![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 22, 2019, 6:16 PM IST
ಬೆಂಗಳೂರು: ರಾಜ್ಯದಲ್ಲಿ ಜನ ತಿರಸ್ಕಾರ ಮಾಡಿದ್ದು, ,ವಿಶ್ವಾಸ ಕಳೆದುಕೊಂಡು, ಅಪ್ಪನ ಮಾತು ಕೇಳಿ ರಾಜಕೀಯ ದೊಂಬರಾಟ ಮಾಡಿ, ಜನರ ಗಮನ ಬೇರೆಡೆಗೆ ಸೆಳೆಯಲು ವ್ಯವಸ್ಥಿತ ಪಿತೂರಿ ನಡೆಸಿ ಗ್ರಾಮ ವಾಸ್ತ್ಯವ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಶನಿವಾರ ಬಿಜೆಪಿ ಕಚೇರಿಯಲ್ಲಿ ಸದಸತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಬಾರಿ 42 ಹಳ್ಳಿಯಲ್ಲಿ ಗ್ರಾಮವಾಸ್ತವ್ಯ ಮಾಡಿದ್ದರು, ಅಲ್ಲಿಯ ಪ್ರಗತಿ ಪರಿಶೀಲಿಸಿ ಒಂದು ಪುಸ್ತಕ ಹೊರ ತರುತ್ತಿದ್ದೇವೆ. ಆ ಪುಸ್ತಕದಲ್ಲಿ ಗ್ರಾಮ ವಾಸ್ತವ್ಯದ ಅಭಿವೃದ್ದಿ ಬಹಿರಂಗ ಪಡಿಸುತ್ತೇವೆ ಎಂದರು.
ಹಳ್ಳಿಗೆ ಒಂದು ಕೋಟಿ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದರು. ಹಳ್ಳಿಗೆ 1 ಕೋಟಿ ಕೊಡುತ್ತೇವೆ ಎಂದಿದ್ದಾರೆ, ಯಾವುದನ್ನು ನೀಡಿಲ್ಲ. ಸುವರ್ಣ ಗ್ರಾಮ ಯೋಜನೆಯಡಿ ಪ್ರಚಾರ ಇಲ್ಲದೆ ಒಂದೆರೆಡು ಕೋಟಿ ರೂ. ನೀಡುತ್ತಿದ್ದೇವೆ. ಸಿಎಂ ಅಪ್ಪನ ಮಾತು ಕೇಳಿಕೊಂಡು ರಾಜಕೀಯ ಡೊಂಬರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಶಿವಮೊಗ್ಗದಲ್ಲಿ ಭೀಕರ ಬರಗಾಲ, ಕುಡಿಯುವ ನೀರಿಗಾಗಿ ಸತ್ಯಾಗ್ರಹ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಬರಗಾಲ ಪೀಡಿತ ಪ್ರದೇಶಕ್ಕೆ ಹೋಗಿ ಸ್ಥಳದಲ್ಲೇ ಪರಿಹಾರ ಹುಡುಕುವುದು ಬಿಟ್ಟು ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ ಎಂದು ದೂರಿದರು.
ರಾಜ್ಯದ ರಾಜಕೀಯ ಪರಿಸ್ಥಿತಿ ಗಮನಿಸಿದರೆ ಸ್ವಲ್ಪ ದಿನದಲ್ಲಿ ಏನೂ ಬೇಕಾದರೂ ಆಗಬಹುದು. ಜನರು ಸರ್ಕಾರ ತೊಲಗಬೇಕು ಎಂದು ಶಾಪ ಹಾಕುತ್ತಿದ್ದಾರೆ. ಜನರಿಗೆ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.