Code of Conduct: ಜೆ.ಪಿ.ನಡ್ಡಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ
ಲೋಕಸಭೆ ಚುನಾವಣೆ ಸಂದರ್ಭ ಪ್ರಚೋದನಾಕಾರಿ ಹೇಳಿಕೆ; ಸಿ.ಟಿ. ರವಿ ವಿರುದ್ಧದ 2 ಪ್ರಕರಣಕ್ಕೂ ಹೈಕೋರ್ಟ್ ಮಧ್ಯಾಂತರ ತಡೆ
Team Udayavani, Sep 27, 2024, 7:18 AM IST
ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭ ಬಿಜೆಪಿಯ ಅಧಿಕೃತ ಇನ್ಸ್ಟ್ರಾಗ್ರಾಂ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಲ್ಪಸಂಖ್ಯಾಕ ಸಮುದಾಯದ ವಿರುದ್ಧ ಅವಮಾನಕರ ಹಾಗೂ ಪ್ರಚೋದನಕಾರಿ ಹೇಳಿಕೆ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ಕಲಬುರಗಿಯ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪ್ರಕರಣ ಸಂಬಂಧ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾರವಾಳ ಗ್ರಾಮದ ಪ್ರವೀಣ್ ಕುಮಾರ್ ಪಾಟೀಲ್ ಕಲಬುರಗಿಯ ಸೈಬರ್ ಅಪರಾಧ ಠಾಣೆಯಲ್ಲಿ (ಸೆನ್) ದಾಖಲಿಸಿರುವ ದೂರು ಹಾಗೂ ಅದರ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ನ್ಯಾಯಿಕ ಪ್ರಕ್ರಿಯೆಗಳನ್ನು ರದ್ದುಪಡಿಸುವಂತೆ ಕೋರಿ ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
ಸಿ.ಟಿ. ರವಿ ವಿರುದ್ಧದ 2 ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ
ಕಳೆದ ಲೋಕಸಭೆ ಚುನಾವಣೆ ವೇಳೆ ಸಮಾಜದಲ್ಲಿ ಧಾರ್ಮಿಕ ದ್ವೇಷ ಹರಡಲು ಪ್ರಯತ್ನಿಸಿದ ಮತ್ತು ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧದ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಪ್ರಕರಣ ಸಂಬಂಧ ಅಧೀನ ನ್ಯಾಯಾಲಯಗಳ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ.ಟಿ. ರವಿ ಸಲ್ಲಿಸಿದ್ದ 2 ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಧ್ಯಾಂತರ ತಡೆ ನೀಡಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್ ನಾಯಕರ ಭಿನ್ನರಾಗ
Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ
MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.