ರಾಜ್ಯದ ಜನರ ಮೇಲೆ ಸಾಲದ ಹೊರೆ ಹೆಚ್ಚಿಸಿದ ಕಾಂಗ್ರೆಸ್: ಬಿಜೆಪಿ
Team Udayavani, Jun 2, 2024, 12:04 AM IST
ಉಡುಪಿ: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿ ಆರ್ಥಿಕವಾಗಿ ದಿವಾಳಿ ಮಾಡಿರುವುದು ಮತ್ತು ಭ್ರಷ್ಟಾಚಾರವೇ ಕಾಂಗ್ರೆಸ್ ಸರಕಾರದ ಒಂದು ವರ್ಷದ ಸಾಧನೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ. 2022-23ರಲ್ಲಿ 5.05 ಲಕ್ಷ ಕೋಟಿ ರೂ. ಇದ್ದ ರಾಜ್ಯದ ಸಾಲದ ಪ್ರಮಾಣ 2024-25ರಲ್ಲಿ 6.57 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಶಾಸಕರಿಗೆ ಪ್ರದೇ ಶಾಭಿವೃದ್ಧಿ ಅನುದಾನ ಸರಿಯಾಗಿ ಬಾರದ ಕಾರಣ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದರು.
ವಾಲ್ಮೀಕಿ ನಿಗಮದ ಅಧಿಕಾರಿಯ ಆತ್ಮಹತ್ಯೆಯ ಹಿಂದೆ ಸಚಿವರ ಕೈವಾಡವಿದೆ. ಮುಖ್ಯಮಂತ್ರಿ ಸಿದ್ದರಾ ಮಯ್ಯ ತತ್ಕ್ಷಣವೇ ಸಚಿವರ ರಾಜೀನಾಮೆ ಪಡೆಯಬೇಕು. ಹಣ ವರ್ಗಾವಣೆಯೇ ಈ ಸರಕಾರದ ಸಾಧನೆಯಾಗಿದೆ ಎಂದರು.
ರಾಜ್ಯ ಸರಕಾರ ಬಿತ್ತನೆ ಬೀಜದ ದರವನ್ನು ಹೆಚ್ಚಳ ಮಾಡಿ ರೈತರಿಗೆ ಬರೆ ಎಳೆದಿದೆ. ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ. ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿಲ್ಲ. ಒಂದು ವರ್ಷದ ಸಂಭ್ರಮಾಚರಣೆ ಮಾಡುವ ನೈತಿಕತೆ ಸರಕಾರಕ್ಕೆ ಇಲ್ಲ ಎಂದರಲ್ಲದೇ, ನೀತಿ ಸಂಹಿತೆ ಮುಗಿದ ಅನಂತರ ಪ್ರತಿಭಟನೆ ನಡೆಸಲಿದ್ದೇವೆ.
ಜಿಲ್ಲಾ ವಕ್ತಾರರಾದ ವಿಜಯ ಕುಮಾರ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.
ಎನ್ಡಿಎ ಒಕ್ಕೂಟಕ್ಕೆ ಗೆಲುವು: ಗುರ್ಮೆ
ಕಾಪು: ವಿಧಾನಪರಿಷತ್ ಚುನಾವಣೆಯಲ್ಲಿ ಎನ್ಡಿಎ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಪಕ್ಷದ ಕಾಪು ಮಂಡಲ ಕಚೇರಿ ಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರ ಉಪಸ್ಥಿತಿ ಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಾತ್ಯತೀತ ಜನತಾ ದಳ (ಜೆಡಿಎಸ್) ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಉಡುಪಿ – ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಸಹಿತ ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.