![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು
Team Udayavani, Jul 2, 2024, 1:11 AM IST
![Malpe ಗ್ರಾ.ಪಂ.ಅಧ್ಯಕ್ಷೆಗೆ ಜಾತಿನಿಂದನೆ, ಜೀವಬೆದರಿಕೆ 8 ಮಂದಿ ವಿರುದ್ಧ ಪ್ರಕರಣ ದಾಖಲು](https://www.udayavani.com/wp-content/uploads/2024/07/POLICE-5-1-620x326.jpg)
ಮಲ್ಪೆ: ತೆಂಕನಿಡಿಯೂರು ಗ್ರಾ.ಪಂ.ಅಧ್ಯಕ್ಷೆ ಶೋಭಾಗೆ ಜಾತಿ ನಿಂದನೆ ಮಾಡಿದ ಆರೋಪದಲ್ಲಿ 8 ಮಂದಿ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ.
ಜೂ.28ರಂದು ಪಿಡಿಒ ದಯಾನಂದ ಅವರು ಎಸ್ಎಲ್ಆರ್ಎಂ ಘಟಕದಲ್ಲಿ ನೀರಿನ ಹರಿವಿಗೆ ಅಡಚಣೆಯಾಗಿರುವ ಕಾರಣಕ್ಕೆ ಸ್ಥಳಕ್ಕೆ ಬರುವಂತೆ ಹೇಳಿದ ಹಿನ್ನೆಲೆಯಲ್ಲಿ ಶೋಭಾ ಅವರು ಸಂಜೆ 5 ಗಂಟೆಗೆ ತೆಂಕನಿಡಿಯೂರು ಶ್ಮಶಾನದ ಬಳಿಯ ಎಸ್ಎಲ್ ಆರ್ಎಂ ತ್ಯಾಜ್ಯ ವಿಲೇವಾರಿ ಘಟಕದ ಬಳಿ ಬಂದಿದ್ದರು. ಆಗ ಆರೋಪಿಗಳಾದ ಶರತ್ ಬೈಲಕೆರೆ, ಕಿರಣ ಪಿಂಟೋ, ವಿಜಯಪ್ರಕಾಶ್, ಗಾಯತ್ರಿ, ಪುಷ್ಪಾ, ಶಾಲಿನಿ, ಕೃಷ್ಣ ಶೆಟ್ಟಿ ಹಾಗೂ ಇತರರು ಸೇರಿ ಏಕವಚನದಲ್ಲಿ ಜಾತಿನಿಂದನೆ ಮಾಡಿ, ಹಲ್ಲೆ ನಡೆಸಲು ಮುಂದಾಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದಾರೆ. ತನ್ನನ್ನು ಅವರನ್ನು ಅಧ್ಯಕ್ಷ ಪದವಿಯಿಂದ ಕೆಳಗಿಳಿಸಬೇಕೆಂಬ ಉದ್ದೇಶವಿಟ್ಟುಕೊಂಡು ಈ ಕೃತ್ಯ ನಡೆಸಲಾಗಿದೆ ಎಂದು ಶೋಭಾ ಅವರು ಮಲ್ಪೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.