CM Aspirant: ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಶಾಸಕ ಶಿವಗಂಗಾ
ಬೇರೆಯವರಿಗೆ ನೋವು ಕೊಟ್ಟು ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು ಎಂದು ನಾನು ಬಯಸಲ್ಲ: ಬಸವರಾಜು
Team Udayavani, Sep 24, 2024, 11:23 PM IST
ದಾವಣಗೆರೆ: ನಮ್ಮ ನಾಯಕ ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಆದರೆ ಇನ್ನೊಬ್ಬರಿಗೆ ನೋವು ಕೊಟ್ಟು ಆಗುವುದಿಲ್ಲ. ಈಗ ಸಿದ್ದರಾಮಯ್ಯ ಅವರೇ ಮುಂದುವರಿಯಲಿದ್ದಾರೆ ಎಂದು ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಒಳ್ಳೆಯ ಸಂದರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಜತೆ ಇದ್ದೇವೆ. ಈಗ ಅವರಿಗೆ ಕೆಟ್ಟ ಸಂದರ್ಭ ಬಂದಿದೆ. ಈಗಲೂ ಜತೆಗಿರುತ್ತೇವೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆಗಿದು ಸೂಕ್ತ ಕಾಲ ಅಲ್ಲ. ಬೇರೆಯವರಿಗೆ ನೋವು ಕೊಟ್ಟು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ನಾನು ಬಯಸುವುದಿಲ್ಲ; ಹಾಗೆಂದು ಡಿ.ಕೆ. ಶಿವಕುಮಾರ್ ಸಿಎಂ ಆಗುವವರೆಗೂ ನಾನು ಅವರು ಸಿಎಂ ಆಗಲೇಬೇಕು ಎನ್ನುತ್ತೇನೆ ಎಂದರು.
ರಾಜ್ಯಪಾಲರ ಕೈಗೊಂಬೆಯಾಗಿಸಿ ಮಾಡಿದ ಕುತಂತ್ರ:
ಈಗ ಪಕ್ಷದ ಎಲ್ಲ ಶಾಸಕರು, ಪಕ್ಷದ ಹೈಕಮಾಂಡ್ ಎಲ್ಲರೂ ಸಿದ್ದರಾಮಯ್ಯರಿಗೆ ನೈತಿಕ ಬೆಂಬಲ ನೀಡುತ್ತೇವೆ. ಮುಖ್ಯಮಂತ್ರಿಯವರ ಮೇಲೆ ಆರೋಪ ಕೇಳಿಬಂದಿದೆ ಅಷ್ಟೇ. ಅವರು ಅಪರಾಧಿಯಲ್ಲ. ಅವರ ಜತೆಗೆ ನಾವೆಲ್ಲ ನಿಲ್ಲುತ್ತೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ನೀಡಿದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾಗೊಳಿಸಿದ ವಿಚಾರವಾಗಿ ನಾನು ಏನೂ ಮಾತನಾಡಲ್ಲ. ನ್ಯಾಯಾಲಯದ ಬಗ್ಗೆ ಗೌರವವಿದೆ. ಆದರೆ, ಇದೆಲ್ಲವೂ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಕೈಗೊಂಬೆಯಾಗಿಸಿಕೊಂಡು ಮಾಡಿದ ಕುತಂತ್ರ ಎಂಬದರಲ್ಲಿ ಎರಡು ಮಾತಿಲ್ಲ ಎಂದು ಆರೋಪಿಸಿದರು.
ಯಡಿಯೂರಪ್ಪ, ನಿರಾಣಿ, ಜೊಲ್ಲೆ , ಜನಾರ್ದನ ರೆಡ್ಡಿ, ಎಚ್.ಡಿ. ಕುಮಾರಸ್ವಾಮಿ ವಿಚಾರಣೆಗೆ ತನಿಖಾ ಸಂಸ್ಥೆಗಳು ಅನುಮತಿ ಕೇಳಿದರೂ ಕೊಡದ ರಾಜ್ಯಪಾಲರು, ಸಾಮಾಜಿಕ ಕಾರ್ಯಕರ್ತನೊಬ್ಬನ ಮನವಿಗೆ ಅನುಮತಿ ಕೊಟ್ಟಿರುವುದು ಯಾವ ನ್ಯಾಯ? ನಾನೇ ಪ್ರಧಾನಿಯವರ ವಿರುದ್ಧ ಆರೋಪ ಮಾಡಿದರೆ, ಅವರು ರಾಜೀನಾಮೆ ಕೊಡುತ್ತಾರೆಯೇ? ಇದೆಲ್ಲ ರಾಜ್ಯಪಾಲರ ಮೂಲಕ ಬಿಜೆಪಿ ನಡೆಸಿದ ಷಡ್ಯಂತ್ರ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಶಾಸಕ ಶಿವಗಂಗಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ
MUDA Scam: ಹೈಕೋರ್ಟ್ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
MUDA Scam: ಹೈಕೋರ್ಟ್ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ
Hubli: ಸಿದ್ದರಾಮಯ್ಯ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಮುಂದುವರೆಯದೆ ರಾಜೀನಾಮೆ ನೀಡಲಿ: ಜೋಶಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.