Congratulate: ಸಂಸತ್ ಭವನದಲ್ಲಿ ಪ್ರಧಾನಿ ಮೋದಿ – ಡಾ. ವೀರೇಂದ್ರ ಹೆಗ್ಗಡೆ ಭೇಟಿ
ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿ ಬೀದರ್ನಲ್ಲಿ ವಿನಿಯೋಗಿಸಿದ ಬಗೆ ಪ್ರಧಾನಿಗೆ ವಿವರಿಸಿದ ಡಾ.ಹೆಗ್ಗಡೆ
Team Udayavani, Aug 11, 2024, 6:31 AM IST
ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆ.9ರಂದು ಸಂಸತ್ ಭವನದಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಿಯಾಗಿರುವುದಕ್ಕೆ ಅಭಿನಂದಿಸಿದರು. ಬಳಿಕ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನೂ ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು.
ಅನೇಕ ವಿಷಯಗಳ ಬಗ್ಗೆ ಚರ್ಚಿಸಿದ ಡಾ. ಹೆಗ್ಗಡೆ ಯವರು, ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಬೀದರ್ನಲ್ಲಿ ವಿನಿಯೋಗಿಸಿರುವ ಬಗೆಯನ್ನು ಪ್ರಧಾನಿಗೆ ವಿವರಿಸಿದರು. ರಾಜ್ಯಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ವಹಿಸಲ್ಪಡುವ 10 ಸಾವಿರ ಸಿ.ಎಸ್.ಸಿ. ಕೇಂದ್ರಗಳ ಮೂಲಕ ಕೇಂದ್ರ ಸರಕಾರದ ಹಾಗೂ ಸಿ.ಎಸ್.ಸಿ.ಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನರ ಮನೆ ಬಾಗಿಲಿಗೆ ತಲುಪಿಸುತ್ತಿರುವ ಬಗ್ಗೆ ಪ್ರಧಾನಿಗೆ ವಿವರಿಸಲಾಯಿತು.
ಬೀದರ್ನಲ್ಲಿ ಕ್ಷೀರಕ್ರಾಂತಿ:
ಡಾ| ಹೆಗ್ಗಡೆಯವರು ಬೀದರ್ನಲ್ಲಿ ಕ್ಷೀರಕ್ರಾಂತಿಗೆ ಯೋಜಿಸಿದ್ದು, ಕೆ.ಎಂ.ಎಫ್. ಸಹಯೋಗದೊಂದಿಗೆ ಅನೇಕ ಹಾಲು ಒಕ್ಕೂಟಗಳನ್ನು ಅಭಿವೃದ್ಧಿಪಡಿಸಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಿದ್ದಾರೆ. ಹಾಲು ಸಂಗ್ರಹಕ್ಕೆ ಕಟ್ಟಡಗಳನ್ನು ನಿರ್ಮಿ ಸಿದ್ದಲ್ಲದೆ, ಅತ್ಯಾಧುನಿಕ ಯಂತ್ರಗಳನ್ನು ಒದಗಿಸಿದ್ದಾರೆ. ರೈತರಿಗೆ ಹೈನುಗಾರಿಕೆ ಬಗ್ಗೆ ತರಬೇತಿ ನೀಡಿದ್ದಾರೆ ಎಂದರು.
ಈ ಯೋಜನೆಗಿಂತ ಮೊದಲು ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಪ್ರತಿನಿತ್ಯ 18 ಸಾವಿರ ಲೀಟರ್ ಮಾತ್ರ ಇತ್ತು. ಪ್ರಸ್ತುತ 60 ಸಾವಿರ ಲೀಟರ್ಗೆ ಏರಿದೆ. ಇದನ್ನು 1 ಲಕ್ಷ ಲೀಟರ್ಗೆ ಏರಿಸುವ ಗುರಿ ಇದೆ ಎಂದು ಹೆಗ್ಗಡೆಯವರು ವಿವರಿಸಿದ್ದಕ್ಕೆ, ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು.
ಆಯುಷ್ಮಾನ್ ಸೇವೆಗೂ ಮೆಚ್ಚುಗೆ:
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಕೇಂದ್ರ ಸರಕಾರದ ಸಿ.ಎಸ್.ಸಿ. ಸೇವೆಗಳನ್ನು ಜನರಿಗೆ ನೀಡುವ ಪಾಲುದಾರಿಕೆ ಒಪ್ಪಂದ ಇದೆ. ಆಯುಷ್ಮಾನ್ ಭಾರತ್ ವಿಮೆಯನ್ನು ಉಚಿತವಾಗಿ ಸಿ.ಎಸ್.ಸಿ. ಕೇಂದ್ರಗಳ ಮೂಲಕ ವಿತರಿಸಲಾಗಿದೆ ಎಂದು ಪ್ರಧಾನಿ ಅವರಿಗೆ ವಿವರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.