Car Catches Fire: ಮಡಿಕೇರಿ ಬಳಿ ಬೆಂಕಿಗಾಹುತಿಯಾದ ಕಾರು!
ತಾಂತ್ರಿಕ ದೋಷದಿಂದಾಗಿ ಏಕಾಏಕಿ ಕಾಣಿಸಿಕೊಂಡ ಅಗ್ನಿ
Team Udayavani, Jul 13, 2024, 9:28 PM IST
ಮಡಿಕೇರಿ (ಕೊಡಗು ಜಿಲ್ಲೆ) : ತಾಂತ್ರಿಕ ದೋಷದಿಂದ ಕಾರೊಂದು ಅಗ್ನಿಗಾಹುತಿಯಾದ ಘಟನೆ ಮಡಿಕೇರಿ ನಗರದ ಸಂಪಿಗೆಕಟ್ಟೆ ಬಳಿ ನಡೆದಿದೆ.
ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ತಡೆಗೋಡೆಯೊಂದಕ್ಕೆ ಡಿಕ್ಕಿಯಾದ ಕಾರಣ ಹೆದ್ದಾರಿ ಬದಿ ನಿಲ್ಲಿಸಲಾಗಿತ್ತು. ಸಂಜೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಬೆಂಗಳೂರಿನ ಶ್ರೀನಿವಾಸ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ.
ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.