Chikkamagaluru: ನಕಲಿ ಚಿನ್ನದ ನಾಣ್ಯಗಳ ನೀಡಿ ವಂಚನೆ; ಆರೋಪಿ ಬಂಧನ
ಜಮೀನಿನಲ್ಲಿ ಉಳುಮೆ ಮಾಡುವಾಗ ಚಿನ್ನದ ನಾಣ್ಯಗಳು ಸಿಕ್ಕಿದೆ ಎಂದು ನಂಬಿಸಿದ ವಂಚಕ
Team Udayavani, Aug 31, 2024, 10:33 PM IST
ಚಿಕ್ಕಮಗಳೂರು: ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಚಿನ್ನದ ನಾಣ್ಯಗಳು ಸಿಕ್ಕಿವೆ. ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತೇನೆ ಎಂದು ನಂಬಿಸಿ ನಕಲಿ ಚಿನ್ನದ ನಾಣ್ಯಗಳ ನೀಡಿ ವಂಚಿಸಿದ ಆರೋಪಿಯ ಬಂಧಿಸುವಲ್ಲಿ ಬೀರೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಮಧುರೈ ನಿವಾಸಿ ವೆಂಕಟೇಶ್ ಎಂಬವರಿಗೆ ರವಿ ದೂರವಾಣಿ ಕರೆ ಮಾಡಿ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಚಿನ್ನದ ನಾಣ್ಯಗಳು ಸಿಕ್ಕಿವೆ ಅವುಗಳನ್ನು ಕಡಿಮೆ ಬೆಲೆಗೆ ಮಾರುತ್ತೇನೆಂದು ನಂಬಿಸಿದ್ದಾನೆ. ಈತನ ಮಾತು
ನಂಬಿ ವೆಂಕಟೇಶ್ ಬೀರೂರಿಗೆ ಆಗಮಿಸಿದ್ದು, ಅಸಲಿ ಒಂದು ಚಿನ್ನದ ನಾಣ್ಯ ಸ್ಯಾಂಪಲ್ ನೀಡಿದ್ದಾನೆ. ನ್ಯಾಣ ಅಸಲಿ ಎಂದು ತಿಳಿದ ಮೇಲೆ ವೆಂಕಟೇಶ್ ತನ್ನ ಸ್ನೇಹಿತರ ಬಳಿ ಎರಡು ಲಕ್ಷ ರೂ. ಸಾಲ ಮಾಡಿ 200 ಗ್ರಾಂ ನಷ್ಟು ಚಿನ್ನದ ನಾಣ್ಯ ಖರೀದಿ ಮಾಡಿದ್ದಾನೆ.
ನಂತರ ಈ ನಾಣ್ಯಗಳ ಪರಿಶೀಲಿಸಿದಾಗ ಇವುಗಳು ನಕಲಿ ಚಿನ್ನದ ನಾಣ್ಯಗಳು ಎಂಬುದು ತಿಳಿದಿದೆ. ತಾನು ಮೋಸ ಹೋಗಿ ರುವುದು ಗೊತ್ತಾಗುತ್ತಿದ್ದಂತೆ ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ. ಆರೋಪಿಯ ಪತ್ತೆಗಾಗಿ ವಿವಿಧ ಆಯಾಮಗಳಲ್ಲಿ ಮಾಹಿತಿ ಕಲೆ ಹಾಕಿದ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾವಣಗೆರೆ ಜಿಲ್ಲೆಯ ಹಲಕನಹಾಳ್ ರಾಜಪ್ಪ ಎಂಬಾತನ ಬಂಧಿಸಿ ಆತನಿಂದ ಎರಡು ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಿಬ್ಬಂದಿಗಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.