Congress Guranttee: ಗೃಹಲಕ್ಷ್ಮೀ’ ಹಣದಿಂದ ಊರಿಗೇ ಹೋಳಿಗೆ ಊಟ
ವೃದ್ಧೆಗೆ ರೇಷ್ಮೆ ಸೀರೆ ಕಳುಹಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹೆಬ್ಬಾಳ್ಕರ್
Team Udayavani, Aug 26, 2024, 2:00 AM IST
ಬೆಳಗಾವಿ/ಕುಡಚಿ: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಅಜ್ಜಿಯೊಬ್ಬರು ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಒಳಿತಾಗಲಿ ಎಂದು ಹರಸಿದ್ದಾರೆ.
ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆ, ಗ್ರಾಮದ ಶ್ರೀ ಮಹಾಲಕ್ಷಿ$¾à ದೇವಸ್ಥಾನ ದಲ್ಲಿ ಮಹಿಳೆಯರನ್ನು ಸೇರಿಸಿ ಅಡುಗೆ ಸಿದ್ಧಪಡಿಸಿ 2,000 ಜನ ಸಂಖ್ಯೆಯ ಇಡೀ ಹಳ್ಳಿ ಜನರಿಗೆ ಹೂರಣದ ಹೋಳಿಗೆ ಜತೆಗೆ ಅನ್ನ, ಸಾರು, ಬದನೆಕಾಯಿ ಪಲ್ಯ ಊಟ ಹಾಕಿಸಿದ್ದಾರೆ. ಜತೆಗೆ ಐವರು ಮುತ್ತೈದೆಯರಿಗೆ ಉಡಿ ತುಂಬಿ ಸಾರ್ಥಕತೆ ಮೆರೆದಿದ್ದಾರೆ.
10 ತಿಂಗಳ ಹಣ ಕೂಡಿಟ್ಟಿದ್ದರು
ಅಕ್ಕಾ ತಾಯಿಗೆ ಈವರೆಗೆ 10 ತಿಂಗಳ ಗೃಹಲಕ್ಷ್ಮೀ ಹಣ ಬಂದಿದ್ದು, ಇದರಲ್ಲಿ ಒಟ್ಟು 15 ಸಾವಿರ ರೂ. ಖರ್ಚು ಮಾಡಿದ್ದಾರೆ. ಅಜ್ಜಿಯ ಈ ಉತ್ಸಾಹ ಕಂಡು ಗ್ರಾಮದ ಇನ್ನಿತರ ಮಹಿಳೆಯರೂ ಕೈಜೋಡಿಸಿದ್ದಾರೆ. ತಮ್ಮ ಮನೆಯಲ್ಲಿದ್ದ ಕಡ್ಲೆ ಬೇಳೆ, ಬೆಲ್ಲ ತಂದು ಸಹಾಯ ಮಾಡಿದ್ದಾರೆ. ಅಜ್ಜಿಯ ನಿಸ್ವಾರ್ಥ ಭಾವ ಕಂಡು ಇಡೀ ಗ್ರಾಮವೇ ಹಾಡಿ ಹೊಗಳುತ್ತಿದೆ.
ರೇಷ್ಮೆ ಸೀರೆ ಕಳುಹಿಸಿದ ಹೆಬ್ಬಾಳ್ಕರ್
ವಿಷಯ ತಿಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಬೆಂಬಲಿಗರಿಂದ ಈ ವೃದ್ಧೆಗೆ ರೇಷ್ಮೆ ಸೀರೆ ಕೊಟ್ಟು ಕಳುಹಿಸಿದ್ದಾರೆ. ಅಜ್ಜಿಗೆ ಪೇಟಾ ತೊಡಿಸಿ, ಹಾರ ಹಾಕಿ ಸಮ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
India: ಭಾರತದ ಈ ಏಳು ರೈಲ್ವೆ ನಿಲ್ದಾಣಗಳ ಹೆಸರೇ ತುಂಬಾ ತಮಾಷೆಯಾಗಿದೆ… ಎಲ್ಲಿವೆ ಅವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.