ಲಾಕ್ಡೌನ್ ಬಿಗಿಗೊಳಿಸಲು ಸಿಎಂ ಸೂಚನೆ
ಡಿಸಿಗಳೊಂದಿಗೆ ಯಡಿಯೂರಪ್ಪ ವೀಡಿಯೋ ಕಾನ್ಫರೆನ್ಸ್
Team Udayavani, Apr 9, 2020, 6:30 AM IST
ಬೆಂಗಳೂರು: ಕೋವಿಡ್ 19 ನಿಯಂತ್ರಣ ಮತ್ತು ಕೈಗೊಂಡಿರುವ ಕ್ರಮಗಳ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ, ಲಾಕ್ಡೌನ್ ಅನುಷ್ಠಾನ, ಆಹಾರ ಧಾನ್ಯ ಹಂಚಿಕೆ, ಹಾಲು ವಿತರಣೆ ಮಾಹಿತಿ ಪಡೆದರು.
ಲಾಕ್ಡೌನ್ ಅನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ಬೆಳಗ್ಗೆಯಿಂದ ರಾತ್ರಿವರೆಗೂ ಅಗತ್ಯ ವಸ್ತುಗಳ ಅಂಗಡಿ ತೆರೆಯುವ ಮೂಲಕ ಜನಸಂದಣಿಯಾಗದಂತೆ ಎಚ್ಚರ ವಹಿಸಬೇಕು. ಕೋವಿಡ್-19ಗೆ ಚಿಕಿತ್ಸೆ ನೀಡುವ ಆರೋಗ್ಯ ಇಲಾಖೆ ಸಿಬಂದಿಗೆ ಅಗತ್ಯವಾಗಿರುವ ಆಹಾರ, ಕುಡಿಯುವ ನೀರು, ವಸತಿ ಸೌಲಭ್ಯ ಒದಗಿಸಿ ಎಂದು ಆದೇಶ ನೀಡಿದರು.
ಆರೋಗ್ಯ ತಪಾಸಣೆ ನಡೆಸಿ
ಕ್ಯಾಂಪ್ನಲ್ಲಿರುವ ಕಾರ್ಮಿಕರಿಗೆ ಅಗತ್ಯ ವ್ಯವಸ್ಥೆ, ಅವರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು ಅಗತ್ಯ ವೈದ್ಯಕೀಯ ಉಪಕರಣ, ವಸ್ತುಗಳನ್ನು ಎಸ್ಡಿಆರ್ಎಫ್ ಅಡಿ ಖರೀದಿಸಬಹುದು ಎಂದು ಸಲಹೆ ನೀಡಿದರು.
ಮೈಸೂರು, ಬೀದರ್, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಬಳ್ಳಾಪುರ ಮೊದಲಾದ ಕಡೆಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಂಡು ಎ.14 ರ ಒಳಗೆ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಒತ್ತಡಕ್ಕೆ ಮಣಿಯದೆ ಜನಪ್ರತಿನಿಧಿಗಳ ಮೂಲಕ ಮನವೊಲಿಸಿ, ಎಲ್ಲ ಸಮುದಾಯಗಳ ಸಹಯೋಗದಿಂದ ಕಾರ್ಯ ನಿರ್ವಹಿಸಬೇಕು. ನಿಜವಾಗಿಯೂ ಬಡವರಿದ್ದು, ಪಡಿತರ ಚೀಟಿ ಇನ್ನೂ ಪಡೆಯದೆ ಇದ್ದರೆ, ದಾನಿಗಳ ನೆರವಿನಿಂದ ಆಹಾರ ಧಾನ್ಯ ವಿತರಿಸಲು ವ್ಯವಸ್ಥೆ ಮಾಡಬೇಕು. ಯಾರೂ ಹಸಿವಿನಿಂದ ಬಳಲದಂತೆ ಎಚ್ಚರ ವಹಿಸುವಂತೆ ಸಿಎಂ ತಿಳಿಸಿದರು.
ಮುಖ್ಯಮಂತ್ರಿ ನಿರ್ದೇಶ ಎಲ್ಲ ಜಿಲ್ಲೆಗಳಲ್ಲಿಯೂ ದಾನಿಗಳ ಸಹಕಾರ ಪಡೆದು, ಆಹಾರ ಪೂರೈಕೆ, ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. ರೈತರು ಬೆಳೆದ ಹಣ್ಣು ತರಕಾರಿ ಬೆಳೆಗೆ ಉತ್ತಮ ಬೆಲೆ ನೀಡಿ ಖರೀದಿಸಿ, ಬಿತ್ತನೆ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಸಮರ್ಪಕವಾಗಿರುವಂತೆ ಎಚ್ಚರ ವಹಿಸಲು ಸಿಎಂ ಯಡಿಯೂರಪ್ಪ ನಿರ್ದೇಶ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.