Commisson judgement: ಸುಸ್ತಿದಾರ ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹತ್ತರ ತೀರ್ಪು

Team Udayavani, Sep 12, 2024, 1:05 AM IST

Consumer-Court

ಉಡುಪಿ: ಗ್ರಾಹಕನು ಸ್ಥಿರಾಸ್ತಿ ಅಡಮಾನ ಸಾಲ ಪಡೆದು ಸುಸ್ತಿದಾರನಾದಾಗ ಅದೇ ಸಂಸ್ಥೆಯಲ್ಲಿ ಅಡಮಾನವಿರಿಸಿದ ಬಂಗಾರದ ಸಾಲ ಸಂದಾಯ ಮಾಡಿದರೂ, ಅಡವಿರಿಸಿದ ಬಂಗಾರ ಹಿಂದೆ ಪಡೆಯಲು ಅರ್ಹನಲ್ಲ ಎಂದು ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ತರ ತೀರ್ಪು ನೀಡಿದೆ.

ಉಡುಪಿಯ ಗುರುಮಾಚಿದೇವ ವಿವಿಧೋದ್ದೇಶ ಸಹಕಾರ ಸಂಘದ ಕೇಂದ್ರ ಕಚೇರಿಯ ಶಾಖೆಯಲ್ಲಿ 2015ರ ಎ. 30ರಂದು ಸಂಸ್ಥೆಯ ಗ್ರಾಹಕರೊಬ್ಬರು 25 ಲ.ರೂ.ಆಸ್ತಿ ಅಡಮಾನ ಸಾಲ ಪಡೆದಿದ್ದರು. ಈ ಸಾಲವು ಸುಸ್ತಿಯಾಗಿದ್ದು, ಸಂಸ್ಥೆಯು ಸಾಲ ವಸೂಲಾತಿಗಾಗಿ ಕ್ರಮ ಕೈಗೊಂಡಿತ್ತು. ಈ ಬಗ್ಗೆ ಸಹಕಾರ ಸಂಘಗಳ ಉಪನಿಬಂಧಕರ ನ್ಯಾಯಾಲಯದಲ್ಲಿ ಅಸಲು ಮತ್ತು ಬಡ್ಡಿ ಪಾವತಿಸಲು ಸಾಲಗಾರನ ವಿರುದ್ಧ ಆದೇಶವಾಗಿದ್ದು, ಈ ಪ್ರಕರಣವು ಅಮಲ್ಜಾರಿ ಪ್ರಕ್ರಿಯೆಯಲ್ಲಿದೆ.

ಇದೇ ಗ್ರಾಹಕರು 2018ರ ಮಾ. 24ರಂದು ಸುಮಾರು 630 ಗ್ರಾಂ. ಬಂಗಾರದ ಒಡವೆಗಳನ್ನು ಅಡಮಾನವಿರಿಸಿ 16 ಲ.ರೂ. ಸಾಲ ಪಡೆದಿದ್ದು, ಆ ಸಾಲವನ್ನು ಚುಕ್ತ ಮಾಡಿ ತಾನು ಅಡವಿರಿಸಿದ ಬಂಗಾರವನ್ನು ತನಗೆ ನೀಡಬೇಕೆಂದು ಕೋರಿಕೊಂಡರು. ಆದರೆ ಸಂಸ್ಥೆಯು ಆಸ್ತಿ ಅಡಮಾನ ಸಾಲ ಸಂಪೂರ್ಣ ಸಂದಾಯ ಮಾಡಿದರೆ ಮಾತ್ರ ಅಡವಿರಿಸಿದ ಬಂಗಾರವನ್ನು ಹಿಂಪಡೆಯಲು ಅವಕಾಶವಿದೆ ಎಂದು ಹೇಳಿ ಗ್ರಾಹಕನ ಬೇಡಿಕೆಯನ್ನು ತಿರಸ್ಕರಿಸಿತ್ತು.

ಈ ಬಗ್ಗೆ ಗ್ರಾಹಕನು ಉಡುಪಿಯ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಅಧ್ಯಕ್ಷರ ಮೇಲೆ ದೂರು ದಾಖಲಿಸಿ, ತಾನು ಅಡಮಾನವಿಸಿರಿದ ಬಂಗಾರವನ್ನು ಹಿಂದಿರುಗಿಸಬೇಕು ಮತ್ತು ತನಗೆ 3 ಲ.ರೂ. ಮಾನಸಿಕ ವೇದನೆಯೊಂದಿಗೆ 10,000 ರೂ. ನೋಟಿಸಿನ ಖರ್ಚು ನೀಡಬೇಕೆಂದು ಕೇಳಿಕೊಂಡಿದ್ದರು.

ಉಭಯ ವಾದಗಳನ್ನು ಆಲಿಸಿದ ಆಯೋಗವು ದೂರುದಾರರು ಅಡವಿರಿಸಿದ ಚಿನ್ನಾಭರಣವನ್ನು ಸಂಸ್ಥೆಯಿಂದ ಹಿಂದೆ ಪಡೆಯಲು ಅರ್ಹರಲ್ಲವೆಂದು ಆ ದೂರನ್ನು ವಜಾಗೊಳಿಸಿ ಆದೇಶ ನೀಡಿದೆ. ಗುರುಮಾಚಿದೇವ ಸಂಸ್ಥೆಯ ಪರವಾಗಿ ಉಡುಪಿಯ ವಕೀಲ ಎಸ್‌. ಗುರುರಾಜ್‌ ಐತಾಳ್‌ ವಾದ ಮಂಡಿಸಿದ್ದರು.

ಸಂಸ್ಥೆಗೆ ಅಧಿಕಾರವಿದೆ: ಅಧ್ಯಕ್ಷರು
ಭಾರತೀಯ ಕರಾರು ಅಧಿನಿಯಮ ಕಲಂ 171ರಂತೆ ಯಾವುದೇ ಹಣಕಾಸು ಸಂಸ್ಥೆಯಲ್ಲಿ ಗ್ರಾಹಕನು ಸಾಲ ಪಡೆದು ಸುಸ್ತಿದಾರನಾದರೆ ಅಂತಹ ವ್ಯಕ್ತಿಗೆ ಸೇರಿದ ಚರ ಸೊತ್ತುಗಳನ್ನು ಕಾನೂನು ರೀತಿಯಲ್ಲಿ ಮುಟ್ಟಗೋಲು ಹಾಕಲು ಸಾಲ ನೀಡಿದ ಸಂಸ್ಥೆಗೆ ಅಧಿಕಾರವಿದೆ ಎಂದು ವಕೀಲ ಹಾಗೂ ಗುರುಮಾಚಿದೇವ ವಿ.ಸ.ಸ ನಿ. ಅಧ್ಯಕ್ಷ ಎಚ್‌. ಆನಂದ ಮಡಿವಾಳ ತಿಳಿಸಿದ್ದಾರೆ.

ಟಾಪ್ ನ್ಯೂಸ್

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.