ರಾಜ್ಯ ಸರಕಾರಿ ನೌಕರರಿಗೆ ಸಮಾನ ವೇತನ ಆಯೋಗ; ವಿಧಾನಸಭೆಯಲ್ಲಿ ಸಿಎಂ ಬೊಮ್ಮಾಯಿ ಘೋಷಣೆ


Team Udayavani, Mar 17, 2022, 7:00 AM IST

CMರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ಸಮಾನವೇತನ ಪರಿಶೀಲನೆಗೆ ಆಯೋಗ : ಸಿಎಂ

ಬೆಂಗಳೂರು: ಕೇಂದ್ರ ಸರಕಾರಿ ನೌಕರರ ಸಮಾನ ವೇತನ ಆಯೋಗ ರಚನೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದ ರಾಜ್ಯ ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುಷಿಯ ಸುದ್ದಿ  ನೀಡಿದ್ದಾರೆ.

ವಿಧಾನಸಭೆಯಲ್ಲಿ ಬುಧವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರಿ ನೌಕರರ ವೇತನಕ್ಕೆ ಸಮನಾಗಿ ರಾಜ್ಯ ಸರಕಾರಿ ನೌಕರರಿಗೆ ವೇತನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರಿ ನೌಕರರ ಸಮಾನ ವೇತನ ಆಯೋಗ ರಚನೆ ಮಾಡಲಾಗುತ್ತದೆ ಎಂದು ಘೋಷಿಸಿ ದರು. ಈ ಬಗ್ಗೆ ವಿಸ್ತೃತ ಅಧ್ಯಯನ ನಡೆಸಿ, ಬೇರೆ ರಾಜ್ಯಗಳಲ್ಲಿನ ಪರಿಸ್ಥಿತಿ ನೋಡಿಕೊಂಡು ವರದಿ ಸಲ್ಲಿಸಲು ಆದಷ್ಟು ಬೇಗ ಆಯೋಗ ರಚನೆ ಮಾಡಲಾಗುವುದು ಎಂದು  ಹೇಳಿದರು.

ಬಜೆಟ್‌ಗೂ ಮುನ್ನ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು, ಕೇಂದ್ರ ಸರಕಾರಿ ನೌಕರರ ಸಮಾನ  ವೇತನ ಆಯೋಗ ರಚಿಸುವಂತೆ ಪತ್ರ ಬರೆದಿದ್ದರು. ಆದರೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಿಸಿರಲಿಲ್ಲ. ಇದರಿಂದ ಸರಕಾರಿ ನೌಕರರು ಅಸಮಾಧಾನಗೊಂಡಿದ್ದರು. ಇದಾದ ಮೇಲೂ ಬಿಎಸ್‌ವೈ ಮತ್ತು ಶಾಸಕರ ಕಡೆಯಿಂದ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಲಾಗಿತ್ತು.

7.60 ಲಕ್ಷ ಹುದ್ದೆಗಳು
ರಾಜ್ಯದಲ್ಲಿ ಒಟ್ಟು 7.60 ಲಕ್ಷ ಸರಕಾರಿ  ಹುದ್ದೆಗಳಿವೆ. ಇದರಲ್ಲಿ 5.20 ಲಕ್ಷ ಮಂದಿ ಕಾರ್ಯ ನಿರ್ವಹಿಸುತ್ತಿದ್ದು, 2.40 ಲಕ್ಷ ಹುದ್ದೆ ಖಾಲಿ ಉಳಿದಿವೆ. ಖಾಲಿ ಹುದ್ದೆಗಳಿಂದ ಬೊಕ್ಕಸಕ್ಕೆ ಉಳಿತಾಯವಾಗುತ್ತಿದೆ. ಇದರ ಮಧ್ಯೆ ಕೇಂದ್ರ ಸರಕಾರಿ ನೌಕರರ ಸಮಾನ ವೇತನ ಆಯೋಗ ರಚಿಸಿ ಪರಿಷ್ಕೃತ ವೇತನ ನೀಡಲು 10,500 ಕೋಟಿ ರೂ. ಬೇಕಾಗುತ್ತದೆ ಎಂದೂ ಸಿಎಂ ಹೇಳಿದರು. ಅಲ್ಲದೆ, ಖಾಲಿ ಹುದ್ದೆಗಳ ಪೈಕಿ, 91 ಸಾವಿರ ಮಂದಿ ಹೊರಗುತ್ತಿಗೆ ನೌಕರರೂ ಇದ್ದಾರೆ ಎಂದರು.

ಗುತ್ತಿಗೆ ವ್ಯವಸ್ಥೆ ರದ್ದು ಮಾಡಿ
ಈ ಸಂದರ್ಭದಲ್ಲಿ ವಿಪಕ್ಷದ ನಾಯಕ ಸಿದ್ದರಾಮಯ್ಯ ಮಧ್ಯ ಪ್ರವೇಶಿಸಿ, ಹೊರ ಗುತ್ತಿಗೆ ವ್ಯವಸ್ಥೆಯಿಂದ ಮೀಸಲಾತಿ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಎಸ್ಸಿ, ಎಸ್ಟಿ ಸಮುದಾಯದವರು ಉದ್ಯೋಗ ವಂಚಿತರಾಗುತ್ತಾರೆ. ಇದರಿಂದ ಸಮಾನ ವೇತನವೂ ಸಿಗುವುದಿಲ್ಲ. ಹೀಗಾಗಿ ಹೊರ ಗುತ್ತಿಗೆ ವ್ಯವಸ್ಥೆಯನ್ನು ರದ್ದುಪಡಿಸುವಂತೆ ಆಗ್ರಹಿಸಿದರು.

ರಾಜ್ಯದ ಸರಕಾರಿ ನೌಕರರ ಸಂಘದ ಇತಿಹಾಸದಲ್ಲಿ ಸಂತಸದ ದಿನ. 40 ವರ್ಷಗಳಿಂದ ಈ ಬೇಡಿಕೆ ಇತ್ತು. 6 ಲಕ್ಷ ಸರಕಾರಿ ನೌಕರರ ಬೇಡಿಕೆಯನ್ನು ಸಿಎಂ ಬೊಮ್ಮಾಯಿ ಅವರು ಸದನದಲ್ಲಿ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇವೆ.
– ಸಿ.ಎಸ್‌. ಷಡಕ್ಷರಿ,
ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.