![sanjay-raut](https://www.udayavani.com/wp-content/uploads/2024/07/sanjay-raut-415x235.jpg)
Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ
ಚನ್ನಪಟ್ಟಣ ಸುತ್ತಮುತ್ತ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ ಹೊಸ ಟೌನ್ ನಿರ್ಮಾಣ
Team Udayavani, Jul 3, 2024, 10:30 PM IST
![DK-Shivakumar](https://www.udayavani.com/wp-content/uploads/2024/07/DK-Shivakumar-620x372.jpg)
ಚನ್ನಪಟ್ಟಣ : ನನ್ನ ಬೆಲೆ ನಂಬಿಕೆ ಇಡಿ. ಚನ್ನಪಟ್ಟಣಕ್ಕೆ ಹೊಸ ಚೈತನ್ಯ ತರಬೇಕೆಂದು ಪ್ರಯತ್ನ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ನಾಯಕತ್ವದಲ್ಲಿ ಚನ್ನಪಟ್ಟಣ ತಾಲೂಕು ಬೆಂಗಳೂರಿಗೆ ಸೇರಲಿದೆ ಎಂದು ಮತ್ತೂಮ್ಮೆ ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ತಾಲೂಕಿನಲ್ಲಿ ಬುಧವಾರ 9ನೇ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮುಂದಿನ ದಿನಗಳಲ್ಲಿ ನನ್ನ ನಾಯಕತ್ವದಲ್ಲಿ ಚನ್ನಪಟ್ಟಣ ತಾಲೂಕು ಬೆಂಗಳೂರಿಗೆ ಸೇರಲಿದೆ. ಭೂಮಿ ಬೆಲೆ ಕೂಡ ಹೆಚ್ಚಾಗಲಿದೆ. ನಾವೆಲ್ಲರೂ ಬೆಂಗಳೂರಿನ ಸಮೀಪವಿದ್ದೇವೆ ಎಂದರು.
ಚನ್ನಪಟ್ಟಣ ಸುತ್ತಮುತ್ತ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ ಹೊಸ ಟೌನ್ ನಿರ್ಮಾಣವಾಗಲಿದೆ. ಎಲ್ಲ ಬಡವರಿಗೆ ಸೈಟ್ ಕೊಡುವ ಕೆಲಸ ಆಗುತ್ತದೆ. ಕನಕಪುರದಲ್ಲಿ ಈಗಾಗಲೇ 100 ಎಕರೆಯಲ್ಲಿ ಸೈಟ್ ನಿರ್ಮಿಸಿ ಬಡವರಿಗೆ ಕೊಟ್ಟಿದ್ದೇವೆ. ಜನಸಾಮಾನ್ಯರ ಎಲ್ಲ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತೇವೆ. ನಿಮ್ಮ ಜತೆ ಸಂಪರ್ಕದಲ್ಲಿರುತ್ತೇನೆ. ನನ್ನ ಕೈ ಬಲಪಡಿಸಿ, ನನಗೆ ಶಕ್ತಿ ತುಂಬಿ. ನಮ್ಮವರನ್ನು ಶಾಸಕರನ್ನಾಗಿ ಮಾಡಲು ಸಹಕಾರ ಕೊಡಿ. ನನ್ನ ಮೇಲೆ ವಿಶ್ವಾಸ ಇಟ್ಟು ಆಶೀರ್ವಾದ ಮಾಡಿ ಎಂದು ಇದೇ ವೇಳೆ ಡಿಕೆಶಿ ತಿಳಿಸಿದರು.
ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ: ಡಿಕೆಶಿ ಸ್ಪಷ್ಟನೆ
ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ. ಎಲ್ಲ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ಕೊಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಮೂಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎಲ್ಲ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ ಎಂದು ಹೇಳಿದರು.
ಟಾಪ್ ನ್ಯೂಸ್
![sanjay-raut](https://www.udayavani.com/wp-content/uploads/2024/07/sanjay-raut-415x235.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![11-bng](https://www.udayavani.com/wp-content/uploads/2024/07/11-bng-150x90.jpg)
Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್
![10-bng](https://www.udayavani.com/wp-content/uploads/2024/07/10-bng-150x90.jpg)
Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
![8-bng](https://www.udayavani.com/wp-content/uploads/2024/07/8-bng-150x90.jpg)
Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
![7-bng](https://www.udayavani.com/wp-content/uploads/2024/07/7-bng-150x90.jpg)
Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್
MUST WATCH
ಹೊಸ ಸೇರ್ಪಡೆ
![sanjay-raut](https://www.udayavani.com/wp-content/uploads/2024/07/sanjay-raut-150x85.jpg)
Lalu Yadav ಹೇಳಿದ್ದು ಸರಿ; ಅಲೆಗಳು ಇನ್ನೂ ರಾಹುಲ್ ಪರವಿದೆ: ಸಂಜಯ್ ರಾವತ್
![Kaagada movie review](https://www.udayavani.com/wp-content/uploads/2024/07/Kaagada-150x83.jpg)
Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ
![BSP president Armstrong case; Chennai police arrested 8 suspects](https://www.udayavani.com/wp-content/uploads/2024/07/Armstrong-150x83.jpg)
BSP ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್
![Rashmika Mandanna is in kubera movie](https://www.udayavani.com/wp-content/uploads/2024/07/rashmika-150x83.jpg)
Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ
![Ludhiana; Shiv Sena leader attacked by Nihang Sikhs in the middle of the day. Video](https://www.udayavani.com/wp-content/uploads/2024/07/Ludhiyana-150x83.jpg)
Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.