Chhota Rajan: ಹ*ತ್ಯೆ ಕೇಸ್-ಭೂಗತ ಪಾತಕಿ ಛೋಟಾ ರಾಜನ್ ಗೆ ಬೇಲ್; ಆದ್ರೂ ಬಿಡುಗಡೆ ಇಲ್ಲ!
ಛೋಟಾ ರಾಜನ್ ಗ್ಯಾಂಗ್ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು...
Team Udayavani, Oct 23, 2024, 3:01 PM IST
ಮುಂಬೈ: 2001ರಲ್ಲಿ ನಡೆದ ಮುಂಬೈ ಹೋಟೆಲ್ ಮಾಲೀಕರ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಜಗತ್ತಿನ ಪಾತಕಿ, ಗ್ಯಾಂಗ್ ಸ್ಟರ್ ಛೋಟಾ ರಾಜನ್ ಗೆ ಬಾಂಬೆ ಹೈಕೋರ್ಟ್ (Bombay Highcourt) ಬುಧವಾರ (ಅ.23) ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್ ಪೀಠದ ಜಸ್ಟೀಸ್ ರೇವತಿ ಮೋಹಿತೆ ದೇರೆ ಮತ್ತು ಜಸ್ಟೀಸ್ ಪ್ರಥ್ವಿರಾಜ್ ಚವಾಣ್, ಗ್ಯಾಂಗ್ ಸ್ಟರ್ ಛೋಟಾ ರಾಜನ್ ಜಾಮೀನಿಗಾಗಿ ಒಂದು ಲಕ್ಷ ರೂ. ಬಾಂಡ್ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಹೋಟೆಲ್ ಮಾಲೀಕರ ಕೊ*ಲೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿದ್ದರೂ ಕೂಡಾ ಛೋಟಾ ರಾಜನ್ ಜೈಲುವಾಸ ಮುಂದುವರಿಯಲಿದೆ. ಅದಕ್ಕೆ ಕಾರಣ 2011ರ ಪತ್ರಕರ್ತ ಜ್ಯೋರ್ತಿಮಯಿ ಡೇ ಕೊ*ಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಒಳಗಾಗಿದ್ದು, ಇನ್ನಿತರ ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ.
ಮುಂಬೈಯಲ್ಲಿನ ಗೋಲ್ಡನ್ ಕ್ರೌನ್ ಹೋಟೆಲ್ ಮಾಲೀಕ ಜಯ ಶೆಟ್ಟಿ ಅವರ ಕೊ*ಲೆ ಪ್ರಕರಣದಲ್ಲಿ ಛೋಟಾ ರಾಜನ್ ನನ್ನು ವಿಶೇಷ ಕೋರ್ಟ್ ದೋಷಿ ಎಂದು ತೀರ್ಪು ನೀಡಿ, ಜೀವಾವಧಿ ಶಿಕ್ಷೆ ವಿಧಿಸಿತ್ತು.
2001ರ ಮೇ 4ರಂದು ಛೋಟಾ ರಾಜನ್ ಬಣದ ಇಬ್ಬರು ಶಾರ್ಪ್ ಶೂಟರ್ಸ್ ಗಳು ಮೇಲಿನ ಫ್ಲೋರ್ ನಲ್ಲಿದ್ದ ಜಯ ಶೆಟ್ಟಿ ಅವರ ಮೇಲೆ ಗುಂಡಿನ ದಾಳಿ ನಡೆಸಿತ್ತು. ವಿಚಾರಣೆಯಲ್ಲಿ ಛೋಟಾ ರಾಜನ್ ಗ್ಯಾಂಗ್ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು. ಹಣ ಕೊಡದೇ ಇದ್ದ ಕಾರಣಕ್ಕೆ ಜಯ್ ಶೆಟ್ಟಿಯನ್ನು ಹ*ತ್ಯೆಗೈದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Siddique Case: ಹರ್ಯಾಣದಲ್ಲಿ ಇನ್ನೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ
Wayanad Bypolls: ಚುನಾವಣ ರಾಜಕಾರಣದ ಅಖಾಡಕ್ಕಿಳಿದ ಪ್ರಿಯಾಂಕಾ, ನಾಮಪತ್ರ ಸಲ್ಲಿಕೆ
Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್
Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ
MUST WATCH
ಹೊಸ ಸೇರ್ಪಡೆ
Mangaluru: ಪ್ಲಾಸ್ಟಿಕ್ ಸದ್ಬಳಕೆಯಿಂದ ದುಡ್ಡೂ ಮಾಡಬಹುದು!
The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್ ಸ್ಟಾರ್
Belthangady: ಕಡೆಗೂ ಕಜಕ್ಕೆ ಶಾಲೆಯವರೆಗೆ ಬಂತು ಸರಕಾರಿ ಬಸ್
Mudipinadka-ಸುಳ್ಯಪದವು: ರಸ್ತೆ ಹೊಂಡ ತಪ್ಪಿಸುವುದೇ ಸಾಹಸ!
Belagavi: ಕ್ರಾಂತಿಯ ನೆಲ ಕಿತ್ತೂರಿನಲ್ಲಿ 200ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.