CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ


Team Udayavani, Jul 5, 2024, 12:58 AM IST

CM-Siddaramaiah

ಬೆಂಗಳೂರು: ವಾಲ್ಮೀಕಿ ನಿಗಮದ ಪ್ರಕರಣದ ಜತೆಗೆ ಮುಡಾ ಹಗರಣ ಕೂಡ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸರಕಾರದ ವಿರುದ್ಧ ವಿಪಕ್ಷಗಳ ಕೈಗೆ ಬ್ರಹ್ಮಾಸ್ತ್ರ ಸಿಕ್ಕಂತಾಗಿದೆ. ಇದರ ಬೆನ್ನಲ್ಲೇ ತನ್ನದೇನೂ ತಪ್ಪಿಲ್ಲವೆಂದು ಸಂಪುಟ ಸಹೋದ್ಯೋಗಿಗಳಿಗೆ ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯತ್ನಪಟ್ಟಿದ್ದಾರೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 30ಕ್ಕೂ ಹೆಚ್ಚು ವಿಷಯಗಳ ಬಗ್ಗೆ ಚರ್ಚೆ ನಡೆದು ಅನುಮೋದನೆ ಕೊಡಲಾಯಿತು. ಇದೇ ಸಭೆಯಲ್ಲಿ ಮುಡಾ ಹಗರಣದ ಬಗ್ಗೆ ಯಾರೂ ಕೇಳದಿದ್ದರೂ ಸಿಎಂ ಸಿದ್ದರಾಮಯ್ಯ ಸ್ವಯಂನಿವೇದನೆ ಮಾಡಿಕೊಂಡಿದ್ದು, ಪ್ರಕರಣದ ಬಗ್ಗೆ ಎಳೆ ಎಳೆಯಾಗಿ ಬಿಡಿಸಿಟ್ಟು ತಪ್ಪು ತಮ್ಮದಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ನನ್ನ ಭಾವಮೈದುನನ ಹೆಸರಿನಲ್ಲಿ ಇದ್ದ 3.16 ಎಕರೆಯನ್ನು ನನ್ನ ಪತ್ನಿ ಪಾರ್ವತಿಯ ಹೆಸರಿಗೆ ಉಡುಗೊರೆಯಾಗಿ ಕೊಟ್ಟಿದ್ದ. ಅದನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದವರು ಬಡಾವಣೆ ಅಭಿವೃದ್ಧಿಗೆ ಬಳಸಿಕೊಂಡು ನಿವೇಶನಗಳನ್ನು ನಿರ್ಮಿಸಿದ್ದಾರೆ. ಕಾನೂನಿನ ಪ್ರಕಾರ ಅದಕ್ಕೆ ಬದಲಿ ಜಮೀನನ್ನು ಪರಿಹಾರವಾಗಿ ಕೊಡಬೇಕಿತ್ತು. 2021ರಲ್ಲಿ ಬಿಜೆಪಿಯವರದ್ದೇ ಸರಕಾರ ಅಧಿಕಾರದಲ್ಲಿದ್ದಾಗ ಯಾರದ್ದೇ ಜಮೀನಿನಲ್ಲಿ ಬಡಾವಣೆ ನಿರ್ಮಿಸಿದರೆ ಅದರಲ್ಲಿ ಶೇ. 50ರಷ್ಟು ನಿವೇಶನವನ್ನು ಭೂಮಾಲಕರಿಗೆ ಕೊಡುವ ಕಾನೂನು ತಂದರು. ಅದರ ಪ್ರಕಾರ ನಮಗೆ ಕೊಟ್ಟಿದ್ದಾರೆ. ಜಮೀನಿನ ಬೆಲೆ ಕೋಟ್ಯಂತರ ರೂ. ಆಗಲಿದೆ. ಅದರಲ್ಲೂ ಅನ್ಯಾಯ ಆಗಿತ್ತು. ಆದರೂ ನಾನು ಕೇಳಲು ಹೋಗಿರಲಿಲ್ಲ. ಆಗ ನಾವೇನು ಅಧಿಕಾರದಲ್ಲಿ ಇರಲಿಲ್ಲ ಎಂದರು.

ಮಾಜಿ ಸಚಿವರಾದ ಸಾ.ರಾ. ಮಹೇಶ್‌, ಜಿ.ಟಿ. ದೇವೇಗೌಡ ಕೂಡ 50:50ರ ಅನುಪಾತದಲ್ಲಿ ನಿವೇಶನ ಪಡೆದಿದ್ದಾರೆ. ಬಿಜೆಪಿ ಜತೆ ಸೇರಿಕೊಂಡಿರುವುದರಿಂದ ಅದರ ಬಗ್ಗೆ ಅವರ್ಯಾರೂ ಮಾತನಾಡುತ್ತಿಲ್ಲ ಎಂಬುದನ್ನೂ ಸಿಎಂ ಉಲ್ಲೇಖೀಸಿದ್ದಾರೆ.
ವಾಲ್ಮೀಕಿ ನಿಗಮ ಪ್ರಕರಣ:
ಬೇರಾರೂ ಪ್ರತಿಕ್ರಿಯಿಸಬೇಡಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದ ವಿಚಾರದಲ್ಲಿ ಎಲ್ಲರೂ ಪ್ರತಿಕ್ರಿಯಿಸುವುದು ಬೇಡ ಎಂದಿದ್ದಾರೆ.

ತಪ್ಪು ಎನ್ನುವುದಾದರೆ ಪರಿಹಾರ ಕೊಡಲಿ
ಮುಡಾ ಪ್ರಕರಣ ಸಿಬಿಐ ತನಿಖೆಗೆ ಕೊಡುವ ಆವಶ್ಯಕತೆ ಕಾಣುತ್ತಿಲ್ಲ. 50:50ರ ಅನುಪಾತದಲ್ಲಿ ನಿವೇಶನ ನೀಡುವುದನ್ನು ರದ್ದು ಮಾಡಿ ನಮ್ಮದೇ ಸರಕಾರ 2023ರಲ್ಲಿ ಆದೇಶಿಸಿರುವುದು ನಿಜ. ಅದು ಈಗ, ಆಗಲ್ಲ. ಅಲ್ಲಿ ನಮಗೆ ಸೇರಿದ 3.16 ಎಕರೆ ಜಾಗವಿತ್ತು. ಇದರ ಮಾರುಕಟ್ಟೆ ದರ 62 ಕೋಟಿ ರೂ. ಒಂದು ಎಕರೆ ಎಂದರೆ ಸುಮಾರು 44 ಸಾವಿರ ಚದರ ಅಡಿ ವಿಸ್ತೀರ್ಣ. ನಮಗೆ 14 ನಿವೇಶನ ಮಾತ್ರ ಕೊಟ್ಟಿದ್ದಾರೆ. ಅಂದರೆ 38,264 ಚದರಡಿಯನ್ನಷ್ಟೇ ನಮಗೆ ಕೊಟ್ಟಂತಾಗಿದೆ. ಅದು ತಪ್ಪು ಎನ್ನುವುದಾರೆ ನಮಗೆ 62 ಕೋಟಿ ರೂ. ಪರಿಹಾರ ಕೊಟ್ಟು, ಆ ಜಾಗವನ್ನು ಮುಡಾದವರೇ ಇಟ್ಟುಕೊಳ್ಳಲಿ ಎಂದು ಸಿಎಂ ಹೇಳಿದರು.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.