Congress Government; ಕಾಂಗ್ರೆಸ್ ಹೈಕಮಾಂಡ್ಗೂ ವಾಲ್ಮೀಕಿ ನಿಗಮದ ಹಣ: ವಿಜಯೇಂದ್ರ
ಭ್ರಷ್ಟಾಚಾರ ಮಾಡುತ್ತಾ ಹೋದರೆ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಪತನ
Team Udayavani, Jul 21, 2024, 6:25 AM IST
ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಕಾಂಗ್ರೆಸ್ ಹೈಕಮಾಂಡ್ಗೂ ತಲುಪಿದೆ. ನೆರೆಯ ತೆಲಂಗಾಣ ಹಾಗೂ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲೂ ಬಳಕೆಯಾಗಿದ್ದು, ಅದೇ ಹಣದಲ್ಲಿ ಹೆಂಡ ಖರೀದಿಸಿ ಹಂಚಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಹಗರಣದ ಹಣದಲ್ಲಿ ರಾಜ್ಯದ ಕಾಂಗ್ರೆಸ್ ಸಂಸದರಿಂದ ಹೆಂಡ ಖರೀದಿಯಾಗಿದೆ ಎಂದು ಇಡಿ ನಿರ್ದೇಶಕರೊಬ್ಬರಿಂದ ತಿಳಿದು ಬಂದಿದೆ. ಸರಕಾರ ನಿಷ್ಪಕ್ಷ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಾಗೇಂದ್ರ ಅನುಭವಿ ರಾಜಕಾರಣಿ, ಮುಖ್ಯಮಂತ್ರಿಗೆ ಆಪ್ತ. ಆರೋಪಿ ಸತ್ಯನಾರಾಯಣ ವರ್ಮ ಹಗರಣ ಮಾಡುವಲ್ಲಿ ನಿಪುಣ ಆಗಿದ್ದರಿಂದಲೇ ಈ ಭ್ರಷ್ಟಾಚಾರ ಮಾಡಲು ಆಯ್ಕೆ ಮಾಡಿಕೊಳ್ಳಲಾಗಿದೆ. ಇದೇ ರೀತಿ ಭ್ರಷ್ಟಾಚಾರ ಮಾಡುತ್ತಾ ಹೋದರೆ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಸರಕಾರ ಪತನವಾಗಲಿದೆ ಎಂದರು.
ನಿಗಮ ಹಗರಣದಲ್ಲಿ ಸಿಎಂ ಏಕಾಂಗಿ: ಸಂಸದ ಕಾರಜೋಳ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬಂಟಿಯಾಗಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರ ಪಕ್ಕದಲ್ಲಿ ಕುಳಿತುಕೊಳ್ಳಲು, ಸದನದಲ್ಲಿ ಸಮರ್ಥಿಸಿಕೊಳ್ಳಲು ಯಾವುದೇ ಸಚಿವ-ಶಾಸಕನೂ ಮುಂದೆ ಬರುತ್ತಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಅವಧಿಯ 21 ಹಗರಣಗಳಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಮೂರು ತಿಂಗಳಾದರೂ ತನಿಖೆ ಮಾಡದೇ ಕಡುಬು ತಿನ್ನುತ್ತಿದ್ದರಾ? ಈಗ ಹತಾಶರಾಗಿ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದರು.
ವಾಲ್ಮೀಕಿ ಹಗರಣ ನಾನು ಮಾಡಿಲ್ಲ, ಅಧಿಕಾರಿಗಳು ಮಾಡಿದ್ದಾರೆ ಎಂದು ಹೇಳುವ ಸಿದ್ದರಾಮಯ್ಯನವರೇ ಹಾಗಾದರೆ ಮುಖ್ಯಮಂತ್ರಿಯಾ ನಿಮ್ಮ ಪಾತ್ರವೇನು? ನೀವು ಅಸಹಾಯಕರಾ? ಅಧಿಕಾರಿಗಳಿಗೆ ಹಗರಣ ಮಾಡಲು ಏಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದರು.
ಸರಕಾರ ಭ್ರಷ್ಟಾಚಾರದಲ್ಲಿ ತೇಲುತ್ತಿದೆ: ರವಿಕುಮಾರ್
ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗೇಳುತ್ತಿದೆ ಎಂದು ಬಿಜೆಪಿ ಮುಖಂಡ, ವಿಧಾನಪರಿಷತ್ ಸದಸ್ಯ ರವಿ ಕುಮಾರ್ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮುಡಾದಲ್ಲಿ ಅಕ್ರಮವಾಗಿ ಸೈಟುಗಳನ್ನು ಪತ್ನಿಯ ಹೆಸರಿನಲ್ಲಿ ಪಡೆದಿರುವುದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ 187 ಕೋಟಿ ರೂ. ತೆಲಂಗಾಣಕ್ಕೆ ಕಳುಹಿಸಿ ಲೋಕಸಭಾ ಚುನಾವಣೆ ಮಾಡಿರುವ ಬಗ್ಗೆ ಬಿಜೆಪಿ ನಿರಂತರ ಹೋರಾಟ ಮಾಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.