Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ
"ಉದಯವಾಣಿ' ವರದಿಗೆ ಸ್ಪಂದಿಸಿದ ಸರಕಾರ
Team Udayavani, Sep 28, 2024, 1:49 AM IST
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣೆಗೋಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸೌಲಭ್ಯ ಇಲ್ಲದೇ ಮೃತಪಟ್ಟ ಯುವಕನನ್ನು ಕಾಲು ದಾರಿ ಮೂಲಕ ಜೋಳಿಗೆಯಲ್ಲಿ ಹೊತ್ತೂಯ್ದ ಸುದ್ದಿ ಪ್ರಕಟವಾದ ಪರಿಣಾಮ ಬೆನ್ನಲ್ಲೇ ಎಚ್ಚೆತ್ತ ಗ್ರಾಮ ಪಂಚಾಯತ್ ಗ್ರಾಮದ ಸೇತುವೆ ಹಾಗೂ ರಸ್ತೆ ಕಾಂಕ್ರೀಟಿಕರಣಕ್ಕೆ 1.80 ಕೋಟಿ ರೂ.ಅಂದಾಜು ಪಟ್ಟಿ ತಯಾರಿಸಿ ಅನುಮೋದನೆಗಾಗಿ ಸಲ್ಲಿಸಿದೆ.
“ದಾರಿ ಇಲ್ಲದೇ ಯುವಕನ ಶವ ಜೋಳಿಗೆಯಲ್ಲಿ ಹೊತ್ತೂಯ್ದರು’ ಶೀರ್ಷಿಕೆಯಡಿ ಸೆ. 2ರಂದು “ಉದಯವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ಪರಿಣಾಮ ವಾಸ್ತವಾಂಶ ಅರಿತು ಕೈಗೊಂಡ ಕ್ರಮಗಳ ಕುರಿತು ಅನುಪಾಲನಾ ವರದಿ ಸಲ್ಲಿಸುವಂತೆ ಗ್ರಾಮ ಪಂಚಾಯತ್ಗೆ ಸರಕಾರದಿಂದ ನಿರ್ದೇಶನ ನೀಡಲಾಗಿತ್ತು. ಆ ಬಳಿಕ ರಾಜ್ಯ ಮಾನವ ಹಕ್ಕು ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಅವರು ಗ್ರಾಮಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳನ್ನು ಪರಿಶೀಲಿಸಿದ್ದರು.
ಗ್ರಾಮಕ್ಕೆ ಕಳೆದ ಸಾಲಿನಲ್ಲಿ ರಸ್ತೆ ನಿರ್ಮಾಣಕ್ಕೆ 40 ಲಕ್ಷ ಅನುದಾನ ಕಾಯ್ದಿರಿಸಿದ್ದು ಅನುದಾನ ಕೊರತೆಯಿಂದ ಕಾಮಗಾರಿ ಆರಂಭವಾಗಿರಲಿಲ್ಲ. ಈಗ ರಸ್ತೆ, ಸೇತುವೆ ಕಾಮಗಾರಿಗೆ 1.80 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಿ ಮಂಜೂರಾತಿ ಕೋರಿ ಸಲ್ಲಿಕೆ ಮಾಡಲಾಗಿದೆ ಎಂದು ಸಂಸೆ ಗ್ರಾಮ ಪಂಚಾಯತ್ ಪಿಡಿಒ ಸಿಎಂ ಕಚೇರಿಗೆ ಸಲ್ಲಿಸಿರುವ ಅನುಪಾಲನಾ ವರದಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್
Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ
Electrical system: ಕೃಷಿ ಪಂಪ್ಸೆಟ್-ಆಧಾರ್ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ
Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್
Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.