಡ ನಿರೂಪಿಸುವ ಯಾವುದೇ ಬಲವಾದ ಸಾಕ್ಷಿ ಇಲ್ಲ, ಅವುಗಳನ್ನು ಭಾರತದ ಮುಂದೆ ನಾವು ಪ್ರಸ್ತುತವೂ ಪಡಿಸಿಲ್ಲ ಎಂದು ಒಪ್ಪಿಕೊಂಡಿದ್ದರು.

ಈ ಬೆನ್ನಲ್ಲೇ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ಪತ್ರಿಕಾಗೋಷ್ಠಿ ನಡೆಸಿ, ಮೇಲ್ಕಂಡ ಹೇಳಿಕೆ ನೀಡಿದ್ದಾರೆ. ಜತೆಗೆ ನಮ್ಮ ರಾಜತಾಂತ್ರಿಕರ ವಿರುದ್ಧದ ಯಾವುದೇ ಸಾಕ್ಷ್ಯವಿಲ್ಲದ ಆರೋಪಗಳನ್ನು ನಾವು ಒಪ್ಪುವುದಿಲ್ಲ. ಟ್ರುಡೊ ಅವರ ಹೇಳಿಕೆಯೇ ನಮ್ಮ ನಿಲುವು ಸರಿ ಇದೆ ಎಂಬುದನ್ನು ಸಾಬೀತು ಪಡಿಸಿದೆ ಎಂದಿದ್ದಾರೆ.

ಬಿಷ್ಣೋಯ್‌ ವಿರುದ್ಧ ಕ್ರಮಕ್ಕೆ ಕೆನಡಾ ಸಿದ್ಧವಿಲ್ಲ: ಭಾರತ
ಕೆನಡಾದಲ್ಲಿನ ಟಾರ್ಗೆಟ್‌ ಕಿಲ್ಲಿಂಗ್‌ಗೆ ಭಾರ ತದ ರಾಜ ತಾಂತ್ರಿಕರು ಬಿಷ್ಣೋಯ್‌ ಗ್ಯಾಂಗ್‌ ಸದಸ್ಯರನ್ನು ಬಳಸುತ್ತಿದ್ಧಾರೆ ಎಂದಿದ್ದ ಕೆನಡಾ ಪೊಲೀಸರಿಗೆ ಭಾರತ ತಕ್ಕ ತಿರುಗೇಟು ನೀಡಿದೆ. ಕೆನಡಾದಲ್ಲಿರುವ ಬಿಷ್ಣೋಯ್‌ ಗ್ಯಾಂಗ್‌ನ 26 ಮಂದಿಯ ಹಸ್ತಾಂತರ ಕೋರಿ ಭಾರತ 1 ದಶಕದಿಂದ ಮನವಿ ಸಲ್ಲಿಸಿದರೂ ಕೆನಡಾ ಕ್ರಮ ಕೈಗೊಂಡಿಲ್ಲ ಎಂದಿದೆ.

ಪ್ರಧಾನಿ ಹುದ್ದೆ ತೊರೆಯಲು ಜಸ್ಟಿನ್‌ ಟ್ರಾಡೊಗೆ ಒತ್ತಡ
ಒಟ್ಟಾವ: ಖಲಿಸ್ಥಾನ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿರುವ ಪ್ರಧಾನಿ ಜಸ್ಟಿನ್‌ ಟ್ರುಡೊ ರಾಜೀನಾಮೆಗೆ ಒತ್ತಡ ಹೆಚ್ಚುತ್ತಿದೆ. ಭಾರತದ ಜತೆಗಿನ ಬಾಂಧವ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಕೆನಡಾ ಆಡಳಿತ ಲಿಬರಲ್‌ ಪಕ್ಷದ ಸಂಸದರೇ ಟ್ರುಡೊ ರಾಜೀನಾಮೆಗೆ ಆಗ್ರಹಿಸಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಕೆನಡಾ ಪ್ರಧಾನಿ ಮಾತಿಗೆ ಭಾರತದ ನಾಯಕರ ಟೀಕೆ
ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡ ಬಗ್ಗೆ ಸಾಕ್ಷ್ಯಗಳಿಲ್ಲ ಎಂಬ ಟ್ರುಡೊ ಹೇಳಿಕೆಯನ್ನು ಕಾಂಗ್ರೆಸ್‌ ನಾಯಕಿ ಶಮಾ ಮೊಹಮ್ಮದ್‌ ಟೀಕಿಸಿದ್ದಾರೆ. “ಸಾಕ್ಷ್ಯವಿಲ್ಲದೇ ಕೇವಲ ಗುಪ್ತ ಚರ ಮಾಹಿತಿ ಆಧಾರದಲ್ಲಿ ವಿಶ್ವಮಟ್ಟದ ನಾಯಕ ಆರೋಪಗಳನ್ನು ಮಾಡುತ್ತಾನೆಂದರೆ ಅದು ಹಾಸ್ಯಾಸ್ಪದ’ ಎಂದಿದ್ದಾರೆ. ಟ್ರುಡೊ ಹೇಳಿಕೆ ಬೂಟಾಟಿಕೆಯದ್ದು ಎಂದು ಟಿಎಂಸಿ ಸಂಸದ ಸಾಕೇತ್‌ ಗೋಖಲೆ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು  ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.