Congress: ಸರಕಾರ ಭ್ರಷ್ಟಾಚಾರದ ಶಾಪಿಂಗ್ ಮಾಲ್ ತೆರೆದಿದೆ: ಸಿ.ಟಿ.ರವಿ
ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಕಾನೂನಿಗೆ ತಲೆ ಬಾಗಲೇಬೇಕು
Team Udayavani, Sep 27, 2024, 11:32 PM IST
ಬೆಂಗಳೂರು: ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದ ಕಾಂಗ್ರೆಸ್ ಈಗ ಭ್ರಷ್ಟಾಚಾರದ ಶಾಪಿಂಗ್ ಮಾಲ್ ಅನ್ನು ತೆರೆದಿದೆ. ಭ್ರಷ್ಟಾಚಾರ ಮಾಡುವಾಗ ತೋರುವ ಧೈರ್ಯ, ತನಿಖೆ ಎದುರಿಸುವಾಗ ಇಲ್ಲ. ಸಿದ್ದರಾಮಯ್ಯ ಪೂರ್ವಯೋಜಿತವಾಗಿ ಭ್ರಷ್ಟಾಚಾರ ಎಸಗುವ ಕ್ರಿಮಿನಲ್ ಮೈಂಡೆಡ್ ಕರಪ್ಟ್ ವ್ಯಕ್ತಿ. ನಿಷ್ಪಕ್ಷಪಾತ ತನಿಖೆಯ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ, ವಿಧಾನಸಭೆ ವಿಸರ್ಜಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ರಾಜ್ಯಪಾಲರಿಗೇ ಕಾಂಗ್ರೆಸ್ಸಿಗರು ಟೀಕಿಸಿದರು, ಪ್ರತಿಭಟಿಸಿದರು, ಬೆದರಿಕೆ ಹಾಕಿದರು. ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಕಾನೂನಿಗೆ ತಲೆ ಬಾಗಲೇಬೇಕು ಎಂದರು.
ಜಮೀರ್ರನ್ನು ಸಂಪುಟದಿಂದ ವಜಾಗೊಳಿಸಿ ನ್ಯಾಯಾಲಯವೇ ರಾಜ್ಯಪಾಲರ ನಿರ್ಣಯವನ್ನು ಎತ್ತಿ ಹಿಡಿದಿದೆ. ಆದರೂ ಸಚಿವ ಜಮೀರ್ ಖಾನ್ ಪೊಲಿಟಿಕಲ್ ಜಡ್ಜ್ಮೆಂಟ್ ಎಂದಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಗೌರವವಿದ್ದರೆ ಮೊದಲು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.