Channapattana; ಯೋಗೇಶ್ವರ್ ಹೆಸರು ಅಂತಿಮ ಅಲ್ಲ: ಎಚ್ಡಿಕೆ ಸ್ಪಷ್ಟನೆ
ಕಾರ್ಯಕರ್ತರ ಅಭಿಪ್ರಾಯದಂತೆ ಕೊನೆಗೆ ತೀರ್ಮಾನ, ಜೆಡಿಎಸ್ ಕಾರ್ಯಕರ್ತರ ವಿಶ್ವಾಸ ಪಡೆಯಲು ಸಿಪಿವೈಗೆ ಹೇಳಿದ್ದೇನೆ
Team Udayavani, Jul 7, 2024, 7:15 AM IST
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿಯಾಗಲು ಹಲವಾರು ಹೆಸರುಗಳು ಚರ್ಚೆಯಲ್ಲಿ ಇವೆ. ಅಂತಿಮವಾಗಿ ಕಾರ್ಯಕರ್ತರ ಅಭಿಪ್ರಾಯದಂತೆ ತೀರ್ಮಾನ ಮಾಡುತ್ತೇವೆ. ಕಾದು ನೋಡಿ, ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುವುದು. ಈ ಬಗ್ಗೆ ಬಿಜೆಪಿ ದೆಹಲಿ, ರಾಜ್ಯದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು. ಸದ್ಯ ಯೋಗೇಶ್ವರ್ ಅಭ್ಯರ್ಥಿ ಅಂತ ಹೇಳಬಹುದು. ಆದರೆ ಅದೇ ಅಂತಿಮವಲ್ಲ. ಅನುಸೂಯ ಸೇರಿ ಇನ್ನೂ ಹಲವು ಹೆಸರುಗಳು ಕೇಳಿಬರ್ತಿವೆ, ನೋಡೋಣ ಮುಂದೆ ಎಂದು ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, 3 ಕ್ಷೇತ್ರದಲ್ಲಿ ಉಪ ಚುನಾವಣೆಯಿದೆ. ಚನ್ನಪಟ್ಟಣದಲ್ಲಿ ನಾನೇ ಶಾಸಕ ಇದ್ದೆ, ಜೆಡಿಎಸ್ ಕ್ಷೇತ್ರ ಅದು. ನನ್ನ ಕಾರ್ಯಕರ್ತರ ಅಭಿಪ್ರಾಯ ತಗೊಬೇಕು, ಆಮೇಲೆ ಮುಂದುವರಿಯಬೇಕು. ನಾನೇ ಏಕಪಕ್ಷೀಯ ನಿರ್ಧಾರ ಕೈಗೊಳ್ಳೋಕೆ ಆಗುವುದಿಲ್ಲ. ನಾನು ಚನ್ನಪಟ್ಟಣದಿಂದ ಎರಡು ಬಾರಿ ಗೆದ್ದಿದ್ದೆ. ಯೋಗೇಶ್ವರ್ ಅಲ್ಲಿ ಈ ಹಿಂದೆ ಹಲವು ಬಾರಿ ಗೆದ್ದಿದ್ದರು. ನಾನು ಅವರಿಗೆ ನಮ್ಮ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತಗೊಳಿ ಅಂತ ಹೇಳಿದ್ದೇನೆ. ಅಭ್ಯರ್ಥಿಯ ಬಗ್ಗೆ ನಾನು ಬಿಜೆಪಿ ಹೈಕಮಾಂಡ್, ರಾಜ್ಯದ ನಾಯಕರ ಜತೆ ಚರ್ಚೆ ಮಾಡಿಲ್ಲ. ನನ್ನ ಚನ್ನಪಟ್ಟಣದ ಕಾರ್ಯಕರ್ತರ ಅಭಿಪ್ರಾಯ ತಗೊಂಡೇ ನಿರ್ಧಾರ ಮಾಡುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.