![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 3, 2022, 5:20 PM IST
ಗುಂಡ್ಲುಪೇಟೆ(ಚಾಮರಾಜನಗರ) : ಪ್ರೇಮದ ವಿಚಾರವಾಗಿ ಗಲಾಟೆ ನಡೆದು ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪಟ್ಟಣದ ಹೊಸೂರು ಬಡಾವಣೆಯಲ್ಲಿ ನಡೆದಿದೆ.
ಪಟ್ಟಣದ ಹೊಸೂರಿನ ಚಿಕ್ಕರಾಜು (30) ಕೊಲೆಯಾದ ವ್ಯಕ್ತಿಯಾಗಿದ್ದು, ಈತ ಬೆಂಗಳೂರಿನಲ್ಲಿ ಹಲವು ಸಿನಿಮಾಗಳಿಗೆ ಲೈಟ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಘಟನೆ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ವೀರಭದ್ರನಾಯಕ, ಮಹದೇವನಾಯಕ ಕಿರಣ್, ಅಭಿಷೇಕ್ ಸೇರಿದಂತೆ ಒಟ್ಟು ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿ ತಿಳಿಸಿದ್ದಾರೆ.
ಘಟನೆ ವಿವರ: ಕೊಲೆಯಾದ ಚಿಕ್ಕರಾಜು ಸಹೋದರ(ತಮ್ಮ) ವಿನೋದ್ ಹೊಸೂರಿನ ಸೋನಾಕ್ಷಿ ಎಂಬಾಕೆಯನ್ನು ಪ್ರೀತಿಸುತ್ತಿದ್ದು, ಈ ವಿಚಾರವಾಗಿ ಎರಡು ಮನೆಯವರಿಗು ಈ ಹಿಂದೆ ಗಲಾಟೆ ನಡೆದಿದೆ ಎನ್ನಲಾಗಿದೆ. ಯುಗಾದಿ ಹಬ್ಬಕ್ಕೆಂದು ಚಿಕ್ಕರಾಜು ಸ್ವಗ್ರಾಮಕ್ಕೆ ಬಂದಿದ್ದು, ಇದನ್ನು ಅರಿತ ಸೋನಾಕ್ಷಿ ಸಂಬಂಧಿಕರು ಆತನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಸ್ಥಳಕ್ಕೆ ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ದೇವರು,ದೇಶ ಮತ್ತು ಧರ್ಮವನ್ನು ರಕ್ಷಿಸುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ: ಸಿಎಂ ಸಾವಂತ್
You seem to have an Ad Blocker on.
To continue reading, please turn it off or whitelist Udayavani.