Caste census: ಬಿಜೆಪಿ ತಕರಾರಿಲ್ಲ ಮಾತು ಕೇಳಿ ನಿರಾಳ: ಸಿಎಂ ಸಿದ್ದರಾಮಯ್ಯ
ಕೊಟ್ಟ ಮಾತಿಗೆ ತಪ್ಪಬೇಡಿ: ವಿಪಕ್ಷ ನಾಯಕ ಅಶೋಕ್ಗೆ ಮುಖ್ಯಮಂತ್ರಿ ಸಲಹೆ
Team Udayavani, Oct 9, 2024, 7:00 AM IST
ಬೆಂಗಳೂರು: ಜಾತಿ ಜನಗಣತಿ ಬಗ್ಗೆ ಬಿಜೆಪಿಯಿಂದ ಯಾವ ತಕರಾರು, ವಿರೋಧ ಇಲ್ಲ. ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ವಿಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ “ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅಶೋಕ್ ಅವರೇ ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ “ಅಂತ್ಯೋದಯ’ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ.
ನೀವು ಮಾತ್ರ ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೇ. 2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿ-ಅಂಶಗಳ ಪರಿಶೀಲನೆ ಪೂರ್ಣಗೊಳ್ಳದೇ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ ಕಾರಣಗಳೂ ಇರಲಿಲ್ಲ. ಈಗ ವರದಿ ಬಿಡುಗಡೆಗೆ ಸಿದ್ಧವಾಗಿದೆ. ಅದನ್ನು ಅಂಗೀಕರಿಸಲು ನಮ್ಮ ಪಕ್ಷ ಮತ್ತು ಸರಕಾರ ಕೂಡ ಬದ್ಧವಾಗಿದೆ ಎಂದಿದ್ದಾರೆ.
ನಮ್ಮ ಪಕ್ಷದ ಎಲ್ಲ ನಾಯಕರು ತಾತ್ವಿಕವಾಗಿ ಜಾತಿಗಣತಿ ಒಪ್ಪಿಕೊಂಡಿದ್ದಾರೆ. ಯಾರ ವಿರೋಧವೂ ಇಲ್ಲ. ವಿಪಕ್ಷಗಳ ಸುಳ್ಳು ಪ್ರಚಾರದಿಂದಾಗಿ ಕೆಲವರಲ್ಲಿ ನಿರಾಧಾರವಾದ ಸಂಶಯಗಳು ಹುಟ್ಟಿಕೊಂಡಿವೆ. ಇನ್ನು ಕೆಲವರಲ್ಲಿ ತಪ್ಪು ಅಭಿಪ್ರಾಯಗಳಿಂದಾಗಿ ಗೊಂದಲಗಳಿವೆ. ಮಠಾಧೀಶರು ಸೇರಿದಂತೆ ಎಲ್ಲರ ಅನುಮಾನ-ಸಂಶಯಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಂಡು ಜಾತಿ ಗಣತಿ ವರದಿಯನ್ನು ಜಾರಿಗೆ ತರುವ ನಿರ್ಧಾರವನ್ನು ಶೀಘ್ರವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
National Film Award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ
Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ
Donation: ರಾಮನಗರದ ಮಠಕ್ಕೆ ರಾಜಸ್ಥಾನದ ಉದ್ಯಮಿಯಿಂದ 3 ಸಾವಿರ ಎಕರೆ ಭೂಮಿ ದಾನ!
Koppal: ಸಿಎಂ ವಾಹನ ಸಂಚಾರಕ್ಕೆ ಅಡ್ಡಿ: ಶಾಸಕ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ವಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !
Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ
High Court: ವಕೀಲರ ವಾಕ್ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್ ಕೌನ್ಸಿಲ್ಗೆ ಇಲ್ಲ
Arrested: ತ.ನಾಡಿನಿಂದ ಬಂದು ಲ್ಯಾಪ್ಟಾಪ್ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.