Kolkata Case: ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳಿ-ಮಮತಾ ವಿರುದ್ಧ ಭುಗಿಲೆದ್ದ ಜನಾಕ್ರೋಶ
ಸಿಎಂ ಮಮತಾ ಸೂಕ್ಷ್ಮತೆ ಕಳೆದುಕೊಂಡಿರುವುದಾಗಿ ಆರೋಪಿಸಿದ್ದಾರೆ.
Team Udayavani, Sep 10, 2024, 1:04 PM IST
ನವದೆಹಲಿ: ಕೋಲ್ಕತಾ ಆರ್ ಜಿ ಕರ್(Kolkata’s RG Kar) ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ (31ವರ್ಷ) ಅತ್ಯಾ*ಚಾರ, ಕೊಲೆ ಪ್ರಕರಣದ ಬಗ್ಗೆ ಪ್ರತಿಭಟನೆ ತೀವ್ರಗೊಂಡಿರುವ ನಡುವೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಾರ್ವಜನಿಕರು ದುರ್ಗಾ ಪೂಜೆಯಲ್ಲಿ ಪಾಲ್ಗೊಳ್ಳಿ ಎಂಬ ಮನವಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಬ್ಯಾನರ್ಜಿ,ಸಾರ್ವಜನಿಕರು ಪ್ರತಿಭಟನೆ ಕೈಬಿಟ್ಟು, ದುರ್ಗಾ ಪೂಜೆ ಸಂಭ್ರಮದಲ್ಲಿ ತೊಡಗಿಸಿಕೊಳ್ಳುವತ್ತ ಗಮನಹರಿಸಬೇಕು. ನಾನು ಎಲ್ಲರಲ್ಲಿಯೂ ಮನವಿ ಮಾಡುತ್ತೇನೆ, ಹಬ್ಬದ ಸಂಭ್ರಮದಲ್ಲಿ ತೊಡಗಿ, ಸಿಬಿಐ ಆದಷ್ಟು ಶೀಘ್ರ ನ್ಯಾಯ ಒದಗಿಸಿಕೊಡಲಿದೆ ಎಂದು ತಿಳಿಸಿದ್ದರು.
ಸಂತ್ರಸ್ತೆ ಕುಟುಂಬ ಸದಸ್ಯರು, ವಿಪಕ್ಷಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಸಿಎಂ ಬ್ಯಾನರ್ಜಿಯ ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಘಟನೆ ಕುರಿತು ಸಾರ್ವಜನಿಕ ವಲಯದ ಆಕ್ರೋಶದ ಬಗ್ಗೆ ಸಿಎಂ ಮಮತಾ ಸೂಕ್ಷ್ಮತೆ ಕಳೆದುಕೊಂಡಿರುವುದಾಗಿ ಆರೋಪಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ನೀವು ಈ ರೀತಿ ರಾತ್ರಿ-ಹಗಲು ಪ್ರತಿಭಟನೆ ನಡೆಸುತ್ತಿದ್ದರೆ, ಇದು ಅಡಚಣೆಗೆ ಕಾರಣವಾಗಲಿದೆ. ಅಲ್ಲದೇ ವೃದ್ಧರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಬೇಕಾದ ಅಗತ್ಯವಿದೆ ಎಂದು ಸಿಎಂ ಬ್ಯಾನರ್ಜಿ ತಿಳಿಸಿದ್ದರು.
“ನಾವು ನಮ್ಮ ಮಗಳನ್ನು ಕಳೆದುಕೊಂಡ ಸಂದರ್ಭದಲ್ಲಿ ನಾವು ಯಾವ ಹಬ್ಬ ಆಚರಿಸಬೇಕು? ನಮ್ಮ ಮಗಳನ್ನು ನಮಗೆ ವಾಪಸ್ ತಂದುಕೊಡಿ, ಒಂದು ವೇಳೆ ಮಮತಾ ಅವರ ಕುಟುಂಬದಲ್ಲಿ ಹೀಗೆ ಆಗಿದ್ದರೆ ಇಂತಹ ಹೇಳಿಕೆ ಕೊಡುತ್ತಿದ್ದರೇ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.