Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

ಕೇಂದ್ರ  ಸಚಿವ ಕುಮಾರಸ್ವಾಮಿಗೆ ಸೇವಕನಾಗಿ ಕೆಲಸ ಮಾಡ್ತೇನೆ: ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸವಾಲು

Team Udayavani, Jul 17, 2024, 8:17 PM IST

Cheluvaraya-swamy

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಮುಂದಿನ ಐದು ವರ್ಷದೊಳಗೆ ಕಾವೇರಿ ಸಮಸ್ಯೆಯನ್ನು ಪರಿಹಾರ ಮಾಡಿದರೆ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಸವಾಲು ಹಾಕಿದರು.

ಹಾಲಿ ಜಾರಿಯಲ್ಲಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯಲ್ಲಿ ಕಾವೇರಿ ನೀರನ್ನು ಸಂಪೂರ್ಣವಾಗಿ ಕರ್ನಾಟಕಕ್ಕೆ ದೊರಕಿಸಿಕೊಟ್ಟರೆ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ. ಅವರ ಸೇವಕನಾಗಿ ಕೆಲಸ ಮಾಡುತ್ತೇನೆ ಎಂದು ಬುಧವಾರ ನಾಗಮಂಗಲದಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಂಡ್ಯ ಜಿಲ್ಲೆ ಸಂಸದರಾಗಿ ಮತ್ತು ಕೇಂದ್ರ ಸಚಿವರಾಗಿ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವುದು ಅವರ ಕರ್ತವ್ಯ. ಅದನ್ನು ಬಿಟ್ಟು ಬೇಜವಾಬ್ದಾರಿತನದಿಂದ ಮಾತನಾಡುವ ಮೂಲಕ ಜಿಲ್ಲೆಯ ಜನರಿಗೆ ಅಗೌರವ ತಂದಿದ್ದಾರೆ. ಜೊತೆಗೆ ಗೋಡಂಬಿ, ದ್ರಾಕ್ಷಿ ತಿನ್ನಲು ಸಭೆಗೆ ಹೋಗಬೇಕಿತ್ತಾ ಎಂದು ಲಘುವಾಗಿ ಮಾತನಾಡಿರುವುದು ಸಭ್ಯತೆಯಲ್ಲ ಎಂದು ಹೇಳಿದರು.

ಕಾವೇರಿ ಸಮಸ್ಯೆಗೆ ಪರಿಹಾರ ಸೂಚಿಸುವುದಾಗಿ ಭರವಸೆ ನೀಡಿರುವ ಅವರು, ಸರ್ವಪಕ್ಷ ಸಭೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆಗಳನ್ನು ನೀಡುವುದರೊಂದಿಗೆ ಕೇಂದ್ರ ಮಟ್ಟದಲ್ಲಿ ನೀರಿನ ಸಮಸ್ಯೆ ವಿಚಾರದಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರೆ, ಸಮಸ್ಯೆ ಬಗ್ಗೆ ಇವರಿಗೆ ಇರುವ ಆಸಕ್ತಿ ತೋರ್ಪಡಿಸುತ್ತಿತ್ತು ಎಂದು ತಿಳಿಸಿದರು.

ಉದ್ಧಟತನದ ಮಾತು ಶೋಭೆಯಲ್ಲ:
ಸಂಸದರಾಗಿ ಒಂದೇ ತಿಂಗಳಲ್ಲಿ ಸಮಸ್ಯೆ ಬಗೆಹರಿಸಬೇಕೆಂದು ನಾವ್ಯಾರೂ ಒತ್ತಾಯಿಸಿರಲಿಲ್ಲ. ಸರ್ವಪಕ್ಷ ಸಭೆಗೆ ಬಂದು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಬೇಕೆಂಬುದಷ್ಟೇ ನಮ್ಮ ಕಳಕಳಿ. ಅದನ್ನು ಬಿಟ್ಟು ಒಂದು ಗಂಭೀರ ವಿಷಯದ ಬಗ್ಗೆ ಉದ್ಧಟತನದ ಮಾತುಗಳನ್ನಾಡುವುದು ಶೋಭೆ ತರುವುದಿಲ್ಲ ಎಂದು ಕುಟುಕಿದರು.

ಸಮಾರಂಭ, ಬಾಡೂಟ ಇನ್ನೊಂದು ದಿನ ಮಾಡಬಹುದಲ್ವಾ?
ಅಭಿನಂದನಾ ಸಮಾರಂಭ, ಬಾಡೂಟ ಇನ್ನೊಂದು ದಿನ ಮಾಡುವುದಕ್ಕೂ ಅವಕಾಶವಿತ್ತು. ಸರ್ವಪಕ್ಷ ಸಭೆ ಯಾವಾಗಲೂ ನಡೆಯುವುದಿಲ್ಲ. ಬಿಜೆಪಿಯ ಹಲವು ಹಿರಿಯ ನಾಯಕರು ಸಭೆಗೆ ಆಗಮಿಸಿ ತಮ್ಮ ಅಭಿಪ್ರಾಯ ತಿಳಿಸಿದ್ದರು. ಸಭೆಗೆ ಹಾಜರಾಗಿ ರಾಜಕೀಯ  ಪ್ರಬುದ್ಧತೆ ಪ್ರದರ್ಶಿಸಬೇಕಿತ್ತು.  ನನ್ನಿಂದ ಈ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ. ಚುನಾವಣೆಗಾಗಿ, ರಾಜಕೀಯ ಕಾರಣದಿಂದ ಆ ಮಾತನ್ನು ಹೇಳಬೇಕಾಯಿತೆಂದು ಹೇಳಿ ಬಿಡಲಿ. ಮುಂದೆ ಯಾವತ್ತೂ ಅವರನ್ನು ಈ ವಿಚಾರವಾಗಿ ಪ್ರಶ್ನಿಸುವುದೇ ಇಲ್ಲ. ನಮ್ಮ ಪಾಡಿಗೆ ನಾವು ಅಭಿವೃದ್ಧಿ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಚಲುವರಾಯಸ್ವಾಮಿ ಹೇಳಿದರು.
ಗೋಷ್ಠಿಯಲ್ಲಿ ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಜೇಶ್‌, ಮುಖಂಡ ಟಿ.ಎಲ್‌.ಕೃಷ್ಣೇ ಗೌಡ, ಮನ್‌ ಮುಲ್‌ ನಿರ್ದೇಶಕ ಕದಲೂರು ರಾಮಕೃಷ್ಣ ಸೇರಿ ಇತರರಿದ್ದರು.

ಟಾಪ್ ನ್ಯೂಸ್

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ARMY (2)

Jammu and Kashmir ಚುನಾವಣೆ ಕಾವು ತೀವ್ರ: ಸ್ವತಂತ್ರ ಸರಕಾರ ರಚನೆಯಾಗುವುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಸಿದ್ದರಾಮಯ್ಯ ಅವರ ಜನಪ್ರೀಯತೆ ಕುಗ್ಗಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ: ಸಂತೋಷ್ ಲಾಡ್

Hubballi: ಸಿದ್ದರಾಮಯ್ಯ ಅವರ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಹುನ್ನಾರ…: ಸಂತೋಷ್ ಲಾಡ್

Belagavi: ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿದ ಸಚಿವೆ

Belagavi: ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿದ ಸಚಿವೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

KMC Manipal: ಸುಧಾರಿತ ರೆಟಿನಲ್‌ ಇಮೇಜಿಂಗ್‌ ಟೆಕ್ನಾಲಜಿ: ಕ್ಲಾರಸ್‌ 700 ಕೆಮರಾ ಉದ್ಘಾಟನೆ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Road; ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಹೊಂಡ ಗುಂಡಿಗಳು; ಹೆದ್ದಾರಿ ಅಧಿಕಾರಿಗಳು ಗಮನಿಸಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.