Congress Government Scheme: ಬಡವರ ನಂದಾದೀಪ ಗೃಹಲಕ್ಷ್ಮಿಗೆ ವರ್ಷದ ಹರ್ಷ

ಒಂದು ವರ್ಷದಲ್ಲಿ ಮನೆ ಯಜಮಾನಿಯರಿಗೆ 25 ಸಾವಿರ ಕೋಟಿ ರೂ. ಜಮೆ!, ಪಂಚ ಗ್ಯಾರಂಟಿಗಳು ದೇಶಕ್ಕೆ ದಿಕ್ಸೂಚಿ

Team Udayavani, Aug 31, 2024, 6:20 AM IST

GRUHA

ಮಹಿಳೆಯರ ಸುರಕ್ಷೆ, ಸಶಕ್ತೀಕರಣ, ಸಮಾನತೆಗೆ ಕಾಂಗ್ರೆಸ್‌ ಪಕ್ಷ ಈ ಮುಂಚಿನಿಂದಲೂ ಪ್ರಾತಿನಿಧ್ಯ ನೀಡುತ್ತಾ ಬಂದಿದೆ. ಮಹಿಳಾ ಕೇಂದ್ರಿತ ಯೋಜನೆಗಳು ಕೇವಲ ಚುನಾವಣೆ ಘೋಷಣೆಗಳಲ್ಲ. ಕಾಂಗ್ರೆಸ್‌ ಪಕ್ಷವು ಈ ದೇಶದಲ್ಲಿ ಮಹಿಳಾ ಸಶಕ್ತೀಕರಣದ ಅತೀದೊಡ್ಡ ಪ್ರತಿಪಾದಕವಾಗಿದೆ. ಮಹಿಳಾ ಸಶಕ್ತೀಕರಣಕ್ಕಾಗಿ ಕಾಂಗ್ರೆಸ್‌ ಹಲವಾರು ಯೋಜನೆಗಳನ್ನು ಘೋಷಿಸಿದ್ದು, 2023ರ ವಿಧಾನಸಭಾ ಚುನಾವಣೆಯಲ್ಲಿ ಕೂಡ ಮಹಿಳೆಯರಿಗೆ ಶಕ್ತಿ ತುಂಬಲು 5 ಗ್ಯಾರಂಟಿಗಳನ್ನು ಪ್ರಕಟಿಸಿತ್ತು.

ಚುನಾವಣೆಗಳಲ್ಲಿ ಇತರೆ ರಾಜಕೀಯ ಪಕ್ಷಗಳು ವಾಗ್ಧಾನ ನೀಡುತ್ತವೆ. ಆದರೆ ಅ ಧಿಕಾರಕ್ಕೆ ಬರುತ್ತಿದ್ದಂತೆ ಅವುಗಳನ್ನು ಮರೆತುಬಿಡುತ್ತವೆ. ಆದರೆ ಕಾಂಗ್ರೆಸ್‌ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು ಮಾತ್ರವಲ್ಲದೆ ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸಿವೆ ಎಂಬುದಕ್ಕೆ ಪಂಚ ಗ್ಯಾರಂಟಿಗಳೇ ಸಾಕ್ಷಿ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಈ ಘೋಷಣೆಗಳು ಕೇವಲ ಘೋಷಣೆಗಳಾಗಲಿವೆ ಎಂದು ವಿಪಕ್ಷಗಳು ಗೇಲಿ ಮಾಡಿದ್ದವು. ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹಬ್ಬಿಸಿದವು. ಆದರೆ ರಾಜ್ಯದ ಜನತೆಗೆ ಗೊತ್ತಿತ್ತು, ಕಾಂಗ್ರೆಸ್‌ ಎಂದಿಗೂ ಕೊಟ್ಟ ಮಾತನ್ನು ತಪ್ಪುವುದಿಲ್ಲ. ನುಡಿದಂತೆ ನಡೆದ ಪಕ್ಷವೆಂದರೆ ಅದು ಕಾಂಗ್ರೆಸ್‌ ಮಾತ್ರ ಎಂದು ನಮ್ಮನ್ನು ನಂಬಿ ನಮ್ಮ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿ ಜನಾಶೀರ್ವಾದ ಮಾಡಿದರು.

ಜನಾದೇಶ ಸಿಗುತ್ತಿದ್ದಂತೆ ಅಧಿ ಕಾರಕ್ಕೆ ಬಂದ ತತ್‌ಕ್ಷಣವೇ ನಮ್ಮ ಸರಕಾರ ಜನರಿಗೆ ನೀಡಿದ್ದ ವಾಗ್ಧಾನದಂತೆ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿತು. 5 ಗ್ಯಾರಂಟಿಗಳಲ್ಲಿ ಗೃಹಲಕ್ಷಿ$¾ ಕೂಡ ಒಂದಾಗಿದ್ದು, ಈ ಯೋಜನೆ ಜಾರಿಗೆ ಬಂದು (ಆ.30ಕ್ಕೆ) ಒಂದು ವರ್ಷ ಸಂದಿದೆ. ಈ 1 ವರ್ಷದಲ್ಲಿ 25 ಸಾವಿರ ಕೋಟಿ ರೂ. ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. ಇದರಿಂದ ಮನೆಯ ಯಜಮಾನಿಯರು ಆರ್ಥಿಕವಾಗಿ ಸಶಕ್ತರಾಗಿದ್ದು, ಮಾತ್ರವಲ್ಲದೇ ಕುಟಂಬ ನಿರ್ವಹಣೆಗೂ ಸಹಕಾರಿಯಾಗಿದೆ. ಕಳೆದ ವರ್ಷ ರಾಜ್ಯವನ್ನು ಕಾಡಿದ ಭೀಕರ ಬರಗಾಲದಲ್ಲೂ ಗ್ರಾಮೀಣ ಭಾಗದ ಮಹಿಳೆಯರು ಯಾವುದೇ ತೊಂದರೆಯಿಲ್ಲದೆ ಸುಸೂತ್ರವಾಗಿ ಸಂಸಾರ ನಡೆಸಿ¨ªಾರೆ ಎಂದರೆ ಅದಕ್ಕೆ ಗೃಹಲಕ್ಷ್ಮಿಯೇ ಸಾಕ್ಷಿ.

ಕುಟುಂಬಕ್ಕೆ ಆರ್ಥಿಕ ಬಲ: ಮಹಿಳೆಯರು ಆರ್ಥಿಕವಾಗಿ ಸಶಕ್ತರಾದರೆ ಕುಟುಂಬವೇ ಆರ್ಥಿಕವಾಗಿ ಗಟ್ಟಿಯಾಗುತ್ತದೆ. ಇದರಿಂದ ದೇಶದ ಆರ್ಥಿಕ ಪರಿಸ್ಥಿತಿ ಕೂಡ ಸುಧಾರಿಸುತ್ತದೆ ಎಂಬ ದೃಷ್ಟಿಯಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಯಿತು. 2023ರ ಜು.19ರಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಾರಂಭಿಸಲಾಯಿತು. ಇಲ್ಲಿಯವರೆಗೂ ರಾಜ್ಯದಲ್ಲಿ 1.23 ಕೋಟಿ ಕುಟುಂಬದ ಯಜಮಾನಿಯರಿಗೆ ಪ್ರತೀ ತಿಂಗಳು 2000 ರೂ.ನಂತೆ ತಿಂಗಳಿಗೆ 2,280 ಕೋಟಿ ರೂ. ಹಣವನ್ನು ವರ್ಗಾವಣೆ ಮಾಡುವ ಮೂಲಕ ಕಳೆದ 1 ವರ್ಷದಲ್ಲಿ 25, 248 ಕೋಟಿ ರೂ. ಹಣವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ವರ್ಗಾಯಿಸಲಾಗಿದೆ. ಮನೆಯ ಯಜಮಾನಿಯರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ಮೂಲಕ ಭ್ರಷ್ಟಾಚಾರ ರಹಿತ ಈ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ.

 ಗೃಹಲಕ್ಷ್ಮಿಯೋಜನೆ ಸದ್ಬಳಕೆ:
ಗೃಹಲಕ್ಷ್ಮಿಯೋಜನೆಯ ಹಣ ಅನೇಕರಿಗೆ ನಾನಾ ರೀತಿಯಲ್ಲಿ ನೆರವಿಗೆ ಬಂದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಫ್ರೀಡ್ಜ್ ಖರೀದಿಸಿದ್ದು ಒಂದು ಕಡೆಯಾದರೆ, ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ವಿಜಯಪುರದ ಹುಡುಗ ತನ್ನ ವ್ಯಾಸಂಗಕ್ಕೆ ಗೃಹಲಕ್ಷಿ$¾ ಹಣ ಸಹಕಾರಿಯಾಯಿತು ಎಂದು ಹೇಳಿದ್ದನ್ನು ಕೇಳಿ ಸಾರ್ಥಕತೆಯ ಭಾವನೆ ಮನದಲ್ಲಿ ಮೂಡಿತು.

ಬಾಗಲಕೋಟೆಯಲ್ಲಿ ಮತ್ತೂಬ್ಬ ಮಹಿಳೆ ತನಗೆ ಬಂದ ಗೃಹಲಕ್ಷ್ಮಿ ಹಣದಲ್ಲಿ ತನ್ನ ಸೊಸೆಗೆ ಫ್ಯಾನ್ಸಿ ಸ್ಟೋರ್‌ ಹಾಕಿಕೊಡುವ ಮುಖಾಂತರ ಸ್ವಯಂ ಉದ್ಯೋಗ ಕಲ್ಪಿಸಿಕೊಟ್ಟು, ಅವರ ಬಾಳಿಗೆ ನೆರವಾಗಿದ್ದರೆ, ಬೆಳಗಾವಿಯಲ್ಲಿ ಅಜ್ಜಿಯೊಬ್ಬರು ಗೃಹಲಕ್ಷಿ$¾ ಹಣದಲ್ಲಿ ಊರಿನವರಿಗೆಲ್ಲ ಹೊಳಿಗೆ ಊಟ ಹಾಕಿಸಿ ಸಂತೃಪ್ತಿಪಡಿಸಿದ್ದನ್ನು ನೋಡಿದರೆ ನಮ್ಮ ಯೋಜನೆಗಳು ಬಿಟ್ಟಿ ಭಾಗ್ಯಗಳಲ್ಲ, ಅವುಗಳು ಬಡವರ ಪಾಲಿನ ನಂದಾದೀಪ. ಗೃಹಿಣಿಯರ ಪಾಲಿನ ಆಶಾಕಿರಣಗಳಾಗಿವೆ.

ಇಡೀ ದೇಶಕ್ಕೆ ದಿಕ್ಸೂಚಿ:
ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ದಿಕ್ಸೂಚಿಯಾಗಿವೆ. ಗೃಹಲಕ್ಷ್ಮಿ ಯೋಜನೆ ವಿಶ್ವದಲ್ಲೇ ಅತ್ಯಂತ ದೊಡ್ಡ ಯೋಜನೆ. ಮನೆಯ ಯಜಮಾನಿಯರಿಗೆ ನಮ್ಮ ಸರಕಾರ ಪ್ರತಿ ತಿಂಗಳು ನೀಡುತ್ತಿರುವ 2 ಸಾವಿರ ರೂ. ದಿನಸಿ, ತರಕಾರಿ, ಹಾಲು ಖರೀದಿ, ಔಷಧೋಪಚಾರಗಳಿಗೆ, ಮಕ್ಕಳ ಶಾಲಾ ಶುಲ್ಕ ಪಾವತಿ ಸೇರಿ ವಿವಿಧ ರೀತಿಯಲ್ಲಿ ಸದುಪಯೋಗವಾಗುತ್ತಿದೆ. ಬಡವರ ಬಾಳಿನಲ್ಲಿ ಹೊಸಬೆಳಕನ್ನು ಮೂಡಿಸಿದೆ. ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಹಾಗೂ ಆರ್ಥಿಕ ಚಟುವಟಿಕೆ ಗರಿಗೆದರಲು ಈ ಯೋಜನೆ ಉಪಯುಕ್ತವಾಗಿದೆ.

ನಮ್ಮ ಪಕ್ಷ ಮತ್ತು ಸರಕಾರ ಮತಗಳಿಕೆಗೋಸ್ಕರ ಘೋಷಣೆ ಮಾಡಿದಂತಹ ಯೋಜನೆಗಳಲ್ಲ. ಮಹಿಳೆಯರ ಸಶಕ್ತೀಕರಣಕ್ಕಾಗಿ ನಮ್ಮ ನಾಯಕರಾದ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ಮುಖಂಡರಾದ ಕೆ.ಸಿ. ವೇಣುಗೋಪಾಲ…, ಕರ್ನಾಟಕ ರಾಜ್ಯದ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಒಟ್ಟುಗೂಡಿ ಇಂಥ ಒಂದು ಐತಿಹಾಸಿಕ ಘೋಷಣೆ ಮಾಡಿ, ಜಾರಿಗೊಳಿಸಿದ್ದೇವೆ.

ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಹಲವರು ಆರೋಪಿಸಿದರು. ಆದರೆ ಈ ಬಾರಿಯ ಬಜೆಟ್‌ನಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗೆಂದೇ 58 ಸಾವಿರ ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆಂದೇ 28,608 ಕೋಟಿ ರೂ. ಹಣ ತೆಗೆದಿಡಲಾಗಿದೆ. ಜೂನ್‌ ತಿಂಗಳಿನಲ್ಲಿ 1.21 ಕೋಟಿ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲಾಗಿದೆ. ಜುಲೈ ಮತ್ತು ಆಗಸ್ಟ್‌ ತಿಂಗಳಿನ ಹಣವನ್ನು ಕೂಡ ಶೀಘ್ರವಾಗಿ ಬಿಡುಗಡೆಗೊಳಿಸಲಾಗುತ್ತದೆ.

ಬೆಲೆ ಏರಿಕೆ ಬಿಸಿ ತಾಗದಂತೆ ನೋಡಿಕೊಂಡ ಗೃಹಲಕ್ಷ್ಮಿ:
ಜನರಿಗೆ ಬೆಲೆ ಏರಿಕೆ ಬಿಸಿ ತಟ್ಟದಂತೆ ಗೃಹಲಕ್ಷಿ$¾ ಕಾಪಾಡಿದ್ದಾಳೆ. ಲಕ್ಷಾಂತರ ತಾಯಂದಿರು, ಅಕ್ಕತಂಗಿಯರು, ಅಜ್ಜಿಯಂದಿರಿಗೆ ಕಾಂಗ್ರೆಸ್‌ ಸರಕಾರದ ಗೃಹಲಕ್ಷಿ$¾ ಹಣ ಅಕ್ಷರಶಃ ವರದಾನವಾಗಿದೆ. ಬರಗಾಲದಲ್ಲಿ ಬಡವರ ಕೈ ಹಿಡಿದಿದೆ. ಲಿಂಗತ್ವ ಅಲ್ಪಸಂಖ್ಯಾಕರು ಕೂಡ ಗೃಹಲಕ್ಷಿ$¾ ಯೋಜನೆಯ ಫಲಾನುಭವಿಗಳಾಗಬಹುದು. ಜನಹಿತವೇ ನಮ್ಮ ಧ್ಯೇಯ.

ಎಲ್ಲರಿಗೂ ಪ್ರಯೋಜನ:
ಆಡಳಿತ ನಡೆಸುವವರಿಗೆ ಅಂತಃಕರಣವಿರಬೇಕು. ತಾಯಿ ಹೃದಯವಿರಬೇಕು. ಬಡವರಿಗೆ ಮಿಡಿಯುವಂತಿರಬೇಕು. ಬಾಯಿ ಮಾತಿನಲ್ಲಿ ಬಡವರ ಬದುಕನ್ನು ಹಸನಾಗಿಸಲು ಸಾಧ್ಯವಿಲ್ಲ, ಅವರಿಗೆ ಆರ್ಥಿಕವಾಗಿ ಶಕ್ತಿ ತುಂಬಿದರಷ್ಟೇ ಅವರನ್ನು ಬಡತನದಿಂದ ಮೇಲಕ್ಕೆತ್ತಲು ಸಾಧ್ಯ ಎಂಬುದನ್ನು ನಮ್ಮ ಕಾಂಗ್ರೆಸ್‌ ಪಕ್ಷದ ಪಂಚಗ್ಯಾರಂಟಿಗಳು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದೆ.

ಬಿಟ್ಟಿ ಭಾಗ್ಯಗಳಿಂದ ಆರ್ಥಿಕ ದಿವಾಳಿಯಾಗುತ್ತದೆ ಎಂದು ಆರೋಪಿಸುತ್ತಿದ್ದವರೂ ಒಂದಿಲ್ಲೊಂದು ರೀತಿಯಲ್ಲಿ ಪಂಚಗ್ಯಾರಂಟಿಗಳ ಪ್ರಯೋಜನ ಪಡೆಯುತ್ತಿದ್ದಾರೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯದೊಂದಿಗೆ ಕಾಂಗ್ರೆಸ್‌ ಪಕ್ಷ ಆಡಳಿತ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು.

-ಡಿ.ಕೆ.ಶಿವಕುಮಾರ್‌, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು 

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಸಾಂಪ್ರದಾಯಿಕ ವೈವಿಧ್ಯದ ಓಣಂ ವೈಭವ-ವಿಶೇಷ ಹತ್ತು ದಿನಗಳು

Desi Swara: ಸಾಂಪ್ರದಾಯಿಕ ವೈವಿಧ್ಯದ ಓಣಂ ವೈಭವ-ವಿಶೇಷ ಹತ್ತು ದಿನಗಳು

ಇ-ತ್ಯಾಜ್ಯ ತಗ್ಗಿಸಲು ಸರಕಾರದ ಐಡಿಯಾ! ಯಶಸ್ಸು ತಂದೀತೇ ಕರ್ನಾಟಕ ಸರಕಾರದ ಹೊಸ ಹೆಜ್ಜೆ?

Electronic Waste ತಗ್ಗಿಸಲು ಸರಕಾರದ ಐಡಿಯಾ!ಯಶಸ್ಸು ತಂದೀತೇ ಕರ್ನಾಟಕ ಸರಕಾರದ ಹೊಸ ಹೆಜ್ಜೆ?

ಅರಾಜಕತೆಯೇ ಆದರ್ಶ ಎನ್ನುವ ಅಪಾಯಕಾರಿ ನಿಲುವು !

ಅರಾಜಕತೆಯೇ ಆದರ್ಶ ಎನ್ನುವ ಅಪಾಯಕಾರಿ ನಿಲುವು !

ಬಲೂಚ್‌ ಕಿಚ್ಚಿಗೆ ಕಂಗೆಟ್ಟ ಪಾಕ್‌! ಖನಿಜ ಸಂಪದ್ಭರಿತ ಬಲೂಚಿಸ್ಥಾನ ಬಗ್ಗೆ ಪಾಕ್‌ ನಿರ್ಲಕ್ಷ್ಯ

ಬಲೂಚ್‌ ಕಿಚ್ಚಿಗೆ ಕಂಗೆಟ್ಟ ಪಾಕ್‌! ಖನಿಜ ಸಂಪದ್ಭರಿತ ಬಲೂಚಿಸ್ಥಾನ ಬಗ್ಗೆ ಪಾಕ್‌ ನಿರ್ಲಕ್ಷ್ಯ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.