Maternity Neglect: ಮಗುವಿಗೆ ದೃಷ್ಟಿ ದೋಷ; ಲೇಡಿಗೋಷನ್ ಆಸ್ಪತ್ರೆ ವಿರುದ್ಧ ದೂರು
Team Udayavani, Aug 22, 2024, 7:20 AM IST
ಮಂಗಳೂರು: ಹೆರಿಗೆ ಸಮಯದಲ್ಲಿ ಮಗುವಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಲೇಡಿಗೋಷನ್ ಆಸ್ಪತ್ರೆ ವಿರುದ್ಧ ಆರೋಗ್ಯ ಸಚಿವರು, ದ.ಕ. ಜಿಲ್ಲಾಧಿಕಾರಿಗೆ ಪೋಷಕರು ದೂರು ನೀಡಿದ್ದಾರೆ.
ತಾಯಿಯ ಸಹೋದರ ನೀಡಿರುವ ದೂರಿನಲ್ಲಿ, “ನನ್ನ ತಂಗಿ 9 ತಿಂಗಳ ಗರ್ಭಿಣಿಯಾಗಿದ್ದು, ಆ.17ರಂದು ರಾತ್ರಿ ಸರಕಾರಿ ಲೇಡಿಗೋಷನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆ.18ರಂದು ಬೆಳಗ್ಗೆ 10.30ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿರುತ್ತಾಳೆ.
ಮಗು ಸಹಜವಾಗಿದೆ ಎಂದು ವೈದ್ಯರು ತಿಳಿಸಿದರು. ಮೂರು ದಿನ ಕಳೆದರೂ ಮಗುವನ್ನು ನಮಗೆ ತೋರಿಸಿಲ್ಲ. ಮಂಗಳವಾರ ಸಂಜೆ ಏಕಾಏಕಿ ಮಗುವಿಗೆ ಒಂದು ಕಣ್ಣಿಲ್ಲ ಎಂದು ತಿಳಿಸಿದ್ದು, ನಮಗೆ ಆಘಾತವಾಗಿದೆ. ಈ ಬಗ್ಗೆ ವೈದ್ಯರು ಹಾಗೂ ಮೇಲಧಿಕಾರಿಗಳು ಸೂಕ್ತ ಕಾರಣ ನೀಡಿಲ್ಲ. ನಾವು ವೈದ್ಯಕೀಯ ವರದಿಗಳನ್ನು ಕೇಳಿ ದರೂ ಕೊಡದಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ. ಮಗುವಿಗೆ ಎದೆ ಹಾಲು ಉಣಿಸಲು ಮೂರು ದಿನ ಕಳೆದರೂ ಅವಕಾಶ ನಿರಾಕರಿಸಲಾಗಿದೆ. ಹೀಗಾಗಿ ತಾಯಿ ಮತ್ತು ಮಗುವಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಪಾಣೆಮಂಗಳೂರಿನ ನಿವಾಸಿ ಯಾಗಿರುವ ಮಗುವಿನ ತಾಯಿ ಪರವಾಗಿ ತುಳುನಾಡ ರಕ್ಷಣ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಲೇಡಿಗೋಶನ್ ಆಸ್ಪತ್ರೆ ಅಧೀಕ್ಷಕ ಡಾ| ದುಗಾ ಪ್ರಸಾದ್ ಎಂ.ಆರ್., “ಸಂತ್ರಸ್ತೆ ಆ.18ರಂದು ಮುಂಜಾನೆ ಹೆರಿಗೆಗಾಗಿ ಬಂದಿದ್ದು, ಬೆಳಗ್ಗೆ 9.58ಕ್ಕೆ ಹೆರಿಗೆ ಆಗಿತ್ತು. ಆಗ ಮಗು ಅತ್ತಿದೆ. ಆದರೆ ಉಸಿರಾಟಕ್ಕೆ ತೊಂದರೆ ಇತ್ತು. ತಜ್ಞ ವೈದ್ಯರ ಸಲಹೆ ಮೇರೆಗೆ ಎನ್ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಮಗುವಿಗೆ ಕೃತಕ ಉಸಿರಾಟ ಒದಗಿಸಲು ಸಿಪ್ಯಾಪ್ ವ್ಯವಸ್ಥೆ ಮಾಡಲಾಗಿತ್ತು.
ಉಸಿರಾಟದಲ್ಲಿ ಸುಧಾರಣೆ ಕಂಡು ಬಂದ ಬಳಿಕ ಮಕ್ಕಳ ತಜ್ಞರು ಉಳಿದ ನ್ಯೂನತೆ ಕಂಡು ಹಿಡಿಯುವ ವೇಳೆ ಕಣ್ಣಿನ ಭಾಗ ಒಳಗೆ ಹೋಗಿರುವಂತೆ ಕಂಡು ಬಂತು. ಮಕ್ಕಳ ಕಣ್ಣಿನ ತಜ್ಞರ ಅಭಿಪ್ರಾಯ ಪಡೆಯಲು ನಿರ್ಧರಿಸಿದ ಬಳಿಕ ಈ ಬಗ್ಗೆ ಮಗುವಿನ ಪೋಷಕರಿಗೆ ತಿಳಿಸಲಾಗುತ್ತದೆ. ಮಕ್ಕಳ ಕಣ್ಣಿನ ತಜ್ಞರು ಕಣ್ಣಿನ ಅಲ್ಟ್ರಾಸೌಂಡ್ ತಪಾಸಣೆ ನಡೆಸಿದಾಗ ಕಣ್ಣು ಗುಡ್ಡೆ ಜನನದ ವೇಳೆಯೇ ಇಲ್ಲದಿರುವುದು ಕಂಡು ಬಂದಿದೆ. ಅದನ್ನು ಪೋಷಕರಿಗೆ ತಿಳಿಸಿದಾಗ ಅವರು ಆತಂಕಕ್ಕೊಳಗಾಗಿದ್ದಾರೆ.
ಈ ವಿಷಯ ತಿಳಿಸಲು ವಿಳಂಬ ಮಾಡಲಾಗಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ. ಈ ಪ್ರಕರಣದ ಎಲ್ಲ ದಾಖಲೆಗಳು, ಸಿಸಿಟಿವಿ ಫೂಟೇಜ್ಗಳೂ ಆಸ್ಪತ್ರೆಯಲ್ಲಿವೆ. ಆಸ್ಪತ್ರೆಯಿಂದ ಯಾವುದೇ ಲೋಪವಾಗಿಲ್ಲ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.