Congress Government ಬಳಿ ಅಕ್ಕಿ ಖರೀದಿಗೂ ಹಣವಿಲ್ಲ: ಕೇಂದ್ರ ಸಚಿವ ಜೋಶಿ
Team Udayavani, Jul 8, 2024, 7:15 AM IST
ಹುಬ್ಬಳ್ಳಿ: ಹಾಲು ಒಕ್ಕೂಟಗಳಲ್ಲಿ ರೈತರಿಗೆ ನೀಡುತ್ತಿರುವ ಸಬ್ಸಿಡಿ ಸ್ಥಗಿತಗೊಳಿಸಿ ಜನರಿಗೆ ದ್ರೋಹ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಎಲ್ಲಾ ದರ ಹೆಚ್ಚಳ ಮಾಡಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ರಾಜ್ಯದಲ್ಲಿ ಆಗುತ್ತಿಲ್ಲ. ಅಕ್ಕಿ ಖರೀದಿಸುವುದಕ್ಕೂ ಹಣ ಇಲ್ಲದ ದರಿದ್ರ ಸರ್ಕಾರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮೀ ಯೋಜನೆ, ವೃದ್ಧಾಪ್ಯ ವೇತನ ಹಣ ಜಮಾ ಆಗಿಲ್ಲ. ಪೆಟ್ರೋಲ್, ಡೀಸೆಲ್, ಹಾಲಿನ ದರ ಹೆಚ್ಚಳ ಮಾಡಲಾಗಿದೆ ಎಂದರು.
ಪ್ರತಿ ಕೆಜಿ ಅಕ್ಕಿ ದರ 34ರಿಂದ28 ರೂ.ಗೆ ಇಳಿಕೆ: ಜೋಶಿ
ಈ ಹಿಂದೆ ಒಂದು ಕೆಜಿ ಅಕ್ಕಿಗೆ 34 ರೂ. ಇದ್ದ ದರವನ್ನು ಈಗ 28 ರೂ.ಗೆ ಇಳಿಸಿದ್ದು, ಶೀಘ್ರವೇ ಅಕ್ಕಿ ವಿತರಣೆ ಪುನಾರಂಭಿಸಲಾಗುವುದು. ಸಿಎಂ ಸಿದ್ದರಾಮಯ್ಯ ಕಳೆದ ವರ್ಷ ಅಕ್ಕಿ ಕೇಳಿದಾಗ ನಾವು ಬಫರ್ ಸ್ಟಾಕ್ಗೆ ಬಹಳ ಹತ್ತಿರ ಇದ್ದೆವು.
ಎಲ್ನಿನೋ, ಮಳೆ ಅಭಾವ-ಬರದಿಂದ ಅಕ್ಕಿ ಸಂಗ್ರಹ ಕಡಿಮೆಯಾಗುತ್ತದೆಂಬ ಆತಂಕ ಭಾರತ ಮಾತ್ರವಲ್ಲ ಜಗತ್ತಿನ ಎಲ್ಲಾ ದೇಶಗಳಲ್ಲಿತ್ತು. ಹೀಗಾಗಿ 2023ರ ಜೂ. 13ಕ್ಕೆ ಓಪನ್ ಮಾರ್ಕೆಟ್ ಸಪೋರ್ಟ್ ಸಿಸ್ಟಮ್(ಒಎಂಎಸ್ಎಸ್)ನಲ್ಲಿ ನಾವು ಅದನ್ನು ನಿಲ್ಲಿಸಿದ್ದೆವು. ಇದೀಗ ಕೇಂದ್ರದ ಬಳಿ 330 ಲಕ್ಷ ಮೆಟ್ರಿನ್ ಟನ್ ಅಕ್ಕಿ ಸಂಗ್ರಹ ಆಗಿರುವುದರಿಂದ ಈಗ ಒಎಂಎಸ್ಎಸ್ನಲ್ಲಿ ರಾಜ್ಯಕ್ಕೂ, ಖಾಸಗಿಯವರಿಗೂ ಅಕ್ಕಿ ನೀಡಲು ಅವಕಾಶ ನೀಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.