ಹಿರಿಯ ಕಾಂಗ್ರೆಸ್ ಮುಖಂಡ ಸತೀಶನ್ ಇನ್ನಿಲ್ಲ; ಕಮ್ಯೂನಿಷ್ಟ್ ಪಕ್ಷ ಧಿಕ್ಕರಿಸಿದ್ದ ಪಾಚೇನಿ

ಕಣ್ಣೂರು ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು.

Team Udayavani, Oct 28, 2022, 12:50 PM IST

ಹಿರಿಯ ಕಾಂಗ್ರೆಸ್ ಮುಖಂಡ ಸತೀಶನ್ ಇನ್ನಿಲ್ಲ; ಕಮ್ಯೂನಿಷ್ಟ್ ಪಕ್ಷ ಧಿಕ್ಕರಿಸಿದ್ದ ಪಾಚೇನಿ

ಕಣ್ಣೂರು: ಕಾಂಗ್ರೆಸ್ ಹಿರಿಯ ಮುಖಂಡ ಸತೀಶನ್ ಪಾಚೇನಿ (54) ಕಣ್ಣೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಂದು ವರದಿ ತಿಳಿಸಿದೆ. ಮೆದುಳಿನಲ್ಲಿ ರಕ್ತಸ್ರಾವವಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ:ಓಟಿಟಿಗೆ ಬಂತು ಬಾಕ್ಸಾಫೀಸ್ ನಲ್ಲಿ 500 ಕೋಟಿ ಗಳಿಸಿದ ‘ಪೊನ್ನಿಯನ್ ಸೆಲ್ವನ್-1’ ಸಿನಿಮಾ

ಪಾಚೇನಿ ಅವರು ತಾಲಿಪರಂಬ್ ನ ಕಮ್ಯೂನಿಷ್ಟ್ ಕುಟುಂಬದಲ್ಲಿ ಜನಿಸಿದ್ದರು. ಸತೀಶನ್ ಪಾಚೇನಿ ಉರುವಾಡೆನ್ ಅವರ ಮೊಮ್ಮಗ. ಇವರು ಹಲವಾರು ರೈತ ಚಳವಳಿಯಲ್ಲಿ ಭಾಗವಹಿಸಿ, ಜೈಲುವಾಸ ಅನುಭವಿಸಿದ್ದರು.

ಮಣಿಚೇರಿ ಸತೀಶನ್ ಅಲಿಯಾಸ್ ಸತೀಶನ್ ಪಾಚೇನಿ ಅವರು ಕಮ್ಯೂನಿಷ್ಟ ಕಾರ್ಯಕರ್ತ, ದಿ.ಪಾಲಕ್ಕೀಲ್ ದಾಮೋದರನ್ ಮತ್ತು ಮಣಿಚೇರಿ ನಾರಾಯಣಿ ದಂಪತಿಯ ಹಿರಿಯ ಪುತ್ರರಾಗಿದ್ದಾರೆ.

ಪಾಚೇನಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ಸತೀಶನ್ ಅವರು ಕಣ್ಣೂರು ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ಅಲ್ಲದೇ ಪಯ್ಯನ್ನೂರು ಕಾಲೇಜಿನಲ್ಲಿ ಪಾಲಿಟಿಕಲ್ ಸೈನ್ಸ್ ನಲ್ಲಿ ಪದವಿ ಪಡೆದಿರುವುದಾಗಿ ವರದಿ ತಿಳಿಸಿದೆ.

ಕಾಲೇಜು ದಿನಗಳಲ್ಲಿ ಕಾಂಗ್ರೆಸ್ ಬಗ್ಗೆ ಒಲವು ಹೊಂದಿದ್ದರು. 1977ರಲ್ಲಿ ಗುವಾಹಟಿಯಲ್ಲಿ ನಡೆದಿದ್ದ ಎಐಸಿಸಿ ಸಭೆಯಲ್ಲಿ ಎ.ಕೆ ಆ್ಯಂಟನಿಯವರು ತುರ್ತುಪರಿಸ್ಥಿತಿ ದುರುಪಯೋಗದ ಕುರಿತು ಮಾತನಾಡಿದ್ದ ಭಾಷಣದ ವರದಿಯನ್ನು ಪತ್ರಿಕೆಯಲ್ಲಿ ಸತೀಶನ್ ಓದಿ ಪ್ರಭಾವಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಸತೀಶನ್ ಕಾಲೇಜು ದಿನಗಳಲ್ಲಿ ಕೇರಳ ವಿದ್ಯಾರ್ಥಿ ಸಂಘಟನೆಗೆ ಸೇರ್ಪಡೆಗೊಂಡಿದ್ದರು.

ಕಟ್ಟಾ ಕಮ್ಯೂನಿಷ್ಟ್ ಕುಟುಂಬದ ಹಿನ್ನೆಲೆಯ ಸತೀಶನ್ ಕೆಎಸ್ ಯು (ಕೇರಳ ವಿದ್ಯಾರ್ಥಿ ಸಂಘಟನೆ)ನ ಕಾರ್ಯಕರ್ತನಾಗಿದ್ದು, ಅಸಮಧಾನಕ್ಕೆ ಕಾರಣವಾಗಿತ್ತು. ಇದರ ಪರಿಣಾಮ ಸತೀಶನ್ ಅವರನ್ನು 16ನೇ ವಯಸ್ಸಿನಲ್ಲೇ ಮನೆಯಿಂದ ಹೊರಹಾಕಲಾಗಿತ್ತು. ಅಷ್ಟೇ ಅಲ್ಲ ಪಡಿತರ ಚೀಟಿಯಿಂದಲೂ ಹೆಸರನ್ನು ತೆಗೆದು ಹಾಕಲಾಗಿತ್ತು. ಆದರೆ ಪಾಚೇನಿ ಸತೀಶನ್ ಕಾಂಗ್ರೆಸ್ ನಲ್ಲೇ ಮುಂದುವರಿಯಲು ನಿರ್ಧರಿಸಿದ್ದರು.

ಹೀಗೆ ಕೆಪಿಸಿಸಿ ಕಾರ್ಯದರ್ಶಿಯಾಗಿ, ಕಣ್ಣೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಸೇರಿದಂತೆ ಹಲವಾರು ಹುದ್ದೆ ಪಡೆದಿದ್ದರು. 1996ರಲ್ಲಿ ತಾಲಿಪರಂಬ್ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 2002 ಮತ್ತು 2006ರಲ್ಲಿ ಹಾಗೂ 2016ರಲ್ಲಿ ಕಣ್ಣೂರಿನಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಮೂಲಕ ಒಟ್ಟು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2009ರಲ್ಲಿ ಪಾಲಕ್ಕಾಡ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಜಯಗೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.