Communal riots: “ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡನೀಯ’: ಸುಬುಧೇಂದ್ರ ಸ್ವಾಮೀಜಿ

ಮಂತ್ರಾಲಯದಲ್ಲಿ ರಾಯರ ರಥೋತ್ಸವ ಸಂಭ್ರಮ, ಮೈಸೂರು ರಾಜ ಮನೆತನದ ಯದುವೀರ ಒಡೆಯರ್‌ ಶ್ರೀರಾಘವೇಂದ್ರಾನುಗ್ರಹ ಪ್ರಶಸ್ತಿ

Team Udayavani, Aug 23, 2024, 6:20 AM IST

Yaduveer-vadeyar

ರಾಯಚೂರು: ಯಾವುದೇ ಮತೀಯ ಹಾಗೂ ಸಮುದಾಯಗಳ ಮೇಲೆ ದಾಳಿ ಹಾಗೂ ಹಲ್ಲೆ ನಡೆಯಬಾರದು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದಿರುವ ದಾಳಿ ಖಂಡನೀಯ ಎಂದು ಮಂತ್ರಾಲಯದ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ವಿಷಾದ ವ್ಯಕ್ತಪಡಿಸಿದರು.

ಮಂತ್ರಾಲಯದಲ್ಲಿ ಗುರುವಾರ ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಉತ್ತರಾರಾಧನೆ ಮಹೋತ್ಸವ ನಿಮಿತ್ತ ಶ್ರೀ ಪ್ರಹ್ಲಾದರಾಜರ ಮಹಾರಥೋತ್ಸವಕ್ಕೆ ಚಾಲನೆ ನೀಡಿ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ದೇಶದಲ್ಲಿ ಶಾಂತಿ ನೆಲೆಸಲಿ. ಮತೀಯ ಗಲಭೆಗಳು ನಿಲ್ಲಲಿ. ಭಕ್ತರ ಕಷ್ಟ ನೀಗಿಸುವ ಶ್ರೀ ಗುರುರಾಯರ ವರ್ಣನೆ ಅಸಾಧ್ಯ. ಗುರುರಾಯರ ಭಕ್ತರು ದೇಶ-ವಿದೇಶಗಳ ಮೂಲೆ-ಮೂಲೆಗಳಿಂದ ಆರಾಧನೆಗೆ ಆಗಮಿಸುತ್ತಾರೆ. ದೇಶ ಸೇರಿದಂತೆ ವಿಶ್ವದಲ್ಲಿ ಶಾಂತಿ-ನೆಮ್ಮದಿ ಲಭಿಸಲಿ ಎಂದು ರಾಯರಲ್ಲಿ ಪ್ರಾರ್ಥಿಸಲಾಗುವುದು ಎಂದರು.

ರಥೋತ್ಸವ ಮೂಲಕ ಎಲ್ಲ ಭಕ್ತರಿಗೆ ದರ್ಶನ ನೀಡಲು ಪ್ರಹ್ಲಾದರಾಜರ ಅವತಾರದಲ್ಲಿ ರಾಯರು ರಥಾರೂಢರಾಗಿ ಮಂತ್ರಾಲಯದ ರಥಬೀದಿಯಲ್ಲಿ ಆಗಮಿಸುವರು. ಇದು ಎಲ್ಲರೂ ಆಚರಿಸುವ ಹಬ್ಬವಾಗಿದೆ. ರಾಯರ ಆರಾಧನಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಠದ ಎಲ್ಲ ಸಿಬಂದಿಯ ನಿರಂತರ ಪರಿಶ್ರಮದಿಂದ ಸಾಧ್ಯ. ಶ್ರೀಮಠದ ಸಿಬಂದಿಗೆ ದಿನದ ಭತ್ತೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಘೋಷಿಸಿದರು.

ಸ್ವರ್ಣ ಕವಚ ಲೋಕಾರ್ಪಣೆ
ಮಹಾರಥೋತ್ಸವಕ್ಕೆ ಹೆಲಿಕಾಪ್ಟರ್‌ ಮೂಲಕ ಶ್ರೀಗಳು ಪುಷ್ಟವೃಷ್ಟಿ ಮಾಡಿದರು. ಬೃಂದಾವನ ಸುತ್ತಲಿನ ಶಿಲಾಮಂಟಪಕ್ಕೆ ಅಳವಡಿಸುತ್ತಿರುವ ಸ್ವರ್ಣ ಕವಚವನ್ನು ಶ್ರೀಮಠದ ಪೀಠಾಧಿ ಪತಿ ಸುಬುಧೇಂದ್ರ ತೀರ್ಥರು ಹಾಗೂ ಮೈಸೂರು ರಾಜ ಮನೆತನದ ಯದುವೀರ ಒಡೆಯರ್‌ ಜಂಟಿಯಾಗಿ ಲೋಕಾರ್ಪಣೆ ಮಾಡಿದರು. ಬಳಿಕ ಪ್ರಹ್ಲಾದರಾಜರ ಗಜವಾಹನೋತ್ಸವದಲ್ಲಿ ಪಾಲ್ಗೊಂಡ ಯದುವೀರ್‌ ಚಾಮರ ಸೇವೆ ಮಾಡಿದರು.

ರಾಘವೇಂದ್ರಾನುಗ್ರಹ ಪ್ರಶಸ್ತಿ
ನಿಜವಾದ ಭಕ್ತಿ ನೋಡಬೇಕಿದ್ದರೆ ಮೈಸೂರು ದಸರಾ ನೋಡಬೇಕು ಎನ್ನುವ ಮಾತಿದೆ. ಮಂತ್ರಾಲಯದ ವೈಭವ ಕಂಡಾಗ ಆ ಮಾತನ್ನು ಸ್ವಲ್ಪ ಬದಲಿಸಿ ಮೈಸೂರು ದಸರಾ ಇಲ್ಲವೇ ರಾಯರ ಆರಾಧನೆ ನೋಡಬೇಕು ಎನ್ನಬೇಕಿದೆ ಎಂದು ಮೈಸೂರು ರಾಜ ಮನೆತನದ ಯದುವೀರ ಒಡೆಯರ್‌ ಬಣ್ಣಿಸಿದರು.

ರಾಯರ 353ನೇ ಆರಾಧನಾ ಮಹೋತ್ಸವ ಪ್ರಯುಕ್ತ ಗುರುವಾರ ನಡೆದ ಉತ್ತಾರಾರಾಧನೆಯಂದು ಶ್ರೀಮಠದಿಂದ ಶ್ರೀ ರಾಘವೇಂದ್ರಾನುಗ್ರಹ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಮಠಕ್ಕೆ ಇದು ನನ್ನ ಮೊದಲ ಭೇಟಿ. ಇಂಥ ಅವಕಾಶ ಸಿಕ್ಕಿರುವುದು ದೊಡ್ಡ ಸೌಭಾಗ್ಯ ಎಂದು ಭಾವಿಸುತ್ತಿದ್ದೇವೆ. ಎಷ್ಟೋ ದಾಳಿಗಳು ನಿರಂತರವಾಗಿ ನಡೆದಾಗ್ಯೂ ನಮ್ಮ ಭಾರತದ ಪರಂಪರೆಗೆ ಕಿಂಚಿತ್ತೂ ಧಕ್ಕೆಯಾಗಿಲ್ಲ. ಇಂಥ ಪರಂಪರೆಯನ್ನು ಇದೇ ರೀತಿ ಉಳಿಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Munirathna

MLA Munirathna: ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ

ct-ravi

Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ

18-ct-ravi

Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.